ಅಭಿವೃದ್ಧಿ ಕೆಲಸ ಮುಂದಿಟ್ಟುಕೊಂಡು ಮತ ಕೇಳಿ
Team Udayavani, Aug 27, 2018, 11:51 AM IST
ತಿ.ನರಸೀಪುರ: ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಹಾಗೂ ಸಚಿವರಾಗಿದ್ದ ಡಾ.ಎಚ್.ಸಿ.ಮಹದೇವಪ್ಪ ಅವರಿಬ್ಬರು ನರಸೀಪುರದಲ್ಲಿ ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಸಂಸದ ಆರ್.ಧ್ರುವನಾರಾಯಣ ಹೇಳಿದರು.
ಪಟ್ಟಣದ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಪುರಸಭೆ ಚುನಾವಣೆಯ ಅಭ್ಯರ್ಥಿಗಳು, ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿ, ಇಂದಿನ ಸರ್ಕಾರದ ಅಧಿಕಾರದ ಅವಧಿಯಲ್ಲಿಯೇ ತಿ.ನರಸೀಪುರ ಪಪಂನಲ್ಲಿ ಎರಡು ಗ್ರಾಪಂಗಳನ್ನು ವಿಲೀನಗೊಳಿಸಿ ಪುರಸಭೆಯಾಗಿ ಮೇಲ್ದಜೇìಗೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪುರಸಭೆಯ 23 ವಾರ್ಡುಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬಂಡಾಯ ಅಭ್ಯರ್ಥಿಗಳನ್ನು ಮನವೊಲಿಸಿ ಅಧಿಕೃತ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಆರ್.ಧ್ರುವನಾರಾಯಣ ಸಲಹೆ ನೀಡಿದರು.
ವಸತಿ ಯೋಜನೆ ಜಾಗೃತ ಸಮಿತಿಯ ಮಾಜಿ ಅಧ್ಯಕ್ಷ ಸುನೀಲ್ ಬೋಸ್ ಮಾತನಾಡಿ, ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಪಡೆದುಕೊಂಡು ಜನಮನ್ನಣೆ ಇರುವ ಅಭ್ಯರ್ಥಿಗಳನ್ನು ಪುರಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲಾಗಿದೆ. ಬಂಡಾಯ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದು ಅಧಿಕೃತ ಅಭ್ಯರ್ಥಿ ಗೆಲುವಿಗೆ ಸಾಥ್ ನೀಡಿದರೆ ಮುಂದಿನ ದಿನಗಳಲ್ಲಿ ಅವಕಾಶ ಸಿಗುತ್ತವೆ ಎಂದರು.
ವರುಣ ಶಾಸಕ ಡಾ.ಎಸ್.ಯತೀಂದ್ರ ಮಾತನಾಡಿ, ಇಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಿ.ನರಸೀಪುರಕ್ಕೆ ಬರೋಬ್ಬರಿ 70 ಕೋಟಿ ರೂಗಳ ವಿಶೇಷ ಅನುದಾನದಲ್ಲಿ ವಿವಿಧ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಮಾತನಾಡಿದರು. ನಂತರ ನಾಯಕ ಕಾಲೋನಿಯಲ್ಲಿ 11ನೇ ವಾರ್ಡಿನ ಅಭ್ಯರ್ಥಿ ಟಿ.ಎಂ.ನಂಜುಂಡಸ್ವಾಮಿ ಮತ್ತು 19ನೇ ವಾರ್ಡಿನ ಅಭ್ಯರ್ಥಿ ಜಾnನೇಶ್ವರಿ ಅವರ ಪರ ಆರ್.ಧ್ರುವನಾರಾಯಣ, ಸುನೀಲ್ ಬೋಸ್ ಹಾಗೂ ಡಾ.ಎಸ್.ಯತೀಂದ್ರ ಅವರು ಜಂಟಿಯಾಗಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.
ಕೆಪಿಸಿಸಿ ಪ.ಪಂಗಡ ಭಾಗದ ಉಪಾಧ್ಯಕ್ಷ ಹೊನ್ನನಾಯಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ಜಯಕುಮಾರ್, ಜಿ.ಪಂ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಂ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ವಜ್ರೆàಗೌಡ, ನಿರ್ದೇಶಕ ಮಹದೇವಣ್ಣ, ಜಿ.ಪಂ ಸದಸ್ಯ ಮಂಜುನಾಥನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮುದ್ದೇಗೌಡ, ಕೆಪಿಸಿಸಿ ಸದಸ್ಯ ಧನಂಜಯಗೌಡ, ಹಿರಿಯ ಮುಖಂಡ ಪಿ.ಸ್ವಾಮಿನಾಥ್ಗೌಡ, ತಾ.ಪಂ ಮಾಜಿ ಅಧ್ಯಕ್ಷ ತುಂಬಲ ಅಂದಾನಿ, ಮಾಜಿ ಉಪಾಧ್ಯಕ್ಷ ಬಿ.ಮರಯ್ಯ, ಅಭ್ಯರ್ಥಿಗಳಾದ ಪುಟ್ಟು, ಏ.ಜೆ.ವೆಂಕಟೇಶ್, ಪಿ.ಪುಟ್ಟರಾಜು, ಬಾದಾಮಿ ಮಂಜು ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