ಅಲೆಮಾರಿ ಸಮುದಾಯಗಳಿಗೆ ಅರಸು-ಸಿದ್ದರಾಮಯ್ಯ ಕೊಡುಗೆ ಅಪಾರ: ಶಾಸಕ ಮಂಜುನಾಥ್


Team Udayavani, Jan 22, 2022, 12:28 PM IST

ಅಲೆಮಾರಿ ಸಮುದಾಯಗಳಿಗೆ  ಅರಸು-ಸಿದ್ದರಾಮಯ್ಯ ಕೊಡುಗೆ ಅಪಾರ: ಶಾಸಕ ಮಂಜುನಾಥ್

ಹುಣಸೂರು: ಅಲೆಮಾರಿ ಸಮುದಾಯದ ಮಂದಿಗೆ ಅರಸು ನಿಗಮ ಅಲ್ಲದೆ ಗ್ರಾಮ ಪಂಚಾಯ್ತಿವತಿಯಿಂದಲೂ ಮನೆ ವಿತರಿಸಲು ಮುಂದಾಗುವಂತೆ ಶಾಸಕಜ ಎಚ್.ಪಿ.ಮಂಜುನಾಥ್ ಉದ್ದೂರು ಗ್ರಾ.ಪಂ. ವರಿಷ್ಟರು ಹಾಗೂ ಸದಸ್ಯರಿಗೆ ಸೂಚಿಸಿದರು.

ತಾಲೂಕಿನ ಉದ್ದೂರು ಗ್ರಾ.ಪಂ.ವ್ಯಾಪ್ತಿಯ ಹೊಸಕೋಟೆ ಗ್ರಾಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ-ಅರೆ ಅಲೆಮಾರಿ ಜನಾಂಗದವರಿಗಾಗಿ ಏರ್ಪಡಿಸಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಲೆಮಾರಿಗಳು ತಮ್ಮ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಿ, ಸರಕಾರದ ನೆರವಿಗೆ ಕಾಯದೆ ನಿಮ್ಮ ಕಾಲಮೇಲೆ ನಿಂತು ಅಭಿವೃದ್ದಿ ಹೊಂದುವ ಮೂಲಕ ನಿಮ್ಮ ಪ್ರಗತಿಗೆ ನೀವೇ ಶಿಲ್ಪಿಗಳಾಗಿಬೇಕಿದೆ.

ಈ ಗ್ರಾಮದಲ್ಲಿ ೫೦ಕ್ಕೂ ಹೆಚ್ಚು ಹೆಳವ ಅಲೆಮಾರಿ ಕುಟುಂಬಗಳಿದ್ದು, ಸಾಕಷ್ಟು ಹಿಂದುಳಿದಿರುವ ಬಗ್ಗೆ ಅರಿವಿದೆ. ಅನೇಕ ಕುಟುಂಬಗಳಿಗೆ ಮನೆಗಳಿಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜೊತೆಗೆ ಗ್ರಾಮ ಪಂಚಾಯ್ತಿಯಿಂದ ಈಗ ಬಂದಿರುವ ವಸತಿ ಯೋಜನೆ ಸೌಲಭ್ಯ ಕಲ್ಪಿಸಬೇಕೆಂದು ಗ್ರಾ.ಪಂ.ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಲಹೆ ನೀಡಿದರು.

ಇವರಿಗೆ ಸರಕಾರದ ಸೌಲಭ್ಯಗಳು ತಲುಪಬೇಕು. ಮುಖ್ಯವಾಗಿ ಅಲೆಮಾರಿಗಳಿಗೆ ಸರಕಾರದಲ್ಲಿ ಭೂಮಿ ಖರೀದಿಸಿ ವಿತರಿಸುವ ಯೋಜನೆ ಇದ್ದು. ಆದರೆ ಅನುಷ್ಟಾನದ ಹಂತದಲ್ಲಿ ಅಡೆತಡೆ ಉಂಟಾಗುತ್ತಿರುವುದರಿಂದ ಯೋಜನೆಗಳು ಸಾಕಾರಗೊಳ್ಳುತ್ತಿಲ್ಲವೆಂದರು.

ಅರಸು-ಸಿದ್ದರಾಮಯ್ಯರ ನೆನಪು:

ಅಲೆಮಾರಿ ಹಾಗೂ ಸಣ್ಣಪುಟ್ಟ ಜುನಾಂಗಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ದೇವರಾಜಅರಸರು ಪ್ರಮುಖ ಪಾತ್ರವಹಿಸಿದ್ದರೆ, ನಂತರದಲ್ಲಿ ಸಿದ್ದರಾಮಯ್ಯನವರು ಈ ಸಮುದಾಯದವರಿಗೆ ಆರ್ಥಿಕ ಸಬಲೀಕರಣಕ್ಕೆ ಸಾಕಷ್ಟು ಕೊಡುಗೆ ನೀಡುವ ಮೂಲಕ ಈ ಸಮುದಾಯದ ನೆನಪಿನಲ್ಲಿ ಅಚ್ಚಳಯದೆ ಉಳಿದ್ದಿದ್ದಾರೆ.  ಆದರೆ ಈಗಿನ ಸರಕಾರದಲ್ಲಿ ಯಾವುದೇ ಯೋಜನೆಗಳು ಇಲ್ಲವೆಂದು ಬೇಸರಿಸಿದರು.

