ಮತದಾರರಿಗೆ ಆಮಿಷವೊಡ್ಡುವ ರಾಜಕಾರಣಿಗಳ ದೂರವಿಡಿ


Team Udayavani, Feb 23, 2018, 1:20 PM IST

m5-matadara.jpg

ಪಿರಿಯಾಪಟ್ಟಣ: ಚುನಾವಣಾ ಸಮಯದಲ್ಲಿ ಮತದಾರರಿಗೆ ಆಸೆ-ಆಮಿಷಗಳನ್ನೊಡುವ ರಾಜಕಾರಣಿಗಳನ್ನು ಅಧಿಕಾರದಿಂದ ದೂರವಿಡಬೇಕೆಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ತಾಲೂಕಿನ ಪಂಚವಳ್ಳಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ರಾಜಕಾರಣದಲ್ಲಿ ಬದಲಾವಣೆಯಾಗಬೇಕಿದೆ, ಮತದಾರರಿಗೆ ಹಣ ನೀಡಿ ಆಣೆ-ಪ್ರಮಾಣಗಳನ್ನು ಮಾಡಿಸಿ ದೇವರ ಹೆಸರಿನಲ್ಲಿ ರಾಜಕೀಯ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕು. ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಶಾಸಕರಿಲ್ಲದಿದ್ದರು ಸಹ ಕೇಂದ್ರದ ಸಂಸದ ನಿಧಿಯ ಅನುದಾನಗಳನ್ನು ತಂದು ಎಲ್ಲಾ 11 ವಿಧಾನಸಭಾ ಕ್ಷೇತ್ರಗಳಿಗೂ ಸಮಾನಾಗಿ ನೀಡಿದ್ದೇನೆ.

ಕೇವಲ ಮತ ನೀಡಿದ ಕ್ಷೇತ್ರಗಳಿಗೆ ಅನುದಾನ ನೀಡಿ ಮತ ನೀಡದ ಕ್ಷೇತ್ರಗಳನ್ನು ನಿರ್ಲಕ್ಷ್ಯ ಮಾಡುವ ಅಧಿಕಾರ ದುರಾಸೆ ನನಗಿಲ್ಲ.  ಜಿಲ್ಲೆಯ ಹೊಗೆಸೊಪ್ಪು ಬೆಳೆಗಾರರಿಗೆ ಸರಾಸರಿ ಉತ್ತಮ ಬೆಲೆ ನೀಡಿಕೆ, ಸಕಾಲಕ್ಕೆ ಗೊಬ್ಬರ ವಿತರಣೆ, ಮೈಸೂರಿನಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಸ್ಥಾಪನೆ, ಮೊದಲ ಮೇಲ್ಸೆತುವೆ ನಿರ್ಮಾಣ,

ರಿಂಗ್‌ ರಸ್ತೆ ಅಭಿವೃದ್ಧಿ ಸೇರಿದಂತೆ ಮೈಸೂರಿಗೆ ಪ್ರಧಾನ ಮಂತ್ರಿ ಅವರನ್ನು ಕರೆಸಿ ಹೆಚ್ಚುವರಿ ರೈಲು ಸೇವೆಗೆ ಚಾಲನೆ, ರೈಲ್ವೆ ಟರ್ಮಿನಲ್‌ ನಿರ್ಮಾಣ, ಬೆಂಗಳೂರು-ಮೈಸೂರು ರಸ್ತೆ ಮೇಲœರ್ಜೆಗೇರಿಸುವ ಯೋಜನೆಗಳಿಗೆ ಚಾಲನೆ ನೀಡಿದಂತ ಕೆಲಸಗಳನ್ನು ಮಾಡಿದ್ದೇನೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ತಾಲೂಕು ಬಿಜೆಪಿ ಮುಖಂಡ ಹೆಚ್‌.ಡಿ.ಗಣೇಶ್‌ ಮಾತನಾಡಿ, ಕೇಂದ್ರ ಸರ್ಕಾರ ಅನುದಾನಗಳಿಗೆ ರಾಜ್ಯ ಸರ್ಕಾರ ತನ್ನ ಕೊಡುಗೆ ಎಂಬಂತೆ ಬಿಂಬಿಸುತ್ತಿದೆ. ಸಂಸದ ಪ್ರತಾಪ್‌ಸಿಂಹ ಅವರು ತಾಲೂಕಿನ ಜನತೆಯ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸಿದ್ದಾರೆ. ಶಾಸಕ ಕೆ.ವೆಂಕಟೇಶ್‌ ಅವರಿಗೆ ಚುನಾವಣಾ ಸಮಯದಲ್ಲಿ ಮಾತ್ರ ಮತದಾರರ ನೆನಪಾಗುತ್ತಿದ್ದು ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು.

ಇದೆ ಸಂದರ್ಭದಲ್ಲಿ ಇತ್ತೀಚಿಗೆ ವಿದ್ಯುತ್‌ ಅಪಘಾತದಿಂದ ಮೃತಪಟ್ಟಿದ್ದ ತಾಲೂಕು ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಲ್ಲಿನಾಥಪುರ ಗ್ರಾಮದ ಎಂ.ಡಿ.ಪುರುಷೋತ್ತಮ್‌ ಮನೆಗೆ ಭೇಟಿ ನೀಡಿ ಮೃತನ ಪೋಷಕರಿಗೆ ಸಾಂತ್ವನ ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಪಿ.ಜೆ.ರವಿ, ಯುವಮೋರ್ಚಾ ಅಧ್ಯಕ್ಷ ಪಿ.ಟಿ.ಲಕ್ಷ್ಮೀನಾರಾಯಣ್‌, ಮುಖಂಡರಾದ ರಾಜೇಗೌಡ, ಶಶಿಕುಮಾರ್‌, ಶಂಭುಲಿಂಗಪ್ಪ, ಲೋಕಪಾಲಯ್ಯ, ವಿಕ್ರಂರಾಜ್‌, ಸರವಣ್‌ ಕುಮಾರ್‌, ಮಹದೇವ್‌, ಪ್ರಹ್ಲಾದ್‌, ಆನಂದ್‌, ನಾಗೇಶ್‌, ಸ್ವಾಮಿ ಮತ್ತಿತರಿದ್ದರು.

ಟಾಪ್ ನ್ಯೂಸ್

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.