ಅಂಬೇಡ್ಕರ್‌, ಗಾಂಧೀಜಿ ಮೇಲೆ ಬಸವಣ್ಣನವರ ಪ್ರಭಾವ


Team Udayavani, Jun 27, 2019, 3:00 AM IST

ambedka

ಹುಣಸೂರು: ಬಸವಣ್ಣನವರ ಆಶಯಗಳು ಈಡೇರಿದ್ದರೆ ಜಾತಿಯತೆ, ಭ್ರಷ್ಟಾಚಾರಕ್ಕೆ ಅವಕಾಶವಿರುತ್ತಿರಲಿಲ್ಲ ಎಂದು ಅರಸು ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಆರ್‌.ಗುರುಸ್ವಾಮಿ ತಿಳಿಸಿದರು.

ನಗರದ ಮುನೇಶ್ವರಕಾವಲ್‌ ಮೈದಾನದಲ್ಲಿ ಬಸವಜಯಂತಿ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿಯಾಗಿದ್ದ ನಿಜಲಿಂಗಪ್ಪ ಅವರು ಅಂಬೇಡ್ಕರರಿಗೆ ಹಾಗೂ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಅಧಿವೇಶನಕ್ಕೆ ಗಾಂಧೀಜಿಯವರು ಆಗಮಿಸಿದ್ದ ವೇಳೆ ಬಸವಣ್ಣನವರ ಸಾಮಾಜಿಕ ಕ್ರಾಂತಿ ಹಾಗೂ ವಚನದ ತಾತ್ಪರ್ಯವನ್ನು ಮನನ ಮಾಡಿಸಿದ್ದರು. ಹೀಗಾಗಿ ಇವರಿಬ್ಬರ ಮೇಲೆ ಬಸವಣ್ಣನವರ ಕ್ರಾಂತಿ ದೊಡ್ಡ ಪ್ರಭಾವ ಬೀರಿತ್ತು ಎಂದರು.

ವಚನ ಭಾಷಾಂತರ: ಕೆರೆ ಮಂಜಣ್ಣನವರು 1913ರಲ್ಲಿ ದಾವಣಗೆರೆಯಲ್ಲಿ ಪ್ರಥಮವಾಗಿ ಬಸವ ಜಯಂತಿ ಆಚರಣೆ ಬುನಾದಿ ಹಾಕಿದ್ದರು. ಬಸವಣ್ಣನವರ ವಿಚಾರಧಾರೆ ಹಾಗೂ ವಚನ ತಾತ್ಪರ್ಯವನ್ನು 23 ಭಾಷೆಗಳಿಗೆ ಭಾಷಾಂತರಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಬಸವಣ್ಣನವರ ಸಾಮಾಜಿಕ ಕ್ರಾಂತಿಯನ್ನು ಕೊಂಡಾಡಿದ್ದಾರೆ. ಅದೇ ರೀತಿ ಇಂಗ್ಲೆಂಡ್‌, ಅಮೆರಿಕ, ಫ್ರಾನ್ಸ್‌ ಮತ್ತಿತರ ದೇಶಗಳಲ್ಲಿ ಬಸವಣ್ಣನವರ ವಿಚಾರಧಾರೆ ನಡೆಯುತ್ತಿದೆ ಎಂದರು.

ಇಷ್ಟಲಿಂಗ ಪೂಜೆಗೆ ಕರೆ: ದೇಶದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದಿದ್ದ ಬಸವಣ್ಣ ಅಂದೇ ಜನಿವಾರ ಕಿತ್ತು ಬಿಸಾಡಿ, ಭಕ್ತರು ಮತ್ತು ದೇವರ ನಡುವಿನ ಮಧ್ಯವರ್ತಿಗಳನ್ನು ದೂರವಿಟ್ಟು, ದೇವಾಲಯಕ್ಕೆ ಹೋಗುವ ಬದಲು ಮನೆಯಲ್ಲೇ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿರೆಂದು ಕರೆ ನೀಡಿದ್ದರು. ಅವರ ಆಶಯಗಳು ಈಡೇರಿದ್ದರೆ, ಇಂದಿನ ಜಾತಿಯತೆ, ಭ್ರಷ್ಟಾಚಾರ, ಅಸ್ಪೃಶ್ಯತೆ ಇರುತ್ತಿರಲಿಲ್ಲ ಎಂದರು.

