ಮರದ ಅಂಬಾರಿ ಹೊತ್ತು ಅರ್ಜುನ ತಾಲೀಮು


Team Udayavani, Sep 19, 2017, 12:45 PM IST

mys1.jpg

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಲ್ಲಿ 750 ಕೆ.ಜಿ.ತೂಕದ ಚಿನ್ನದ ಅಂಬಾರಿ ಹೊತ್ತು ಲಕ್ಷಾಂತರ ಜನರ ಗೌಜು-ಗದ್ದಲದ ನಡುವೆ ಗಜಗಾಂಭೀರ್ಯದಿಂದ ಸಾಗುವ ಅರ್ಜುನನಿಗೆ ಸೋಮವಾರ ಮರದ ಅಂಬಾರಿ ಹೊರುವ ತಾಲೀಮು ಆರಂಭಿಸಲಾಯಿತು.

ಆ.17 ಮತ್ತು 31ರಂದು 2 ತಂಡಗಳಲ್ಲಿ ಅರಮನೆ ಆವರಣ ಪ್ರವೇಶಿಸಿರುವ ಈ ಬಾರಿಯ ದಸರಾ ಗಜಪಡೆಯ 15 ಆನೆಗಳನ್ನು ಮೊದಲ 20 ದಿನಗಳ ಕಾಲ ಯಾವುದೇ ಭಾರ ಹೇರದೆ ಬೆಳಗ್ಗೆ ಮತ್ತು ಸಂಜೆ ವೇಳೆ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ನಡೆಸಲಾಗುತ್ತಿತ್ತು. ನಂತರ 350 ಕೆ.ಜಿ ತೂಕದಿಂದ ಆರಂಭಿಸಿ ಹಂತ ಹಂತವಾಗಿ 50 ಕೆಜಿ ತೂಕ ಹೆಚ್ಚಿಸುತ್ತಾ 750 ಕೆಜಿವರೆಗೆ ಮರಳು ಮೂಟೆ ಹೊರಿಸಿ ತಾಲೀಮು ನಡೆಸಲಾಯಿತು. 

ಇನ್ನು ಜಂಬೂ ಸವಾರಿಗೆ 12 ದಿನ ಮಾತ್ರ ಬಾಕಿ ಇರುವುದರಿಂದ ಸೋಮವಾರ 350 ಕೆ.ಜಿ ತೂಕದ ಮರದ ಅಂಬಾರಿ ಹಾಗೂ 400 ಕೆಜಿ ತೂಕದ ಮರಳು ಮೂಟೆ ಹೊರಿಸಿ ಅಂಬಾರಿ ಹೊರುವ ತಾಲೀಮು ನಡೆಸಲಾಯಿತು. ಅರಮನೆ ಆವರಣದಲ್ಲಿ ಅರ್ಜುನನ ಬೆನ್ನಮೇಲೆ ಮರದ ಅಂಬಾರಿ ಕಟ್ಟಿದ ನಂತರ ಜಂಬೂಸವಾರಿ ದಿನ ಮುಖ್ಯಮಂತ್ರಿಯವರು ಪುಷ್ಪಾರ್ಚನೆ ಮಾಡುವ ಜಾಗಕ್ಕೆ ಆನೆಯನ್ನು ಕರೆತಂದು ನಿಲ್ಲಿಸಿ, ಅಲ್ಲಿಂದ ಬಲರಾಮ ದ್ವಾರದ ಮೂಲಕ ಹೊರಬಂದು ಬನ್ನಿಮಂಟಪದವರೆಗೆ ಅರ್ಜುನ ಮರದ ಅಂಬಾರಿ ಹೊರುವ ತಾಲೀಮನ್ನು ಯಶಸ್ವಿಯಾಗಿ ಪೂರೈಸಿದ.

ಕುಮ್ಕಿ ಆನೆಗಳಾದ ವರಲಕ್ಷಿ ಮತ್ತು ವಿಜಯ ಆನೆಗಳು ಅರ್ಜುನನ ಅಕ್ಕ-ಪಕ್ಕದಲ್ಲಿ ಸಾಗಿದರೆ, ಇನ್ನುಳಿದ 12 ಆನೆಗಳು ಅರ್ಜುನನ್ನು ಹಿಂಬಾಲಿಸಿದವು. ಅರ್ಜುನ 750 ಕೆ.ಜಿ ಹೊರುವ ಜತೆಗೆ ಮರದ ಅಂಬಾರಿ ಹೊರುವ ತಾಲೀಮನ್ನು ಯಶಸ್ವಿಯಾಗಿ ಪೂರೈಸಿದ್ದಾನೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.