ಸರ್ಕಾರಿ ಶಾಲಾ ಮಕ್ಕಳಿಗೆ ಕಾನಿಷ್ಕಾ ಟ್ರಸ್ಟ್‌ನಿಂದ ಅರಿವು, ನೆರವು


Team Udayavani, Feb 4, 2020, 3:00 AM IST

sarkari-shala

ಹುಣಸೂರು: ಎಚ್‌.ಡಿ.ಕೋಟೆಯ ಕಾನಿಷ್ಕ ಚಾರಿಟಬಲ್‌ ಟ್ರಸ್ಟ್‌ನಿಂದ ತಾಲೂಕಿನ ಹಗರನಹಳ್ಳಿ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ, ಆರೋಗ್ಯ, ಪರಿಸರ ಕಾಪಾಡುವ, ಪರೀಕ್ಷೆ ಎದುರಿಸುವ ಹಾಗೂ ಕಾಡ್ಗಿಚ್ಚು ತಡೆಯುವ ಕುರಿತು ಕಾರ್ಯಾಗಾರ ನಡೆಸಲಾಯತು. ಅಲ್ಲದೇ ಟ್ರಸ್ಟ್‌ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಿಸಲಾಯಿತು.

ಕಾರ್ಯಾಗಾರ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ನಾಗರಾಜು ಶಿಕ್ಷಣ, ಪರಿಸರ, ಆರೋಗ್ಯದ ಧ್ಯೇಯವನ್ನಿಟ್ಟುಕೊಂಡಿರುವ ಟ್ರಸ್ಟ್‌, ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸಿ ಜ್ಞಾನ ಹೆಚ್ಚಿಸುತ್ತಿರುವುದು ಶ್ಲಾಘನೀಯ ಎಂದರು.

ಬಿಆರ್‌ಸಿ ಸಂತೋಷ್‌ಕುಮಾರ್‌ ಮಾತನಾಡಿ, ಎಲ್ಲಾ ಸರಕಾರಿ ಶಾಲೆಗಳಲ್ಲೂ ಇಂತಹ ಕಾರ್ಯಾಗಾರ ನಡೆಸಬೇಕು ಎಂದು ಕೋರಿದರು. ಟ್ರಸ್ಟ್‌ ಅಧ್ಯಕ್ಷ ಮಹಿಮಾಂಜನ್‌ ಸಿಂಗ್‌ ಮಾತನಾಡಿ, ಟ್ರಸ್ಟ್‌ ಮೂಲಕ ಶಾಲಾ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾರ್ಯಕ್ರಮ ಹಾಗೂ ನೆರವು ನೀಡಲಾಗುತ್ತಿದ್ದು, ಹಂತ ಹಂತವಾಗಿ ವಿವಿಧ ಶಾಲೆಗಳಲ್ಲಿಯೂ ಇದೇ ರೀತಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ಪರೀಕ್ಷಾ ಭಯ ನಿವಾರಣೆ ಕುರಿತು ಟ್ರಸ್ಟ್‌ ನಿರ್ದೇಶಕ ಎಂ.ಮಹೇಶ್‌ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಆರೋಗ್ಯ ಇಲಾಖೆಯ ಎಲ್‌.ದಿನಕರ್‌, ಅಪಘಾತಗಳು ಮತ್ತು ಚಿಕಿತ್ಸೆ, ಹಾಗೂ ಮಾರಣಾಂತಿಕ ಕಾಯಿಲೆಗಳು ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ಪ್ರಥಮ ಚಿಕಿತ್ಸಾ ವಿಧಾನ ತಿಳಿಸಿಕೊಟ್ಟರು.

ಪರಿಸರ ಸಂರಕ್ಷಣೆ ಕುರಿತು ವಲಯ ಅರಣ್ಯಾಧಿಕಾರಿ ಮಧುದೇವಯ್ಯ, ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಕಾಳ್ಗಿಚ್ಚು ಸಂಭವಿಸುವ ಹಾಗೂ ತಡೆಗಟ್ಟಬಹುದಾದ ಕ್ರಮಗಳು, ಅರಣ್ಯ ಇಲಾಖೆಯಲ್ಲಿನ ವಿವಿಧ ಹಂತಗಳ ಹುದ್ದೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಶಾಲೆಗೆ ಕೊಡುಗೆ: ಟ್ರಸ್ಟ್‌ ವತಿಯಿಂದ ಶಾಲೆಗೆ ಗ್ರೀನ್‌ಬೋರ್ಡ್‌, ಗ್ರಂಥಾಲಯಕ್ಕೆ ಉಪಯುಕ್ತ ಪುಸ್ತಕಗಳು, ಸಂವಿಧಾನ ಪೂರ್ವ ಪೀಠಿಕೆಯ ಫೋಟೋ, ನಿಘಂಟು, ಪ್ರಥಮ ಚಿಕಿತ್ಸಾ ಕಿಟ್‌ ಹಾಗೂ 105 ವಿದ್ಯಾರ್ಥಿಗಳಿಗೂ ಪರೀಕ್ಷಾ ಪ್ಯಾಡ್‌, ಪೆನ್‌, ಜಾಮಿಟ್ರಿ, ನೋಟ್‌ ಪುಸ್ತಕ ವಿತರಿಸಲಾಯಿತು. ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

ಕಾರ್ಯಾಗಾರದಲ್ಲಿ ಟ್ರಸ್ಟ್‌ ಗೌರವಾಧ್ಯಕ್ಷ ದೇವರಾಜು, ಉಪಾಧ್ಯಕ್ಷ ರಮೇಶ್‌, ಕಾರ್ಯದರ್ಶಿ ಸೋಮೇಶ್‌, ಲೆಕ್ಕಪರಿಶೋಧಕ ಸಿ.ಆರ್‌.ಸಂತೋಷ್‌ಕುಮಾರ್‌, ಖಜಾಂಚಿ ಪ್ರಕಾಶ್‌, ನಿರ್ದೇಶಕರಾದ ಭೋಗನಂಜಯ್ಯ, ಕಾಂತರಾಜು, ಪ್ರಸನ್ನ, ಶಿವಕುಮಾರ್‌, ರಾಜೇಶ್‌, ಕಲ್ಯಾಣ್‌ ಹಾಗೂ ನವೀನ್‌ಕುಮಾರ್‌, ಶಶಿಕುಮಾರ್‌, ಪ್ರಪುಲ್ಲ, ಮುಖ್ಯಶಿಕ್ಷಕ ಪುಟ್ಟಬಸವೇಗೌಡ ಇತರರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.