ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಸಮ್ಮತಿ


Team Udayavani, Dec 30, 2020, 1:59 PM IST

ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಸಮ್ಮತಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್‌ ಸಭೆಯಲ್ಲಿ ಸುದೀರ್ಘ‌ ಚರ್ಚೆಯ ಬಳಿಕ ಸುಸ್ಥಿರ ಟ್ರಸ್ಟ್‌ಗೆ 5 ವರ್ಷಗಳ ಕಾಲ ಕಟ್ಟಡ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆ ಹಾಗೂ ನಿರ್ವಹಣೆ ಷರತ್ತುಬದ್ಧ ಅನುಮತಿ ನೀಡಲು ಒಪ್ಪಿಗೆ ನೀಡಲಾಯಿತು.

ಇದಕ್ಕೂ ಮುನ್ನ ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್‌ ಈ ಬಗ್ಗೆ ಮಾಹಿತಿ ನೀಡಿ, ಕಳೆದ ಕೌನ್ಸಿಲ್‌ ಸಭೆಯ ನಂತರ ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ಅದನ್ನು ನೋಡಿ ಪ್ರಸ್ತಾವನೆ ಸಲ್ಲಿಸಿರುವ ನಾಲ್ಕು ಸಂಸ್ಥೆಗಳಲ್ಲಿ ಯಾವ ಸಂಸ್ಥೆಗೂ ಕಟ್ಟಡ ತ್ಯಾಜ್ಯ ಸಂಸ್ಕರಣೆಯಲ್ಲಿ ಅನುಭವ ಇಲ್ಲ ಎಂದು ಮಾಹಿತಿ ನೀಡಿದರು.

ಈ ಬಗ್ಗೆ ಮಾತನಾಡಿದ ಜೆಡಿಎಸ್‌ ಸದಸ್ಯರಾದ ಪ್ರೇಮ ಶಂಕರೇಗೌಡ ಹಾಗೂ ಎಸ್‌ಬಿಎಂ ಮಂಜು, ನಿಯಮದ ಪ್ರಕಾರ ಸುಸ್ಥಿರ ಟ್ರಸ್ಟ್‌ ಟೆಂಡರ್‌ನಲ್ಲಿಭಾಗವಹಿಸಬೇಕಿತ್ತು. ಈಗ ಇದ್ದಕ್ಕಿ ದ್ದಂತೆ ಅವರಿಗೆ ಜವಾಬ್ದಾರಿ ವಹಿಸುವುದು ಹೇಗೆ ಎಂದು ಪ್ರಶ್ನಿಸಿದರು. ಟೆಂಡರ್‌ ಇಲ್ಲದೆ ಅವರಿಗೆ ಜವಾಬ್ದಾರಿ ನೀಡಲು ಹೇಗೆಸಾಧ್ಯ? ಎಂದು ಪ್ರಶ್ನಿಸಿದರು.ಈ ವೇಳೆ ಸಂಸದ ಪ್ರತಾಪ್‌ ಸಿಂಹ ಸಭೆಗೆ ಪ್ರವೇಶಿಸಿ ಮಾತನಾಡಿ, ಸುಸ್ಥಿರ ಟ್ರಸ್ಟ್‌ನವರಿಗೆ ಕೆಲಕಾಲ ಷರತ್ತುಬದ್ಧ ಅನುಮತಿ ನೀಡೋಣ. ಬೇರೆ ಸಂಸ್ಥೆಗಳು ಪಾಲಿಕೆಗೆ ಈಮೂಲಕ ಆದಾಯ ಬರುವ ಯೋಜನೆಗಳನ್ನು ತಂದರೆ ಈ ಬಗ್ಗೆ ಯೋಚಿಸೋಣ. ಸದ್ಯಕ್ಕೆ ಈ ಯೋಜನೆಗೆ ಅನು  ಮೋದನೆ ನೀಡಿ ಎಂದು ಕೋರಿದರು. ನಂತರ ಒಪ್ಪಿಗೆದೊರೆಯಿತು. ನಗರದ ರೆವಿನ್ಯೂ ಬಡಾವಣೆಗಳಿಗೆ ಖಾತೆ ಮಾಡಿಕೊಡುವ ಸಂಬಂಧ ಕ್ರಮ ಕೈಗೊಳ್ಳಲು ಸಚಿವ ಭೈರತಿ ಬಸವರಾಜು ಅವರಲ್ಲಿ ಮನವಿ ಮಾಡಿ ದ್ದೇನೆ. ಈ ಬಗ್ಗೆ ಕ್ಯಾಬಿನೆಟ್‌ನಲ್ಲಿ ತೀರ್ಮಾನ ವಾಗುತ್ತದೆ.ಯುಜಿ ಕೇಬಲ್‌ ಕಾಮಗಾರಿ ಸಂಬಂಧ ಸೆಸ್ಕ್ ಅವರೊಂದಿಗೆ ಸಭೆ ಮಾಡೋಣ, ಮೈಸೂರನ್ನು ಸ್ಮಾರ್ಟ್‌ ಸಿಟಿ ಪಟ್ಟಿಗೆ ಸೇರಿ ಸಲು ಮನವಿ ಮಾಡುತ್ತೇನೆ. ಮುಂದಿನ ಅಧಿವೇಶನದಲ್ಲಿ ಅಗತ್ಯ ವಿಚಾರಗಳನ್ನು ಪ್ರಸ್ತಾಪಿಸುತ್ತೇನೆ ಎಂದು ಸಂಸದರು ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು.

