ನಾಗರಹೊಳೆಯಲ್ಲಿ ವಾರ್ಷಿಕ ಹುಲಿ ಗಣತಿ ಪ್ರಾರಂಭ

ಗಣತಿಗೂ ತಟ್ಟಿದ ಕೊರೋನಾ ಬಿಸಿ, ಸ್ವಯಂಸೇವಕರಿಲ್ಲದೆ ಅರಣ್ಯ ಸಿಬ್ಬಂದಿಗಳಿದ ಗಣತಿಕಾರ್ಯ: ಡಿಸಿಎಫ್ ಮಹೇಶ್ ಕುಮಾರ್

Team Udayavani, May 31, 2021, 2:14 PM IST

uttt

ಹುಣಸೂರು:ಕೋವಿಡ್-19ನಿಂದಾಗಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಈ ಬಾರಿಯ ವಾರ್ಷಿಕ ಹುಲಿ ಗಣತಿಯು ಸ್ವಯಂಸೇವಕರಿಲ್ಲದೆ ಅರಣ್ಯ ಸಿಬ್ಬಂದಿಗಳ ಮೂಲಕವೇ ಕ್ಯಾಮರಾ ಟ್ರ್ಯಾಪಿಂಗ್ ಮೂಲಕ ಆರಂಭಗೊಂಡಿದ್ದು. ಇದೀಗ ಟ್ರಾನ್ಸಾಕ್ಟ್ ಲೈನ್ ಆಧಾರಿತ ಸಸ್ಯಹಾರಿ ಪ್ರಾಣಿಗಳು ಹಾಗೂ ಸಸ್ಯ ಪ್ರಭೇಧಗಳ ಗಣತಿ ಕಾರ್ಯ ನಡೆಯುತ್ತಿದೆ.

ನಾಗರಹೊಳೆ ಉದ್ಯಾನದ 8 ವಲಯಗಳನ್ನು ಎರಡು ಬ್ಲಾಕ್‌ಗಳನ್ನಾಗಿ ವಿಂಗಡಿಸಿದ್ದು, ಮೊದಲ ಹಂತದಲ್ಲಿ ಎರಡನೇ ಬ್ಲಾಕ್‌ನ ನಾಗರಹೊಳೆ, ಕಲ್ಲಹಳ್ಳ, ಅಂತರಸಂತೆ, ಡಿ.ಬಿ.ಕುಪ್ಪೆ ವಲಯಗಳಲ್ಲಿ ಕ್ಯಾಮರಾ ಟ್ರ್ಯಾಪಿಂಗ್ ಮೂಲಕ ಹುಲಿ ಗಣತಿ ನಡೆಸಲಾಗಿದೆ. ಭಾನುವಾರದಿಂದ ಆರಂಭವಾಗಿರುವ  ಹುಲಿಯ ಆಹಾರ ಸರಪಳಿಯ ಸಸ್ಯಹಾರಿ ಪ್ರಾಣಿಗಳ ಹಾಗೂ ಸಸ್ಯ ಪ್ರಭೇಧಗಳ ಗಣತಿಕಾರ್ಯವು ಮೂರು ದಿನ ಕಾಲ ನಡೆಯಲಿದೆ.

ಮೇ.1ರಿಂದ ಕ್ಯಾಮರಾ ಟ್ರಾಪಿಂಗ್ ಮೂಲಕ ಗಣತಿ ಕಾರ್ಯ ಆರಂಭಗೊಂಡಿದೆ. ಎ.ಸಿ.ಎಫ್, ಆರ್.ಎಫ್.ಓಗಳು, ಸಿಬ್ಬಂದಿಗಳು ಹಾಗೂ  ಎಪಿಸಿ ವಾಚರ್‍ಸ್ ಸೇರಿದಂತೆ ಸುಮಾರು ೧೫೦ ಸಿಬ್ಬಂದಿಗಳು, ಗಣತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಜೂನ್ ೧ ರಿಂದ ಮೊದಲ ಬ್ಲಾಕ್‌ನಲ್ಲಿ ಗಣತಿ ಆರಂಭಗೊಳ್ಳಲಿದೆ.

