ಅಸಂಘಟಿತ ಕಾರ್ಮಿಕರಿಗೆ ಶ್ರಮ ಸನ್ಮಾನ ಪ್ರಶಸ್ತಿ


Team Udayavani, Mar 9, 2020, 3:00 AM IST

asangatita

ಮೈಸೂರು: ರಾಜ್ಯದಲ್ಲಿ ಸಂಘಟಿತ ಕಾರ್ಮಿಕರು ಶೇ.20 ರಷ್ಟು ಇದ್ದರೆ, ಅಸಂಘಟಿತರು ಶೇ.80ರಷ್ಟಿದ್ದಾರೆ. ಇವರಿಗಾಗಿ ನಾವು ಯಾವುದೇ ಕಾನೂನು, ಕಾಯಿದೆಗಳನ್ನು ರೂಪಿಸಿಲ್ಲ ಎಂದು ಬೆಂಗಳೂರಿನ ಕಾರ್ಮಿಕ ಇಲಾಖೆ ಉಪ ಆಯುಕ್ತ ರವಿಕುಮಾರ್‌ ಹತಾಶೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದಲ್ಲಿ ಭಾನುವಾರ ನಗರದ ಶಾರದ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಆಯೋಜಿಸಿದ್ದ ಕಾರ್ಮಿಕ ಸನ್ಮಾನ ದಿನ ಆಚರಣೆಯಲ್ಲಿ ಮಾತನಾಡಿದರು.

ಎರಡು ಯೋಜನೆ ಜಾರಿಗೆ: ದೇಶದಲ್ಲಿ ಸಂಘಟಿತ ಕಾರ್ಮಿಕರು ಶೇ.20ರಷ್ಟಿದ್ದರೆ, ಅಸಂಘಟಿತರು ಶೇ.80 ರಷ್ಟಿದ್ದಾರೆ. ಸರ್ಕಾರದ ಯೋಜನೆಗಳು ಶೇ.20 ರಷ್ಟು ಸಂಘಟಿತ ಕಾರ್ಮಿಕರಿಗೆ ದೊರೆಯುತ್ತಿದೆ. ಹೆಚ್ಚಿನ ಕೆಲಸ ಮಾಡುವ ಅಸಂಘಟಿತ ವಲಯದ ಶೇ.80 ರಷ್ಟು ಮಂದಿಗೆ ಯಾವುದೇ ಯೋಜನೆ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು.

ಕಾರ್ಮಿಕ ಸನ್ಮಾನ ದಿನಾಚರಣೆ: ಸಂಘಟಿತ ವಲಯದ ಕಾರ್ಮಿಕರು ಮೇ 1 ರಂದು ಕಾರ್ಮಿಕ ದಿನಾಚರಣೆ ಆಚರಿಸಲಾಗುತ್ತದೆ. ಅದೇ ರೀತಿ ಅಂಘಟಿಯ ವಲಯದ ಕಾರ್ಮಿಕರಿಗೂ ದಿನಾಚರಣೆ ಮಾಡಬೇಕೆಂದು ಸರ್ಕಾರ ಕಾರ್ಮಿಕ ಸನ್ಮಾನ ದಿನಾಚರಣೆ ಆಯೋಜಿಸಿದೆ ಎಂದರು.

