ಮುಂಗಡ ದರಕ್ಕೆ ಒಪ್ಪದ ಬನ್ನಾರಿ ಕಾರ್ಖಾನೆ


Team Udayavani, Oct 11, 2017, 12:11 PM IST

2my.jpg

ಮೈಸೂರು: ಕಬ್ಬು ಬೆಳೆಗಾರರಿಗೆ ಸ್ವಯಂಪ್ರೇರಣೆಯಿಂದ ಮುಂಗಡ ದರ ನೀಡಬೇಕು, ಈ ಸಂಬಂಧ ಮೂರು ದಿನಗಳೊಳಗೆ ಆಡಳಿತ ಮಂಡಳಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು. ಕಾರ್ಖಾನೆ ವ್ಯಾಪ್ತಿಯನ್ನು ಮೀರಿ ಹೊರ ಜಿಲ್ಲೆಯ ಕಬ್ಬನ್ನು ತಂದು ಅರೆಯಬಾರದು ಎಂದು ಜಿಲ್ಲಾಧಿಕಾರಿ ಡಿ. ರಂದೀಪ್‌ ಬನ್ನಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆ ಆಡಳಿತ ವರ್ಗಕ್ಕೆ ಸೂಚಿಸಿದರು.

ರೈತರ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತ ಪ್ರತಿನಿಧಿಗಳು ಹಾಗೂ ಸಕ್ಕರೆ ಕಾರ್ಖಾನೆ ಅಧಿಕಾರಿಗಳ ಸಭೆ ನಡೆಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಬನ್ನಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆ ಕಬ್ಬು ಅರೆಯಲು ಆರಂಭಿಸಿ ಎರಡು ತಿಂಗಳಾಗಿದೆ,

ಆದರೂ ಇನ್ನೂ ಕಬ್ಬು ದರ ನಿಗದಿಯಾಗಿಲ್ಲ. ಬೆಳಗಾವಿ ಜಿಲ್ಲೆಯ ಬಹುತೇಕ ಸಕ್ಕರೆ ಕಾರ್ಖಾನೆಗಳು ಸ್ವಯಂಪ್ರೇರಣೆಯಿಂದ ಕಬ್ಬಿಗೆ ಮುಂಗಡ ದರ ನೀಡಿರುವಂತೆ ಇಲ್ಲಿಯೂ ನೀಡಬೇಕು. ಜತೆಗೆ ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಶೇ.11 ಸಕ್ಕರೆ ಇಳುವರಿಗೆ ಪ್ರತಿ ಟನ್‌ ಕಬ್ಬಿಗೆ 3600 ರೂ. ದರ ನೀಡುತ್ತಿವೆ, ಬನ್ನಾರಿ ಸಕ್ಕರೆ ಕಾರ್ಖಾನೆಯವರು ಶೇ.10 ಇಳುವರಿಗೆ 3300 ರೂ. ನೀಡಲಿ ಎಂದು ಒತ್ತಾಯಿಸಿದರು.

ಇಳುವರಿ ಕಡಿಮೆ: ಇದಕ್ಕೆ ಪ್ರತಿಕ್ರಿಯಿಸಿದ ಬನ್ನಾರಿ ಸಕ್ಕರೆ ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ವೇಲುಸ್ವಾಮಿ, ಕಾರ್ಖಾನೆಯಲ್ಲಿ ಪ್ರತಿ ಟನ್‌ ಕಬ್ಬಿಗೆ 8.85 ಇಳುವರಿ ಬರುತ್ತಿದೆ, ಹೀಗಾಗಿ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಯವರಿಗೆ ತಿಳಿಸಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರೈತ ಮುಖಂಡರು, 2003ರಲ್ಲಿ ಭೀಕರ ಬರದ ಸಂದರ್ಭದಲ್ಲೂ 10.5 ರಿಂದ 11ರಷ್ಟು ಇಳುವರಿ ಬಂದಿತ್ತು. ಆದರೆ, ಸರ್ಕಾರ ಸಕ್ಕರೆ ಇಳುವರಿ ಆಧಾರದ ಮೇಲೆ ರೈತರಿಗೆ ದರ ಪಾವತಿ ಮಾಡಿ ಅಂದಾಗ ಇಳುವರಿ ಕಡಿಮೆ ತೋರಿಸುತ್ತಿದ್ದಾರೆ. ಆಲೆಮನೆಗಳಲ್ಲಿ ಹೆಚ್ಚಿನ ಇಳುವರಿ ಬರುವಾಗ ಸಕ್ಕರೆ ಕಾರ್ಖಾನೆಯಲ್ಲೇಕೆ ಇಳುವರಿ ಕಡಿಮೆಯಾಗುತ್ತದೆ ಎಂದು ಪ್ರಶ್ನಿಸಿದರು.

