ಅಸಾಧ್ಯವಾದುದನ್ನು ಸಾಧಿಸಲು ಭಗೀರಥ ಸ್ಫೂರ್ತಿ


Team Udayavani, May 12, 2019, 3:00 AM IST

asadhya

ಮೈಸೂರು: ಗುರಿ ಮುಟ್ಟುವ ವರೆಗೂ ಬಿಡುವುದೇ ಇಲ್ಲ ಎನ್ನುವಂತೆ ಮನಸ್ಸು ಮಾಡಿದರೆ, ಅಸಾಧ್ಯವಾದುದನ್ನೂ ಸಾಧ್ಯವಾಗಿಸಬಹುದು ಎಂಬ ಸಂದೇಶವನ್ನು ಭಗೀರಥ ಮಹರ್ಷಿಗಳು ಸಮಾಜಕ್ಕೆ ಸಾರುವ ಮೂಲಕ ಸಾಧಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ಕಲಾಮಂದಿರದ ಮನೆಯಂಗಳದಲ್ಲಿ ಆಯೋಜಿಸಿದ್ದ ಭಗೀರಥ ಜಯಂತಿಯಲ್ಲಿ ಅವರು ಮಾತನಾಡಿದರು.

ಭಗೀರಥರು ತಪಸ್ಸು ಮಾಡಿದ್ದು ಒಂದು ಸಾವಿರ ವರ್ಷಗಳು ಎಂಬ ಪ್ರತೀತಿ ಇದೆ. ಸಾವಿರ ವರ್ಷ ಒಂದೇ ಒಂದು ಕಾರ್ಯ ಸಾಧನೆಗಾಗಿ ನಿರಂತರವಾಗಿ ಊಟ-ನಿದ್ದೆ ಎಲ್ಲವನ್ನು ಬಿಟ್ಟು ಮಾಡುವ ಪ್ರಯತ್ನ ಮನುಷ್ಯನ ಸಾಧನೆಗೆ ರೂಪಕವಾಗಿ ಪರಿಣಮಿಸಿದೆ. ಸಮಾಜಮುಖೀಯಾಗಿ ಕೆಲಸ ಮಾಡಲು, ಅಂದು ಕೊಂಡಿದ್ದನ್ನು ಸಾಧಿಸಲು ಯುವಕರಿಗೆ ಭಗೀರಥನ ಪ್ರಯತ್ನ ಪ್ರೇರಣೆಯಾಗಬೇಕು ಎಂದರು.

ಸರ್ಕಾರದ ವತಿಯಿಂದ ