ಬೀಳ್ಳೋ ಸ್ಥಿತೀಲಿ ಅಂಗನವಾಡಿ ಕಟ್ಟಡ


Team Udayavani, Apr 12, 2017, 1:15 PM IST

mys7.jpg

ಪಿರಿಯಾಪಟ್ಟಣ: ಸರ್ಕಾರವು ಶಿಕ್ಷಣಕ್ಕೆ ಆದತೆ ನೀಡಿ ಪ್ರತಿ ಮಕ್ಕಳಿಗೂ ಕೂಡ ಕಡ್ಡಾಯ ಶಿಕ್ಷಣ ಜಾರಿಗೊಳಿಸಿ ಶಿಕ್ಷಣಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುತ್ತಿದೆ. ಆದರೆ, ತಾಲೂಕಿನ ಮರಳ ಕಟ್ಟೆಯ ಗಿರಿಜನಹಾಡಿಯ ಮಕ್ಕಳಿಗೆ ಸೂಕ್ತ ಅಂಗನವಾಡಿ ವ್ಯವಸ್ಥೆ ಇಲ್ಲದೆ ವಿದ್ಯಾಭ್ಯಾಸ ದಿಂದ ವಂಚಿತರಾಗುತ್ತಿದ್ದಾರೆ.

ತಾಲೂಕು ಕೇಂದ್ರದಿಂದ 15 ಕಿ.ಮೀ. ದೂರದಲ್ಲಿರುವ ಮರಳುಕಟ್ಟೆ ಹಾಡಿಯಲ್ಲಿ ಗಿರಿಜನರೇ ಹೆಚ್ಚು ವಾಸವಾಗಿದ್ದು ಇಲ್ಲಿ ನೆಪಮಾತ್ರಕ್ಕೆ ಅಂಗನವಾಡಿ ಕೇಂದ್ರವಿದೆ. ಆದರೆ ಯಾವುದೇ ರೀತಿಯ ಮೂಲಭೂತ ಸೌಲಭ್ಯ ಎಂಬುದಿಲ್ಲ. ಇಲ್ಲಿನ ಅಂಗನವಾಡಿ ಕಟ್ಟಡವು ಶಿಥಿಲವಸ್ಥೆ ತಲುಪಿದ್ದು ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂಜರಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಬಿರುಕು ಬಿಟ್ಟಿರುವ ಕಟ್ಟಡ: ಈ ಅಂಗನ ವಾಡಿಯನ್ನು ಸುಮಾರು ವರ್ಷಗಳ ಹಿಂದೆ ನಿರ್ಮಿಸಿದ್ದು ಕಟ್ಟಡ ಶಿಥಿಲವಸ್ಥೆ ತಲುಪಿರುವ ಕಾರಣ ಯಾವ ಕ್ಷಣ ದಲ್ಲಾದರೂ ಚಾವಣಿ ಕುಸಿದು ಬೀಳುವ ಹಂತದಲ್ಲಿದೆ. ಗೋಡೆಗಳು ಬಿರುಕು ಬಿಟ್ಟಿದೆ. ಗೋಡೆಗಳನ್ನು ಕಿಡಿಗೇಡಿಗಳು ಹೊಡೆದು ಕಿಂಡಿಗಳನ್ನುನಿರ್ಮಿಸಿದ್ದಾರೆ.

ಇದರಿಂದಾಗಿ ಹಾವು ಹಲ್ಲಿಗಳ ಕಾಟವೂ ಹೆಚ್ಚಾಗಿದ್ದು ಮಕ್ಕಳ ಬದಲಾಗಿ ಇವುಗಳೇ ಹೆಚ್ಚಾಗು ಅಂಗನವಾಡಿಯಲ್ಲಿ ವಾಸಮಾಡುತ್ತಿವೆ. ಈ ಕಾರಣದಿಂದಾಗಿ ಮಕ್ಕಳು ಅಂಗನವಾಡಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಂಗನವಾಡಿ ಹಳೆಯ ಹೆಂಚು, ಮರಗಳಿಂದ ನಿರ್ಮಿಸಿರುವ ಕಾರಣದಿಂದ ಮಳೆಬಂತೆಂದರೆ ಸಾಕು ಹೆಂಚುಗಳು ತೂರಿಕೊಂಡು ಬೀಳುತ್ತಿದ್ದು ಚಾವಣಿ ಕೂಡ ಬೀಳುವ ಹಂತ ತಲುಪಿದೆ.