ಸಸ್ಯಹಾರಿ ಪ್ರಾಣಿ-ಸಸ್ಯಪ್ರಬೇಧಗಳ ಸಮೀಕ್ಷೆ:

ನಾಲ್ಕು ವಲಯಗಳ ಎಲ್ಲ ಬೀಟ್‌ಗಳಲ್ಲೂ ಟ್ರ್ಯಾನ್ಸಾಕ್ಟ್ ಲೈನ್ ಮೂಲಕ ಸಿಬ್ಬಂದಿಗಳು ಕಾಲ್ನಡಿಗೆಯಲ್ಲಿ ಎರಡು ಕಿ.ಮೀ ಸಂಚರಿಸಿ, ಚದರ ಕಿ.ಮೀ.ಪ್ರದೇಶದಲ್ಲಿ ಹುಲಿಯ ಆಹಾರವಾದ ಚುಕ್ಕಿಜಿಂಕೆ, ಕಾಡೆಮ್ಮೆ, ಕಾಡುಕುರಿ, ಕಡವೆ ಮತ್ತಿತರ ಸಸ್ಯಹಾರಿ ಪ್ರಾಣಿಗಳ ಗಣತಿ ಜೊತೆಗೆ ಸಸ್ಯಪ್ರಭೇಧಗಳ ಸಾಂದ್ರತೆಯನ್ನು ಸಮೀಕ್ಷೆ ಮಾಡಿ,  ಎಕೋಲಾಜಿಕಲ್ ಆಫ್ ಮೂಲಕ ಮಾಹಿತಿ ದಾಖಲಿಸಿಕೊಳ್ಳಲಿದ್ದಾರೆಂದರು.

ರಾಷ್ಟ್ರೀಯ ಹುಲಿ ಗಣತಿಗೆ ಸಿದ್ದತೆ:

ಪ್ರತಿ ನಾಲ್ಕುವರ್ಷಕ್ಕೊಮ್ಮೆ ನಡೆಯುವ  ೫ನೇ ರಾಷ್ಟ್ರೀಯ ಹುಲಿಗಣತಿಯು ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಗಣತಿಯ ನಂತರ ಅಂದರೆ ಬರುವ ಮಾರ್ಚ್ ೨೦೨೨ರೊಳಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾನದಂಡದಂತೆ ೫ನೇ ರಾಷ್ಟ್ರೀಯ ಗಣತಿ ಕಾರ್ಯ ನಡೆಯಲಿದೆ.  ಇದಕ್ಕಾಗಿ ಎಲ್ಲ ಸಿದ್ದತೆ ಕೈಗೊಳ್ಳಲಾಗಿದೆ.

ರಣಹದ್ದುಗಳ ಮಾಹಿತಿಯೂ ಸಮೀಕ್ಷೆಯಲ್ಲಿ ಲಭ್ಯ:

೨೦೧೯-೨೦ರ ವನ್ಯಜೀವಿ ಸಪ್ತಾಹದ ಧ್ಯೆಯವಾಗಿದ್ದ  ರಣಹದ್ದುಗಳ ಸಂರಕ್ಷಣೆ ಕುರಿತ ಯೋಜನೆಯಿಂದಾಗಿ ಈ ಬಾರಿಯ ಹುಲಿ ಗಣತಿ ನಡೆಯುವ ಈ ವೇಳೆ ಸಸ್ಯಹಾರಿ ಪ್ರಾಣಿಗಳು ಹಾಗೂ ಸಸ್ಯ ಪ್ರಭೇಧಗಳ ಸಮೀಕ್ಷೆ ಜೊತೆಗೆ ರಣಹದ್ದುಗಳ ಮಾಹಿತಿಯನ್ನೂ ಸಂಗ್ರಹಿಸಲಾಗುವುದು.

ಜೂ.೧ರಿಂದ ಮೊದಲ ಬ್ಲಾಕ್ ನಲ್ಲೂಗಣತಿ:

ಉದ್ಯಾನದ ಹುಣಸೂರು, ವೀರನಹೊಸಹಳ್ಳಿ, ಆನೆಚೌಕೂರು, ಮೇಟಿಕುಪ್ಪೆ ವಲಯಗಳು  ಮೊದಲ ಬ್ಲಾಕ್‌ಗೆ ಸೇರಿದ್ದು. ಜೂನ್.೧ರಿಂದ ಎರಡನೇ ಹಂತದ ಹುಲಿ ಗಣತಿ ಆರಂಭಗೊಳ್ಳಲಿದ್ದು.   ಗಣತಿಗಾಗಿ ಉದ್ಯಾನದಲ್ಲಿ ೪೫೦ ಕ್ಯಾಮರಾ ಅಳವಡಿಸಲಾಗುವುದು. ಹುಲಿಗಣತಿಯಿಂದ ಉದ್ಯಾನ ನಿರ್ವಹಣೆ ಮಾಡಲು ಸಹಕಾರಿಯಾಗಲಿದೆ.  ( ಡಿ.ಮಹೇಶ್‌ಕುಮಾರ್, ಮುಖ್ಯಸ್ಥರು, ಹುಲಿಯೋಜನೆ, ನಾಗರಹೊಳೆ.)

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.