ಬಿದಿರು ಮೆಳೆಗೆ ಸಿಲುಕಿ ಗರ್ಜಿಸುತ್ತಿದ್ದ ಹುಲಿ ರಕ್ಷಣೆ


Team Udayavani, Dec 8, 2018, 11:11 AM IST

m4-bidiru.jpg

ಹುಣಸೂರು: ಉರುಳಿಗೆ ಹಾಕಿದ್ದ ಗೂಟವನ್ನೇ ಕಿತ್ತುಕೊಂಡು ಓಟ ಕಿತ್ತಿದ್ದ ಹುಲಿಯ ಕುತ್ತಿಗೆಯಲ್ಲಿದ್ದ ಗೂಟ ಬಿದಿರು ಮೆಳೆಗೆ ಸಿಲುಕಿ ಓಡಲಾಗದೆ ಗರ್ಜಿಸುತ್ತಿತ್ತು. ಅರವಳಿಕೆ ನೀಡಿದ ಅರಣ್ಯ ಇಲಾಖೆ ವೈದ್ಯ ಮತ್ತು ಸಿಬ್ಬಂದಿ, ಹುಲಿಯನ್ನು ಉರುಳಿನಿಂದ ಪಾರುಮಾಡಿ ಪುನರ್ವಸತಿ ಕೇಂದ್ರಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ತಾಲೂಕಿನ ಪ್ರಾದೇಶಿಕ ಅರಣ್ಯ ವಿಭಾಗದ ಶೆಟ್ಟಹಳ್ಳಿ-ಲಕ್ಕಪಟ್ಟಣ ಮೀಸಲು ಅರಣ್ಯ ಪ್ರದೇಶದ ಅರಣ್ಯದ ಪಕ್ಕದ ಜಮೀನಿನಲ್ಲಿ ಮರದ ಗೂಟಕ್ಕೆ ಕೇಬಲ್‌ ವೈರಿನ ಉರುಳನ್ನು ಹಾಕಲಾಗಿತ್ತು. ಅಡ್ಡಾಡುತ್ತಿದ್ದ ಹುಲಿಯು ಉರುಳಿಗೆ ಸಿಲುಕಿದ ವೇಳೆ ಜೋರಾಗಿ ಎಳೆದಿದ್ದರಿಂದ ಗೂಟದ ಸಮೇತ ಕಿತ್ತುಕೊಂಡು ಸ್ಪಲ್ಪದೂರ ಎಳೆದುಕೊಂಡು ಬಂದು ಗೂಟ ಭುಜಕ್ಕೆ ಸಿಲುಕಿಕೊಂಡು ಮುಂದೆ ಚಲಿಸಲಾಗದೆ ಬಿದಿರಿನ ಮೆಳೆಗೆ ಸಿಲುಕಿ ಗರ್ಜಿಸುತ್ತಿತ್ತು. 

ಹುಲಿಗೆ ವನ್ಯಜೀವಿ ವಿಭಾಗದ ಪಶುವೈದ್ಯ ಡಾ.ಮುಜೀಬ್‌ ರೆಹಮಾನ್‌ ಅರವಳಿಕೆ ಚುಚ್ಚು ಮದ್ದ ನೀಡಿ ಜ್ಞಾನ ತಪ್ಪಿಸಿದ ನಂತರ ಕುತ್ತಿಗೆಯಿಂದ ಉರುಳನ್ನು ಬಿಡಿಸಿ, ಚಿಕಿತ್ಸೆ ನೀಡಿ ವಾಹನಕ್ಕೇರಿಸಿಕೊಂಡು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಡಲಾಗಿದ್ದು, ಇದೀಗ ಚೇತರಿಸಿಕೊಂಡಿದೆ.

ಸುಮಾರು ಎರಡೂವರೆ ವರ್ಷದ ಗಂಡು ಹುಲಿ ಇದಾಗಿದ್ದು, ಶುಕ್ರವಾರ ಬೆಳಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಹುಲಿ ಗೋಚರಿಸಿದ್ದು, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಶುಕ್ರವಾರ ಮಧ್ಯಾಹ್ನದಿಂದ ಸಂಜೆ ವರೆಗೂ ನಡೆದ ಕಾರ್ಯಾಚರಣೆಯಲ್ಲಿ ಹುಲಿಯನ್ನು ಸುರಕ್ಷಿತವಾಗಿ ಉರುಳಿನಿಂದ ಬಿಡಿಸಿ, ಇದೀಗ ಕೂರ್ಗಳ್ಳಿ ವನ್ಯಜೀವಿ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಕಾರ್ಯಾಚರಣೆ ಬಗ್ಗೆ ಡಿಸಿಎಫ್‌.ವಿಜಯಕುಮಾರ್‌ ತಿಳಿಸಿದ್ದಾರೆ.

ಈ ವೇಳೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಗತ್‌ ರಾಂ, ಡಿಸಿಎಫ್‌ ವಿಜಯಕುಮಾರ್‌, ಎಸಿಎಫ್‌ಗಳಾದ ಸೋಮಪ್ಪ, ಪ್ರಸನ್ನಕುಮಾರ್‌, ವನ್ಯಜೀವಿ ವಾರ್ಡನ್‌ ಕೃತಿಕಾ, ಪರಿಸರವಾದಿ ರಾಜ್‌ ಕುಮಾರ್‌, ಆರ್‌ಎಫ್‌ಓ ಸಂದೀಪ್‌ ಮತ್ತಿರರ ಅಧಿಕಾರಿಗಳು ಹಾಜರಿದ್ದರು.

ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ತರಗನ್‌ ಎಸ್ಟೇಟ್‌ನಲ್ಲಿ ಕಳೆದ ಎರಡು ತಿಂಗಳ ಹಿಂದೆ ತಾಯಿಯೊಂದಿಗೆ ಮೂರು ಹುಲಿಮರಿಗಳು ಆಗಾಗ್ಗೆ ಕಾಣಿಸಿಕೊಂಡು ಉಪಟಳ ನೀಡುತ್ತಿದ್ದವು. ಈಗ ಸೆರೆ ಸಿಕ್ಕಿರುವ ಹುಲಿಯು ಕಳೆದ ಮೂರ್‍ನಾಲ್ಕು ದಿನಗಳಿಂದ ಸಹ ಈ ಭಾಗದಲ್ಲಿ ಕಾಣಿಸಿಕೊಂಡು ಆತಂಕ ಹುಟ್ಟಿಸಿತ್ತು, ಇದು ಅದೇ ಹುಲಿಯೇ ಇರಬಹುದೆಂಬ ಗ್ರಾಮಸ್ಥರು ಶಂಕಿಸಿದ್ದಾರೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.