ಬೇಡಿಕೆ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಆಗ್ರಹ


Team Udayavani, Jul 11, 2019, 3:00 AM IST

bedike

ಮೈಸೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ಗೌರವ ಧನ 12 ಸಾವಿರ ರೂ. ನಿಗದಿಪಡಿಸಬೇಕು, ಆಶಾ ಸಾಫ್ಟ್ ಅಥವಾ ಆರ್‌ಸಿಎಚ್‌ ಪೋರ್ಟಲ್‌ಗೆ ಆಶಾ ಪ್ರೋತ್ಸಾಹಧನದ ಜೋಡಣೆ ರದ್ದುಪಡಿಸಿ, ಬಾಕಿ ಉಳಿಸಿಕೊಂಡಿರುವ ಗೌರವಧನ-ಪ್ರೋತ್ಸಾಹಧನವನ್ನು ಕೂಡಲೇ ಒಂದೇ ಬಾರಿಗೆ ನೀಡಿ ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಆಶ್ರಯದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಕಳೆದ 9-10 ತಿಂಗಳಿಂದ ಬಾಕಿಯಿರುವ ಪ್ರೋತ್ಸಾಹಧನವನ್ನು ಒಂದು ಸಾವಿರ ಜನಸಂಖ್ಯೆಗೆ ಕಾರ್ಯನಿರ್ವಹಿಸುವ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 3 ಸಾವಿರ ರೂ. ನೀಡಬೇಕು. ಇದನ್ನು ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಬೇಕು. ಅಥವಾ 9 ತಿಂಗಳಲ್ಲಿ ಪ್ರತಿ ಆಶಾ ಮಾಡಿದ ಮ್ಯಾನ್ಯುವಲ್‌ ವರದಿ ಸಂಗ್ರಹಿಸಿ ಪ್ರೋತ್ಸಾಹಧನವನ್ನು ಪಾವತಿ ಮಾಡಬೇಕು. ಒಂದೇ ಬಾರಿಗೆ ಪ್ರೋತ್ಸಾಹಧನ ನೀಡಬೇಕು.

ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ ಆಶಾಗಳ ಮಾರಣಾಂತಿಕ ಕಾಯಿಲೆಗೆ ಚಿಕಿತ್ಸೆ ಮತ್ತು ಮರಣ ಹೊಂದಿದಲ್ಲಿ ಆಶಾ ಕುಟುಂಬಕ್ಕೆ ಪರಿಹಾರ ಒದಗಿಸಿ ಎಂದು ಆಗ್ರಹಿಸಿದರು. ಕಳೆದ 5 ವರ್ಷದಿಂದ ಅಪಘಾತಕ್ಕೀಡಾದ ಆಶಾಳಿಗೆ ಮತ್ತು ಮರಣ ಹೊಂದಿದ ಆಶಾ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. ನಿವೃತ್ತಿ ಹೊಂದುವ ಆಶಾಗಳಿಗೆ ಪಿಂಚಣಿ ನೀಡಬೇಕು. ನಿವೃತ್ತಿ ಪರಿಹಾರ ನೀಡಬೇಕು.

ಗುಡ್ಡಗಾಡು, ಕಾಡು ಪ್ರದೇಶದ ಆಶಾಗಳಿಗೆ ವಿಶೇಷ ಭತ್ಯೆ, ಆಶಾ ಕಾರ್ಯಕರ್ತೆಯರಿಗೆ ಹೆರಿಗೆ ರಜೆ ನೀಡಿ, ರಜೆಯಲ್ಲಿ ದೆಹಲಿ ಮಾದರಿಯಲ್ಲಿ ಮಾಸಿಕ ಗೌರವಧನ ನೀಡಿ, ಪ್ರತೀ ದಿನ ಸರ್ವೆ, ಜಾಥಾ ಅಥವಾ ಜಿಲ್ಲಾ, ತಾಲೂಕು ಕೇಂದ್ರದ ಸಭೆಗಳಿಗೆ 300 ರೂ. ನಿಗದಿಪಡಿಸಿ, ಅಂದೇ ಆ ದಿನದ ದಿನಭತ್ಯೆ, ಪ್ರಯಾಣ ಭತ್ಯೆ ನೀಡಿರಿ, ಪ್ರತಿ ತಿಂಗಳ ವೇತನವನ್ನು ನಿಗದಿತ ದಿನಾಂಕದೊಳಗೆ ಬಿಡುಗಡೆ ಮಾಡಿ, ಯಾವ ತಿಂಗಳ ವೇತನೆ ಬಿಡುಗಡೆಯಾಗುತ್ತದೋ ಆ ತಿಂಗಳ ವೇತನವೆಂದು ಆಶಾ ಪಾಸ್‌ಬುಕ್‌ನಲ್ಲಿ ನಮೂದಿಸಲು ಕ್ರಮಕೈಗೊಳ್ಳಬೇಕು.

ಕೇಂದ್ರದ ಮಾರ್ಗಸೂಚಿಯಂತೆ ನಗರ ಆಶಾಗಳಿಗೆ 2 ರಿಂದ 2500 ಜನಸಂಖ್ಯೆಗೆ ಮಾತ್ರ ಕಾರ್ಯನಿರ್ವಹಿಸಲು ಕ್ರಮ, 10 ರಿಂದ 20 ಆಶಾ ಕಾರ್ಯಕರ್ತೆಯರಿಗೆ ಒಬ್ಬರಂತೆ ಆಶಾ ಸುಗಮಗಾರರನ್ನು ನೇಮಿಸಿ, ಆಶಾ ಕೆಲಸದಿಂದ ಬೇರ್ಪಡಿಸಿ, ಮಾಸಿಕ ವೇತನ 12 ಸಾವಿರ ರೂ. ನಿಗದಿಪಡಿಸಬೇಕು. ಟಿಎ ನಿಗದಿಮಾಡಿ ಇವರಿಗೆ ನೇಮಕಾತಿ ಆದೇಶ ನೀಡಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘದ ಜಿಲ್ಲಾ ಸಲಹೆಗಾರರಾದ ಸಂಧ್ಯಾ ಪಿ.ಎಸ್‌., ಜಿಲ್ಲಾಧ್ಯಕ್ಷೆ ಶುಭಮಂಗಳ, ನಗರ ಅಧ್ಯಕ್ಷೆ ಸೀಮಾ, ಕಾರ್ಯದರ್ಶಿ ಸುನೀತಾ, ಮಂಜುಳಾ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.