ಹಕ್ಕುಪತ್ರ ವಿತರಣೆ:

ಕಾರ್ಯಕ್ರಮದಲ್ಲಿ 11 ಮಂದಿ ಫಲಾನುಭವಿಗಳಿಗೆ ವಸತಿ ಯೋಜನೆಯ ಹಕ್ಕುಪತ್ರ ವಿತರಿಸಲಾಯಿತು. ಉಳಿದಂತೆ ಇಲಾಖೆ ಅಧಿಕಾರಿಗಳು ಸರಕಾರದ ಯೋಜನೆಗಳನ್ನು ತಿಳಿಸಿದರೆ ಸಾಲದು, ಈ ಸಮುದಾಯದ ಅಭಿವೃದ್ದಿಗೆ ಪೂರಕವಾಗಿ ಯೋಜನೆಗಳನ್ನು ತಲುಪಿಸಬೇಕೆಂದು ತಾಕೀತು ಮಾಡಿದರು.

ಬಾಲ್ಯ ವಿವಾಹ ಬೇಡ ಉಪನ್ಯಾಸಕ ವಾಸು:

ಅಲೆಮಾರಿ ಜನಾಂಗದ ಕುರಿತು ಉಪನ್ಯಾಸ ನೀಡಿದ ಬಾಲಕಿಯರ ಪಿಯು ಕಾಲೇಜಿನ ಇತಿಹಾಸ ಉಪನ್ಯಾಸಕ ಎಚ್.ಬಿ.ವಾಸು ಅಲೆಮಾರಿ ಸಮುದಾಯಗಳಿಗೆ ಶಿಕ್ಷಣವೇ ಅಸ್ತçವಾಗಬೇಕು. ಶಿಕ್ಷಣವು ಅಜ್ಞಾನವನ್ನು ಹೋಗಲಾಡಿಸುವ ದೊಡ್ಡ ಸಾಧನವಾಗಿದೆ.  ಅಲೆಮಾರಿಗಳಲ್ಲಿ ಇಂದಿಗೂ ಮೂಡನಂಬಿಕೆ, ಕಂದಾಚಾರ, ಮೌಡ್ಯ ಮಡುಗಟ್ಟಿದೆ. ಇದರಿಂದ ಹೊರಬಂದು ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ. 18 ವರ್ಷದೊಳಗಿನ ಹೆಣ್ಣು ಮಕ್ಕಳನ್ನು ದೇವಸ್ಥಾನ, ಹಳ್ಳಿಗಳಲ್ಲಿ  ಮದುವೆ ಮಾಡುವ ಬಗ್ಗೆ ವರದಿಯಾಗುತ್ತಲೇ ಇದೆ. ಬಾಲ್ಯವಿವಾಹ ಮಾಡಬೇಡಿ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಜೊತೆಗೆ ವಿವಾಹ ಮಾಡಿಸಿದವರಿಗೂ ಶಿಕ್ಷೆ ಇದೆ ಎಂದು ಎಚ್ಚರಿಸಿದರು.

ತಾಲೂಕು ಹಿಂದುಳಿದ ವರ್ಗಗಳ ಪ್ರಭಾರ ಕಲ್ಯಾಣಾಧಿಕಾರಿ ಸುಕನ್ಯ ಅಲೆಮಾರಿ ಜನಾಂಗದವರಿಗಿರುವ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉದ್ದೂರು ಗ್ರಾ.ಪಂ.ಅಧ್ಯಕ್ಷ ನಂದೀಶ್, ಉಪಾರ್ಧಯಕ್ಷೆ ಗೌರಮ್ಮ, ಸದಸ್ಯ ಮನುಕುಮಾರ್ ಹಾಗೂ ಇತರೆ ಸದಸ್ಯರು. ಪಿಡಿಓ ನವೀನ್, ಬಿಸಿಎಂ ಅಧಿಕಾರಿ ಸುಜೇಂದ್ರಕುಮಾರ್, ಸಿಬ್ಬಂದಿಗಳಾದ ಚಿಕ್ಕವಡ್ಗಲ್, ರವಿ, ಗೀತಾ, ಪ್ರತಿಭಾ, ಉಮೇಶ್, ಮಂಜುನಾಥ್, ಕೃಷ್ಣ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಹೆಳವಜನಾಂಗದ ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.