ಯೋಜನೆ ಸದುಪಯೋಗಿಸಿಕೊಳ್ಳಿ: ಕಾರ್ಮಿಕ ಸಹಾಯಕ ಆಯುಕ್ತರಾದ ಎ.ಸಿ.ತಮ್ಮಣ್ಣ ಮಾತನಾಡಿ, ಕಾರ್ಮಿಕ ಸಂಘಟನೆಯಲ್ಲೇ ಅಸಂಘಟಿತ ಕಾರ್ಮಿಕರು ಬಹುಸಂಖ್ಯಾತರು. 13 ವಲಯದಿಂದ 5468 ಮಂದಿ ಅಸಂಘಟಿತರಿಂದ ಅರ್ಜಿ ಸ್ವೀಕರಿಸಿ 3367 ಮಂದಿಗೆ ಅಸಂಘಟಿತ ಕಾರ್ಡ್‌ ನೀಡಲಾಗಿದೆ. ರಾಜ್ಯ ಖಾಸಗಿ ವಾಣಿಜ್ಯ ವಲಯ ಅಪಘಾತ ಜೀವ ರಕ್ಷಕದಡಿಯಲ್ಲಿ ಉಚಿತವಾಗಿ 1460 ಮಂದಿಗೆ ಮೆಡಿಕಲ್‌ ಕಿಟ್‌ ನೀಡಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮದಾನ ಮನಧನ್‌ ಯೋಜನೆಗೂ ಹಲವು ಮಂದಿಯನ್ನು ಉತ್ತೇಜಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಯನ್ನು ತಲುಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಶ್ರಮ ಸನ್ಮಾನ ಪ್ರಶಸ್ತಿ ಪ್ರದಾನ: ಅಸಂಘಟಿತ ವಲಯದಲ್ಲಿ ಎಲೆ ಮರೆಯ ಕಾಯಿಯಂತೆ ದುಡಿಯುವ ಕಾರ್ಮಿಕರನ್ನು ಶ್ರಮ ಸನ್ಮಾನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕುಂಬಾರರು, ಚಿಂದಿ ಆಯುವವರು, ಭಟ್ಟಿ ಕಾರ್ಮಿಕರು, ಹಮಾಲಿಗಳು, ಕಮ್ಮಾರರು, ಮನೆ ಕೆಲಸದವರು, ಅಕ್ಕಸಾಲಿಗರು, ಕ್ಷೌರಿಕರು, ಮೆಕ್ಯಾನಿಕ್‌ಗಳು, ಅಗಸರು, ಟೈಲರ್‌ ವೃತ್ತಿಯಲ್ಲಿ ಸೇವೆ ಸಲ್ಲಿಸುವ 136 ಮಂದಿಗೆ ವಿಶಿಷ್ಟ ಸಾಧಕರನ್ನು ಎಂದು ಗುರುತಿಸಿ ಸನ್ಮಾನಿಸಲಾಯಿತು.

ನಗದು, ಪ್ರಶಸ್ತಿ ಪ್ರದಾನ: ಮೈಸೂರು ಮಹಾ ನಗರ ಪಾಲಿಕೆ ಮೇಯರ್‌ ತಸ್ನಿಂ ಅಸಂಘಟಿತ ಕಾರ್ಮಿಕರಿಗೆ ಶ್ರಮ ಸಮ್ಮಾನ ಪ್ರಶಸ್ತಿ ವಿತರಣೆ ಮಾಡಿದರು. ಪ್ರಥಮ ಪ್ರಶಸ್ತಿ 15 ಸಾವಿರ ರೂ. ಮೌಲ್ಯದ ಚಿನ್ನದ ಪದಕವನ್ನು 12 ಜನ ಕಾರ್ಮಿಕರಿಗೆ ನೀಡಿದರು. ದ್ವಿತೀಯ ಪ್ರಶಸ್ತಿ 10 ಸಾವಿರ ರೂ. ಮೌಲ್ಯದ ಬೆಳ್ಳಿ ಪದಕವನ್ನು 12 ಜನ ಕಾರ್ಮಿಕರಿಗೆ ನೀಡಿದರು. ತೃತೀಯ ಪ್ರಶಸ್ತಿ 8 ಸಾವಿರ ರೂ. ಮೌಲ್ಯದ ಬೆಳ್ಳಿ ಪದಕವನ್ನು 12 ಕಾರ್ಮಿಕರಿಗೆ ಪ್ರಶಸ್ತಿಯಾಗಿ ನೀಡಲಾಯಿತು.

ಕಾರ್ಮಿಕ ಅಧಿಕಾರಿ ಎಸ್‌.ಎಂ.ಮಂಜುಳಾದೇವಿ, ಟ್ಯಾಕ್ಸಿ ಚಾಲಕ ಮಾಲೀಕ ಸಂಘದ ಅಧ್ಯಕ್ಷ ಆಯುಬ್‌ ಪಾಷಾ, ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಪ್ರಮೋದ್‌ ಚಿಕ್ಕಮಗಳೂರು, ಸವಿತಾ ಸಮಾಜ ಅಧ್ಯಕ್ಷ ನಾಗೇಂದ್ರ, ದಿನಗೂಲಿ ಮತ್ತು ಗೌರವ ಧನ ನೌಕರರ ಮಹಮಂಡಳಿ ಅಧ್ಯಕ್ಷ ಚಿಕ್ಕಮನ್ನೂರು, ಅಕ್ಕ ಸಾಲಿಗ ಸಂಘದ ಪದಾಧಿಕಾರಿ ಸುರೇಶ್‌ ಆಚಾರಿ, ಮಂಡ್ಯ ಕಾರ್ಮಿಕ ಅಧಿಕಾರಿ ನಾಗೇಂದ್ರ ಇದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.