ಬಣ್ಣ ಹಚ್ಚದಿರುವುದು: ಅಂಗನವಾಡಿಯ ಪ್ರಾರಂಭವಾದಾಗ ಮಾತ್ರ ಈ ಕಟ್ಟಡಕ್ಕೆ  ಸುಣ್ಣಬಣ್ಣ ಬಳಿದಿದ್ದಿ ಬಿಟ್ಟರೆ ಇದುವರೆವಿಗೂ ಯಾವುದೇ ಬಣ್ಣವನ್ನು ಇಲ್ಲಿನ ಗೋಡೆಗಳು ಕಂಡಿಲ್ಲ.

ಪೌಷ್ಟಿಕ ಆಹಾರದ ಕೊರತೆ: ಅಂಗನ ವಾಡಿಯ ದುಸ್ಥಿತಿ ಕಂಡರೆ ಮಕ್ಕಳಿಗೆ ಸಿಗುವ ಪೌಷ್ಟಿಕ ಆಹಾರವೂ ಕೂಡ ಸಿಗುತ್ತಿಲ್ಲ ವೆಂಬುದಾಗಿದ್ದು ಮಕ್ಕಳು ಆಹಾರದ ಕೊರತೆ ಯಿಂದ ಬಳಲುತ್ತಿದ್ದಾರೆ. ಇದು ತಾಲೂಕಿನ ಗಡಿಗ್ರಾಮವಾದ್ದರಿಂದ ಇದರ ಕಡೆ ಯಾವ ಜನಪ್ರತಿನಿಧಿಗಳಾಗಲಿ ಗಮನಹರಿಸಿಲ್ಲ.

ಅನೈರ್ಮಲ್ಯದ ತಾಂಡವ: ಗ್ರಾಮದಲ್ಲಿ ಸೂಕ್ತವಾದ ಚಂರಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರೆಲ್ಲಾ ಅಂಗನವಾಡಿ ಕೇಂದ್ರದ ಮುಂದೆ ಬಂದು ನಿಲ್ಲುವುದರಿಂದ ತ್ಯಾಜ್ಯಗಳು ಕೊಳೆತು ಗಬ್ಬು ನಾರುತ್ತಿವೆ. ಇದರಿಂದ ಸೊಳ್ಳೆ ನೊಣಗಳ ತಾಣವಾಗಿ ಪರಿಣಮಿಸಿದ್ದು ಸಾಂಕ್ರಾಮಿಕ ರೋಗ ಹರಡಬಹುದೆಂಬ ಭೀತಿಯಲ್ಲಿದ್ದು, ಪ್ರತಿನಿತ್ಯ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುತಿದ್ದಾರೆ.

ಹೀಗೆ ಅನೇಕ ಸಮಸ್ಯೆಗಳ ನಡುವೆ ನೆಪಮಾತ್ರಕ್ಕೆ ಹಾಡಿಯಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು ಇದನ್ನು ಸರಿಪಡಿಸಿ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿ ಹಾಗೂ ಜನಪ್ರತಿ ನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಇಲ್ಲಿನ ಹಾಡಿಯ ಜನರ ಅಳಲು.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿ ಗಳಾಗಲೀ, ಜನಪ್ರತಿನಿಧಿಗಳಾಗಲೀ ಇತ್ತಕಡೆ ಗಮನಹರಿಸಿ ಅಂಗನವಾಡಿಗೆ ಮರುಜೀವ ಕಲ್ಪಿಸುವರೇ? ಕಾದು ನೋಡಬೇಕಾಗಿದೆ.

* ರಾ.ಶ.ವೀರೇಶ್‌ಕುಮಾರ್‌

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.