ಶಿವರಾತ್ರಿದೇಶೀಕೇಂದ್ರ ಸ್ವಾಮಿಜಿ ಬಸವಣ್ಣ ಮಾತನಾಡಿ, ಸ್ವಾಮಿ ವಿವೇಕಾನಂದರಂತಹವರು ಜೀವನವನ್ನು ಬದಲಾವಣೆ ಹಾಗೂ ಸಾಧನೆಗೆ ಮೆಟ್ಟಿಲು ಮಾಡಿಕೊಂಡರು. ನುಡಿದಂತೆ ನಡೆದವರು, ಅವರ ಬದುಕನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನೀಡುವ ದೊಡ್ಡ ಕೊಡುಗೆ ಎಂದರು.

ಸ‌ಮಾರಂಭದಲ್ಲಿ ಗಾವಡಗೆರೆ ನಟರಾಜಸ್ವಾಮೀಜಿ, ಮಾದಹಳ್ಳಿಯ ಸಾಂಬಸದಾಶಿವಸ್ವಾಮೀಜಿ, ಜಿಪಂ ಉಪಾಧ್ಯಕ್ಷೆ ಗೌರಮ್ಮ, ಸದಸ್ಯರಾದ ಕಟ್ಟನಾಯಕ, ಜಯಲಕ್ಷ್ಮೀರಾಜಣ್ಣ, ವೀರಶೆ„ವ ಮಹಾಸಭಾದ ಅಧ್ಯಕ್ಷ ರಮೇಶಕುಮಾರ್‌, ಮಹಿಳಾಘಟಕದ ಅಧ್ಯಕ್ಷ ಬಸಮ್ಮಣ್ಣಿವಜ್ರ, ಬಸವ ಬಳಗದ ಅಧ್ಯಕ್ಷ ಸೋಮಶೇಖರ್‌, ಅರ್ಪಿತಾ ಪ್ರತಾಪಸಿಂಹ, ಶಿಕ್ಷಕರಾದ ಚನ್ನವೀರಪ್ಪ, ಹರವೆಮಹದೇವ್‌, ತಹಶೀಲ್ದಾರ್‌ ಬಸವರಾಜ್‌, ಇಒ ಕೃಷ್ಣಕುಮಾರ್‌, ವೀರಶೈವ ಯುವಘಟಕದ ಅಧ್ಯಕ್ಷ ಚಂದ್ರು, ಡಾ.ವೃಷಬೇಂದ್ರಸ್ವಾಮಿ, ಬಸವರಾಜ್‌ ಇತರರಿದ್ದರು.

ಸಾಧಕರಿಗೆ ಸನ್ಮಾನ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ರ್‍ಯಾಂಕ್‌ ಪಡೆದಿರುವ ಉಯಿಗೌಡನಹಳ್ಳಿ ತೇಜಸ್‌, ವೈದ್ಯಕೀಯ ಸ್ನಾತಕೋತ್ತರ ವಿಭಾಗದಲ್ಲಿ ಚಿನ್ನದ ಪದಕಗಳಿಸಿರುವ ಡಾ.ಉಮಾಶಂಕರ್‌, ಮೂಳೆತಜ್ಞ ಡಾ|ಸಚ್ಚಿದಾನಂದಮೂರ್ತಿ, ಪಶುವೈದ್ಯ ಡಾ.ಷಡಕ್ಷರಿಸ್ವಾಮಿ, ಶಿರಸ್ತೇದಾರ್‌ ಪ್ರಭುಲಿಂಗಸ್ವಾಮಿ, ಶಿಕ್ಷಕ ಗಿರೀಶ್‌ ಹಾಗೂ ಎಸ್‌.ಎಸ್‌.ಎಲ್‌.ಸಿ-ಪಿಯುಸಿಯ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಂದೇ ಮೀಸಲಾತಿ ಸಂದೇಶ: ಶಾಸಕ ಎಚ್‌.ವಿಶ್ವನಾಥ್‌ ಮಾತನಾಡಿ, ಬಸವಣ್ಣನವರು ಅಂದೇ ರಾಜಕಾರಣಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರ ಆಡಳಿತದ ಅನುಭವವು ಹೊಸಬೆಳಕಿನಲ್ಲಿ ಅಧ್ಯಯನವಾಗಬೇಕಿದ್ದು, ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ಹಿಂದೆಯೇ ಮಾದಿಗರ ಮನೆಯಲ್ಲಿ ಸಹಪಂಕ್ತಿಭೋಜನ ನಡೆಸಿ, ತಮ್ಮ ಆಡಳಿತದಲ್ಲಿ ಮೀಸಲಾತಿಯ ಸಂದೇಶವನ್ನು ಜಾರಿಗೆ ತಂದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬುನಾದಿ ಹಾಕಿದ್ದರೆಂದು ಶ್ಲಾ ಸಿದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.