ವಿದ್ಯಾರಣ್ಯಪುರಂನಲ್ಲಿ ಕಸ ಸಂಸ್ಕರಣಾ ಘಟಕ ಸ್ಥಾಪನೆಯ ಸಂಬಂಧ ಆದಷ್ಟು ಬೇಗ ಕೌನ್ಸಿಲ್‌ ಸಭೆ ಯಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಿ. ಇದರಿಂದಾಗಿ ಸುತ್ತ  ಮುತ್ತಲಿನ ಜನರಿಗೆ ಆಗುತ್ತಿರುವ ಕಿರಿಕಿರಿ ತಪ್ಪುತ್ತದೆ. ಜೊತೆಗೆ ನಗರದ ಸ್ವಚ್ಛತೆ ಯಲ್ಲಿ ಇದು ಪ್ರಮುಖ ಪಾತ್ರ ವಹಿಸು ತ್ತದೆ ಎಂದು ಪ್ರತಾಪ್‌ ಸಿಂಹ ಮನವಿ ಮಾಡಿದರು. ತಮ್ಮ ಸ್ವಂತ ಉಪಯೋಗಕ್ಕೆ ಅನಧಿಕೃತವಾಗಿ ರಸ್ತೆ ಅಗೆಯುವವರಿಗೆ ದಂಡ ವಿಧಿ ಸಲು ನಿರ್ಧರಿಸಲಾಗಿದೆ. ಇದೇ ರೀತಿ ರಸ್ತೆಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳನ್ನು ಹಾಕು  ವವರಿಗೂ ದಂಡ ವಿಧಿಸಬೇಕು. ಇದರಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ಯಾಗುತ್ತಿದೆ ಎಂದು ಬಿ.ವಿ.ಮಂಜು  ನಾಥ್‌ ಅಭಿಪ್ರಾಯಪಟ್ಟರು.

ಸಭೆಯಲ್ಲಿ ಉಪಮಹಾಪೌರರಾದ ಶ್ರೀಧರ್‌, ವಿರೋಧ ಪಕ್ಷದ ನಾಯಕಿ ಪ್ರೇಮಾ ಶಂಕರೇಗೌಡ, ಆಡಳಿತ ಪಕ್ಷದ ನಾಯಕ ಸುಬ್ಬಯ್ಯ, ನಗರಪಾಲಿಕೆ ಸದಸ್ಯರು, ಆಯುಕ್ತ ಗುರುದತ್ತ ಹೆಗಡೆ, ಹೆಚ್ಚುವ‌ರಿ ಆಯುಕ್ತ ಶಶಿಕುಮಾರ್‌, ನಗರ ಪಾಲಿಕೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.