ಸಹಕಾರ ಬ್ಯಾಂಕ್‌ ಸ್ಥಾಪನೆಗೆ ಸಹಾಯ


Team Udayavani, Jan 6, 2020, 1:10 PM IST

sahakara

ಕೆ.ಆರ್‌.ನಗರ: ತಾಲೂಕು ನಾಯಕರ ಸಂಘಟನೆಗಳ ವತಿಯಿಂದ ಸಹಕಾರ ಬ್ಯಾಂಕು ಸ್ಥಾಪನೆಗೆ ಮುಂದಾದರೆ, ಅದಕ್ಕೆ ಅನುಮತಿ ಹಾಗೂ ಎಲ್ಲಾ  ರೀತಿಯ ಸಹಕಾರ ನೀಡಲಾಗು ವುದು ಎಂದು ಎಚ್‌.ಡಿ.ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಭರವಸೆ ನೀಡಿದರು. ಪಟ್ಟಣದ ವಾಲ್ಮೀಕಿ ನಾಯಕರ  ಸಮು ದಾಯ ಭವನದಲ್ಲಿ ತಾಲೂಕು ನಾಯಕರ ಸಂಘ ಮತ್ತು ತಾಲೂಕು ನಾಯಕರ ಕ್ಷೇಮಾ ಭಿವೃದ್ಧಿ ಸಂಘಗಳ ಆಶ್ರಯದಲ್ಲಿ ಭಾನುವಾರ ನಡೆದ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಮತ್ತು ದಿನದರ್ಶಿಕೆ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಂಘಟನೆ ಹೆಸರಲ್ಲಿ ರಾಜಕಾರಣ ಬೇಡ: ಸಮುದಾಯದ ಹೆಸರಿನಲ್ಲಿ ವಿನಾಯಿತಿ ಪಡೆದು ನೌಕರಿ ಪಡೆದಿರುವವರು ಬಡ ವಿದ್ಯಾರ್ಥಿಗಳಿಗೆ ಸಹಕಾರ  ನೀಡಬೇಕು,. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ ಗಳಲ್ಲಿ ನಮ್ಮ ತಂದೆ ಚಿಕ್ಕಮಾದು ಶಾಸಕರಾಗಿದ್ದ ಅವಧಿಯಲ್ಲಿ ಜಾತಿ ಸಂಘಟನೆ  ಉತ್ತಮವಾಗಿ ಮಾಡಿದ್ದರು. ಅದನ್ನು ರಾಜ್ಯಾದ್ಯಂತ ವಿಸ್ತರಿಸಿ, ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೊಂದಲು ರಾಜನಹಳ್ಳಿ ವಾಲ್ಮೀಕಿ  ಪೀಠದ ಪ್ರಸನ್ನಾನಂದಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಜಾತಿ ಸಂಘಟನೆ ವಿಚಾರದಲ್ಲಿ  ಯಾರೂ ರಾಜಕಾರಣ ಮಾಡ ಬಾರದು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳಿಗೆ ಕಲಿಸುವ ಗುರುಗಳ ಮೇಲೆ ಗೌರವ ಮತ್ತು ಮುಂದಿನ  ಗುರಿಯ ಸ್ಪಷ್ಟ ಖಚಿತತೆಯಿರಬೇಕು. ಎಲ್ಲರೂ ಸದಾ ಪೋಷಕರು ಮತ್ತು ಗುರುಗಳಿಗೆ ಉತ್ತಮ ಗೌರವ ತರುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.  ಎಲ್ಲ ರೀತಿಯ ಸಹಕಾರ ನೀಡುವೆ: ಮುಖ್ಯ ಅತಿಥಿ ಜಿಪಂ ಸದಸ್ಯ ಡಿ.ರವಿಶಂಕರ್‌ ಮಾತ ನಾಡಿ, ಪ್ರತಿಭಾ ಪುರಸ್ಕಾರ  ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸಲು ಕಾರಣವಾಗಲಿದೆ. ತಾಲೂಕು ನಾಯಕರ ಸಂಘದವರು ಕಳೆದ 12 ವರ್ಷ  ಗಳಿಂದ ಈ ಕಾರ್ಯಕ್ರಮವನ್ನು ನಿರಂತರವಾಗಿ ಮಾಡುತ್ತಿರುವುದು ಇತರರಿಗೆ ಮಾದರಿಯಾದ ಕಾರ್ಯವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಮುದಾಯ ಭವನ ನಿರ್ಮಿಸಬೇಕು: ಸಮುದಾಯದ ಸರ್ವರೂ ಮತ್ತು ಇನ್ನಿತರ ಎಲ್ಲಾ ಸಮಾಜದ ಚುನಾಯಿತರನ್ನು ವಿಶ್ವಾಸಕ್ಕೆ ತೆಗೆದುಕೊಂಡು  ಉತ್ತಮ ಸಮುದಾಯ ಭವನ ನಿರ್ಮಿಸಬೇಕು. ಜತೆಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಇತರ ಸಮಾಜಮುಖೀ ಕೆಲಸಗಳನ್ನು ನಡೆಸುತ್ತಿರುವ  ಸಂಘದವರಿಗೆ ನಾನು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಎಸ್‌ ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರಸಲಾಯಿತು. ನಿವೃತ್ತ ನೌಕರರು ಮತ್ತು  ಸಾಧಕರನ್ನು ಸನ್ಮಾನಿಸಲಾಯಿತು. ನೂತನ ವರ್ಷದ ದಿನದರ್ಶಿಕೆಯನ್ನು ಬಿಡುಗಡೆ ಮಾಡಲಾಯಿತು. ತಾಲೂಕು ನಾಯಕರ ಸಂಘದ ಅಧ್ಯಕ್ಷ ಟಿ.ಎಸ್‌. ನರಸಿಂಹನಾಯಕ ಅಧ್ಯಕ್ಷತೆ ವಹಿಸಿ ದ್ದರು. ಮೈಸೂರಿನ ಬಿಜೆಪಿ ಮುಖಂಡ ಅಪ್ಪಣ್ಣ, ತಹಶೀಲ್ದಾರ್‌ ಎಂ.ಮಂಜುಳಾ, ಪುರಸಭೆ ಸದಸ್ಯ  ಡಿ.ಶಿವಕುಮಾರ್‌ ಮಾತನಾಡಿದರು.

ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಕೆ.ಸಿದ್ದೇಶ್ವರಪ್ರಸಾದ್‌, ಕಾರ್ಯದರ್ಶಿ  ಬಿ.ಎಸ್‌.ಕಿರಣ್‌ಕುಮಾರ್‌, ನಿರ್ದೇಶಕರಾದ ಸೋಮಶೇಖರ್‌, ದಾಸಪ್ಪ, ತುಳಸಿರಾಮನಾಯಕ, ನಾಯಕರ ಸಂಘದ  ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರಾಜು, ಗೌರವಾಧ್ಯಕ್ಷ ಎ.ಟಿ.ಶಿವಣ್ಣ, ಕಾರ್ಯದರ್ಶಿ ಎಸ್‌.ಪಿ.ಪರಮೇಶ್‌, ಖಜಾಂಚಿ ಮಹದೇವ ನಾಯಕ, ನಿರ್ದೇಶಕರಾದ ಚಿಕ್ಕನಾಯಕ,  ಬೆಟ್ಟನಾಯಕ, ನಾಗರಾಜ ನಾಯಕ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್‌.ಸಿ. ಕುಮಾರ್‌ ಮತ್ತಿತರರು ಕಾರ್ಯಕ್ರಮದಲ್ಲಿ  ಹಾಜರಿದ್ದರು.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.