ತಜ್ಞರ ಸಮಿತಿ: ಮೈಸೂರು ಜಿಲ್ಲೆಯಲ್ಲಿ ಕಬ್ಬು ಕಡಿಮೆಯಾಗಿದೆ. ಬನ್ನಾರಿ ಕಾರ್ಖಾನೆಯವರು ಶೇ.75ರಷ್ಟು ಹೊರ ಜಿಲ್ಲೆಗಳಿಂದ ಕಬ್ಬು ತಂದು ಅರೆಯುತ್ತಿದ್ದಾರೆ. ಇಳುವರಿಯನ್ನೂ ಅವರೇ ನಿಗದಿಮಾಡುತ್ತಾ ಕಬ್ಬು ಬೆಳೆಗಾರರನ್ನು ಬಲಿಪಶು ಮಾಡುತ್ತಿದ್ದಾರೆ. ಇಳುವರಿ ಪರಿಶೀಲನೆಗೆ ತಜ್ಞರ ಸಮಿತಿ ರಚನೆ ಮಾಡುವಂತೆ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದರು.

ವ್ಯವಸ್ಥಾಪಕ ಕೇಂದ್ರ ಸರ್ಕಾರದ ಆದೇಶದಂತೆ ಪ್ರಸ್ತುತ 9.5 ಇಳುವರಿಗೆ ಪ್ರತಿ ಟನ್‌ ಕಬ್ಬಿಗೆ 2550 ರೂ. ನೀಡಲಾಗುತ್ತಿದೆ. ಕಳೆದ ವರ್ಷ ಎಫ್ಆರ್‌ಪಿ ದರ 2365 ರೂ. ನೀಡಿದ್ದೇವೆ. ಜತೆಗೆ ಸಕ್ಕರೆ ಸಚಿವರ ಸೂಚನೆ ಮೇರೆಗೆ ಪ್ರತಿ ಟನ್‌ಗೆ 200 ರೂ. ಹೆಚ್ಚುವರಿ ಹಣ ನೀಡಿದ್ದೇವೆ ಎಂದರು.

ಆಕ್ರೋಶ: ಕಾರ್ಖಾನೆಯವರ ವಾದವನ್ನು ಒಪ್ಪದ ರೈತ ಮುಖಂಡರು ನಾಳೆಯಿಂದ ನಾವು ಕಬ್ಬು ಕಟಾವು ಮಾಡಲ್ಲ, ಕಾರ್ಖಾನೆ ಹೇಗೆ ನಡೆಸುತ್ತಾರೋ ನೋಡೋಣ? ಬನ್ನಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯವರು ಈಸ್ಟ್‌ ಇಂಡಿಯಾ ಕಂಪನಿಯವರಂತೆ ರೈತರನ್ನು ಒಡೆದು ಆಳುತ್ತಿದ್ದಾರೆ. ಕಾರ್ಖಾನೆ ವ್ಯಾಪ್ತಿಯ ಹೊರಗಿನಿಂದ ಕಬ್ಬು ಬಾರದಂತೆ ನಾಳೆಯಿಂದ ತಡೆಯುತ್ತೇವೆ, ಇವರಿಂದ ಹೇಗೆ ವಸೂಲು ಮಾಡಬೇಕು ನಮಗೆ ಗೊತ್ತಿದೆ. ಕಾನೂನು-ಸುವ್ಯವಸ್ಥೆ ಹಾಳಾದರೆ ಕಾರ್ಖಾನೆಯವರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಿತಿ ರಚನೆ: ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ, ಸಕ್ಕರೆ ಇಳುವರಿ ಪರಿಶೀಲನೆಗಾಗಿ ಆಹಾರ ಇಲಾಖೆ ಉಪ ನಿರ್ದೇಶಕರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ರೈತ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು, ಈ ಸಮಿತಿ ಕಳೆದ ವರ್ಷದ ಉಪ ಉತ್ಪನ್ನಗಳ ಲಾಭಾಂಶವನ್ನೂ ಪರಿಶೀಲಿಸಲಿದೆ. ಜತೆಗೆ ಇಳುವರಿ ಪರಿಶೀಲನೆ ಸಂಬಂಧ ಸರ್ಕಾರಕ್ಕೂ ಪತ್ರ ಬರೆಯಲಾಗುವುದು. ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದರು.

ಆಹಾರ ಇಲಾಖೆ ಉಪ ನಿರ್ದೇಶಕ ಡಾ.ಕಾ.ರಾಮೇಶ್ವರಪ್ಪ, ಜಂಟಿ ಕೃಷಿ ನಿರ್ದೇಶಕ ಸೋಮಸುಂದ್ರು, ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ರೈತಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಪ್ರಧಾನ ಕಾರ್ಯದರ್ಶಿ ಹೊಟಕೋಟೆ ಬಸವರಾಜು ಇತರರು ಇದ್ದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

Congress ಲೂಟಿ ತಪ್ಪಿಸಲು ಬಿಜೆಪಿ ಜತೆ ಮೈತ್ರಿ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.