ಸಹಕಾರ ಸಂಘಗಳು ರೈತರ ಜೀವನಾಡಿ- ಹೆಚ್.ಡಿ.ರಾಜೇಂದ್ರ


Team Udayavani, Dec 23, 2021, 6:52 PM IST

ಸಹಕಾರ ಸಂಘಗಳು ರೈತರ ಜೀವನಾಡಿ- ಹೆಚ್.ಡಿ.ರಾಜೇಂದ್ರ

ಪಿರಿಯಾಪಟ್ಟಣ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಅಗತ್ಯ ಸಾಲ ನೀಡುವ ಮೂಲಕ ರೈತರ ಜೀವನಾಡಿಯಾಗಿವೆ  ಎಂದು ಸಂಘದ ಅಧ್ಯಕ್ಷ ಹೆಚ್.ಡಿ.ರಾಜೇಂದ್ರ ತಿಳಿಸಿದರು.

ತಾಲ್ಲೂಕಿನ ನಾಂದಿನಾಥಪುರ ಗ್ರಾಮದಲ್ಲಿ ಗುರುವಾರ ನಡೆದ 2020-21 ನೇ ಸಾಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

ನಂದಿನಾಥಪುರ ಕೃಷಿ ಪತ್ತಿನ ಸಹಕಾರ ಸಂಘವು 1967 ರಲ್ಲಿ ಪ್ರಾರಂಭವಾಗಿ ರಾಜ್ಯದಲ್ಲಿಯೇ 2 ನೇ ಅತಿ ದೊಡ್ಡ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿ ಪ್ರಸ್ತುತ 3600 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿ 3.68 ಕೋಟಿ ಷೇರು ಬಂಡವಾಳವನ್ನು ಹೊಂದಿದೆ. ಸಾಲವಿತರಣೆ, ಮರುಪಾವತಿ, ಠೇವಣೆ ಸಂಗ್ರಹ, ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟದಲ್ಲಿ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿದೆ. 2020-21 ನೇ ಸಾಲಿನಲ್ಲಿ ರೈತರಿಗೆ 35.93 ಕೋಟಿ ಸಾಲ ನೀಡಲಾಗಿದ್ದು, 19.24 ಲಕ್ಷ ನಿವ್ವಳ ಲಾಭ ಗಳಿಸಿದೆ ಇದಲ್ಲದೆ ಶೇ 90 ರಷ್ಟು ಸಾಲವನ್ನು ವಸೂಲಾತಿ ಮಾಡಲಾಗಿದೆ ಇದರೊಂದಿಗೆ ಕಾಲಕಾಲಕ್ಕೆ ಬೆಳೆಸಾಲ, ಪಿಗ್ಮಿಸಾಲ, ಸೌಧೆಸಾಲ, ಸೇರಿದಂತೆ ಅಲ್ಪಾವಧಿ ಮತ್ತು ಧೀರ್ಘಾವಧಿ ಸಾಲಗಳನ್ನು ನೀಡಲಾಗುತ್ತಿದ್ದು ರೈತರು ಈ ಸಧಾವಾಶವನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಸಂಘದ ಸಿಇಒ ಶಿವಣ್ಣ ಮಾತನಾಡಿ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ರೈತರು ಸಹಕಾರ ಸಂಘಗಳನ್ನೆ ನಂಬಿ ಬದುಕುತ್ತಿದ್ದಾರೆ. ಸರ್ಕಾರ ಕೂಡ ಇವರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಇದನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಬೇಕು, ಈ ಸಹಕಾರ ಸಂಘ ತಾಲ್ಲೂಕಿನಲ್ಲಿಯೇ ಅತ್ಯುತ್ತಮ ನಿವ್ವಳ ಲಾಭ ಹೊಂದಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿ ಷೇರುದಾರರಿಗೆ ಸಹಕಾರಿಯಾಗಿದೆ. ಸಂಘದಿಂದ ಸಾಲ ಪಡೆದುಕೊಂಡ ರೈತರು ಹೈನುಗಾರಿಕೆ ಹಾಗೂ ನೀರಾವರಿ ಸೇರಿದಂತೆ ಇನ್ನಿತರ ಚಟುವಟಿಕೆಗೆ ಹಣ ಬಳಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎನ್.ಇ.ರಾಜು,  ನಿರ್ದೇಶಕರಾದ ಹೆಚ್.ಬಿ.ಗೋವಿಂದೇಗೌಡ, ಪಿ.ವಿ.ಜಲೇಂದ್ರ, ಎಂ.ಎಸ್.ಸ್ವಾಮಿಗೌಡ, ಎಸ್.ನಾಗಪ್ಪ, ಜವರೇಗೌಡ, ಕೃಷ್ಣೇಗೌಡ,  ಪಿ.ಜೆ, ಮಂಜುನಾಥ,  ವೆಂಕಟೇಶ, ಭಾಗ್ಯಸುರೇಶ್, ಎಚ್.ಕೆ.ಜಗದೀಶ್. ಸಿಬ್ಬಂದಿಗಳಾದ ಬಿ.ಬಿ.ಮಹದೇವ್, ಪಿ.ರಾಜಶೇಖರಮೂರ್ತಿ, ಬಿ.ಮಹದೇವಯ್ಯ, ಎಚ್.ಕೆ.ಮಂಜುನಾಥ್, ಎಂ.ವಿ.ರವಿ, ಮುತ್ತುರಾಜ್, ಎಂ.ಕೃಷ್ಣ, ಕೆ.ಎನ್.ಅರುಣ್ ಕುಮಾರ್, ಕೆ.ಎಸ್.ಮಧು, ಎಂ ಶಶಿಧರ, ಎನ್ ಪಿ ಗಣೇಶ್, ಎನ್ ಸಿ ರಾಜಾ, ಡಿ.ಬಸವರಾಜ್, ಮಹೇಶ್, ಪೂಣಚ್ಚ ಸೇರಿದಂತೆ ಸಂಘದ ಸರ್ವ ಸದಸ್ಯರು ಹಾಜರಿದ್ದರು.

 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.