ಇಲಾಖೆಯಿಂದ ಸ್ಥಳದಲ್ಲೇ ಆಯುಷ್ಮಾನ್‌ ಕಾರ್ಡ್‌


Team Udayavani, Dec 18, 2019, 3:00 AM IST

ilakeyinda

ಹುಣಸೂರು: ಐದು ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಕಲ್ಪಿಸುವ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಆರೋಗ್ಯ ಯೋಜನೆಯ ಕಾರ್ಡ್‌ ಪಡೆಯಲು ಆರೋಗ್ಯ ಇಲಾಖೆ ವತಿಯಿಂದಲೇ ಕಾರ್ಯಕ್ರಮ ರೂಪಿಸಲಾಗಿದೆ. ನಗರದ ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ಬರೋಬ್ಬರಿ 10 ಕಂಪ್ಯೂಟರ್‌ಗಳನ್ನು ತೆರೆದು ಫ‌ಲಾನುಭವಿಗಳ ಹೆಸರು, ಅಗತ್ಯ ದಾಖಲೆ ಪಡೆದುಕೊಂಡು ಸ್ಥಳದಲ್ಲೇ ಆಯುಷ್ಮಾನ್‌ ಕಾರ್ಡ್‌ ವಿತರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್‌ ಬಸವರಾಜ್‌, ಆಯುಷ್ಮಾನ್‌ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣೆಯಲ್ಲಿ ವಿಳಂಬವಾಗುತ್ತಿರುವುದನ್ನು ಮನಗಂಡು ಆರೋಗ್ಯ ಇಲಾಖೆ ವತಿಯಿಂದಲೇ ಕಾರ್ಡ್‌ ವಿತರಣೆಗೆ ಕ್ರಮವಹಿಸಲಾಗಿದೆ ಎಂದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಆಯುಷ್ಮಾನ್‌ ಭಾರತ ಯೋಜನೆಯಡಿ ಬಿಪಿಎಸ್‌ ಕಾರ್ಡ್‌ದಾರರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಕಲ್ಪಿಸಲಾಗುವುದು. ಆದರೆ, ಆರೋಗ್ಯ ಯೋಜನೆಯ ಕಾರ್ಡ್‌ ಪಡೆಯಲು ಕೆಲವೆಡೆ ಸರ್ವರ್‌ ಸಮಸ್ಯೆ, ಸಿಬ್ಬಂದಿ ಕೊರತೆ ಇದೆ. ಮತ್ತೂಂದೆಡೆ ಸಾರ್ವಜನಿಕರು ಕಾರ್ಡ್‌ ಮಾಡಿಸಿಕೊಳ್ಳಲು ಮುಂದಾಗದಿರುವುದರಿಂದ ಕಾರ್ಡ್‌ ವಿತರಣೆ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದಲೇ ಸ್ಥಳೀಯ ಏಜೆಸ್ಸಿಗಳ ಸಹಕಾರ ಪಡೆದು ಒಂದೆಡೆ ವಿತರಣೆಗೆ ಕ್ರಮ ವಹಿಸಲಾಗಿದೆ.

ಇಲ್ಲಿ ನಿಗದಿತ ಶುಲ್ಕ ಪಾವತಿಸಿದಲ್ಲಿ ಸ್ಥಳದಲ್ಲೇ ಕಾರ್ಡ್‌ ವಿತರಿಸಲಾಗುವುದು ಎಂದರು. ಮುಂದಿನ ದಿನಗಳ‌ಲ್ಲಿ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳವರು ಹಾಗೂ ಕುಟುಂಬದವರಿಗೆ ಮತ್ತು ಚಾಲಕರುಗಳಿಗೆ ನಿಗದಿತ ದಿನಾಂಕದಂದು ವಿತರಣೆಗೆ ಕ್ರಮವಹಿಸಲಾಗುವುದು. ಎಲ್ಲರೂ ಕುಟುಂಬದವರನ್ನು ಕರೆತಂದು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶೇ.25 ರಷ್ಟು ವಿತರಣೆ: ತಾಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿಕುಮಾರ್‌ ಮಾತನಾಡಿ, ತಾಲೂಕಿನಲ್ಲಿ 3.24 ಲಕ್ಷ ಲಕ್ಷ ಕಾರ್ಡ್‌ ವಿತರಣೆಯಾಗಬೇಕಿದೆ. ಆದರೆ, ಈವರೆಗೆ ಶೇ.24 ರಷ್ಟು(60 ಸಾವಿರ) ಕಾರ್ಡ್‌ ವಿತರಣೆಯಾಗಿದೆ. ಇದರಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೂ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಿಸಲಾಗುತ್ತಿದೆ. ಬಿಪಿಎಲ್‌ನವರಿಗೆ ಉನ್ನತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭಿಸಲಿದೆ. ಎಪಿಎಲ್‌ ಕಾರ್ಡ್‌ದಾರರಿಗೆ ಕಡಿಮೆ ಹಣದಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಂದೇ ದಿನದಲ್ಲಿ 1942 ಕಾರ್ಡ್‌ ವಿತರಿಸಲಾಯತು. ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸರ್ವೇಶ್‌ ರಾಜೇಅರಸ್‌, ಆರೋಗ್ಯ ಇಲಾಖೆಯ ಜಿಲ್ಲಾ ನೋಡೆಲ್‌ ಅಧಿಕಾರಿ ಮಂಜುನಾಥಪ್ರಸಾದ್‌, ಆರೋಗ್ಯ ಶಿಕ್ಷಣಾಧಿಕಾರಿ ಮಹದೇವು, ಹಿರಿಯ ಆರೋಗ್ಯ ಸಹಾಯಕ ಶಿವನಂಜು, ಸತೀಶ್‌ ಸೇರಿದಂತೆ ನಗರದ 10ಕ್ಕೂ ಹೆಚ್ಚು ಕಂಪೂಟರ್‌ ಕೇಂದ್ರಗಳ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.