ಕಾವೇರಿ ನದಿಗೆ ಮತ್ತೊಂದು ಹೊಸ ಸೇತುವೆ


Team Udayavani, May 7, 2018, 2:50 PM IST

m4-kaveri.jpg

ಬನ್ನೂರು: ನನ್ನ ಐದು ವರ್ಷದ ಅವಧಿಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಗ್ರ ಅಭವೃದ್ಧಿ ಮಾಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು. ಪಟ್ಟಣದ ಸಮೀಪದ ಯಾಚೇನಹಳ್ಳಿಯಲ್ಲಿ ಮತಪ್ರಚಾರ ಮಾಡಿದರು.

ಯಾರೂ ನನಗೆ ಹೇಳದೆ ಇದ್ದರೂ, ಎಂ.ಎಂ.ರಸ್ತೆಯನ್ನು ರಾಷ್ಟ್ರೀಯ ರಸ್ತೆಯಾಗಿ ಮಾಡಿದೆ. ಕಾವೇರಿ ನದಿಗೆ ಮತ್ತೊಂದು ಹೊಸ ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದೆ. ಬನ್ನೂರು ಹೆಗ್ಗೆರೆಯನ್ನು ಮಾದರಿ ಕೆರೆಯಾಗಿ ಪರಿವರ್ತಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ರೈತರ ಬವಣೆ ಅರಿತು ಕಾಲುವೆಗಳನ್ನು ಮೇಲ್ದರ್ಜೆಗೇರಿಸಿ ವ್ಯವಸಾಯಕ್ಕೆ ಅನುಕೂಲ ಕಲ್ಪಸಿಕೊಡಲಾಗಿದೆ ಎಂದು ಹೇಳಿದರು. 

ಅಭಿವೃದ್ಧಿ ಹಿನ್ನೆಡೆ: ಬಿಜೆಪಿ ಪಕ್ಷ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾರಣ ಅವರ ಅಧಿಕಾರದಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ 20 ವರ್ಷ ಹಿಂದೆ ಸರಿದಿದೆ. ಹಾಗೆಯೇ ಜೆಡಿಎಸ್‌ ಕೂಡ ಈ ಬಾರಿ ಬಹುಮತ ಪಡೆಯುವುದಿಲ್ಲ. ಕಳೆದ ಬಾರಿ 40 ಶಾಸಕರಿದ್ದು, ಈ ಬಾರಿ 12 ಜನ ಬಿಟ್ಟು 28 ಜನರಿದ್ದಾರೆ. ಅದರಲ್ಲೂ ಅವರೆಲ್ಲರೂ ಈ ಬಾರಿ ಗೆಲುವು ಪಡೆಯುತ್ತಾರೆ ಎನ್ನುವಂತ ಸಂಶಯವಿದೆ ಎಂದರು. 

ಒಗ್ಗಟ್ಟಿನಿಂದ ಕೆಲಸ ಮಾಡಿ: ನಾವೆಲ್ಲರೂ ರಾಜಕೀಯವಾಗಿ ಯೋಚನೆ ಮಾಡಬೇಕು. ಇಲ್ಲಿ ಜಾತಿ, ಧರ್ಮ ಮುಖ್ಯ ಅಲ್ಲ. ಅಭಿವೃದ್ಧಿ ಮುಖ್ಯ. ಎಲ್ಲ ಧರ್ಮೀಯರು ಶಾಂತಿಯುತವಾಗಿ ಬದುಕುವುದು ಮುಖ್ಯ. ಈಗ ಮಾತನಾಡುವ ಜೆಡಿಎಸ್‌ ಮತ್ತು ಬಿಜೆಪಿ ಕಳೆದ ಹತ್ತು ವರ್ಷಗಳಿಂದ ಯಾವುದೆ ಅಭಿವೃದ್ಧಿಯನ್ನು ಮಾಡಿಲ್ಲ. ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಅಭಿವೃದ್ಧಿಯೇ ಗುರಿ ಎಂದು ತಿಳಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ, ಮತ್ತೂಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಮನವಿ ಮಾಡಿದರು.

ಪ್ರಚಾರ ಸಮಿತಿ ಅಧ್ಯಕ್ಷ ವೈ.ಎನ್‌.ಶಂಕರೇಗೌಡ ಮಾತನಾಡಿ, ಪ್ರತಿ ಗ್ರಾಮದಲ್ಲಿನ ಸಮಸ್ಯೆ ಅರಿತು ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಮಾಡಿರುವ ಕೆಲಸವನ್ನು ಯಾರು ಅಲ್ಲಗಳೆಯುವಂತಿಲ್ಲ. ಮಹದೇವಪ್ಪ ಶಾಸಕರಾಗಿ, ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ರಾಜ್ಯದ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿ ರಾಷ್ಟ್ರಮಟ್ಟದಲ್ಲಿ ಉತ್ತಮ ಲೋಕೋಪಯೋಗಿ ಸಚಿವ ಎಂದು ಹೆಸರು ಮಾಡಿರುವುದು ಅವರ ಉತ್ತಮ ಕೆಲಸಕ್ಕೆ ಸಂದ ಗೌರವ ಎಂದರು.

ಈ ವೇಳೆ ಪುರಸಭಾ ಮಾಜಿ ಅಧ್ಯಕ್ಷ ಪದ್ಮನಾಭ್‌, ಮುನಾವರ ಪಾಷಾ, ಅಜೀಜುಲ್ಲಾ, ಸುನಿಲ್‌ಬೋಸ್‌, ಅನಿಲ್‌ಬೋಸ್‌, ಲಕ್ಷ್ಮೀನಾರಾಯಣ್‌, ಗೋಪಾಲ್‌, ಜಿಪಂ ಸದಸ್ಯ ಮಂಜುನಾಥ, ಚಾಮನಹಳ್ಳಿ ತಿಮ್ಮೇಗೌಡ, ಮಾಜಿ ಶಾಸಕ ಎಸ್‌.ಕೃಷ್ಣಪ್ಪ, ಶ್ರೀನಿವಾಸ್‌, ರವೀಂದ್ರ ಕುಮಾರ್‌, ಸಹಕಾರ ಸಂಘದ ಉಪಾಧ್ಯಕ್ಷ ಕುಚೇಲ, ಪುರಸಭಾ ಸದಸ್ಯ ಮೂರ್ತಿ, ಬಸುರಾಜು,ಲೋಕೇಶ್‌, ವೀಣಾ, ಶಿವಮೂರ್ತಿ, ಬೈರವಮೂರ್ತಿ, ಅಶೋಕ್‌, ಎ.ಎನ್‌.ಸ್ವಾಮಿ, ಡಾ.ಮಹದೇವು, ಪುರಸಭಾ ಉಪಾಧ್ಯಕ್ಷ ರಾಮಲಿಂಗೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.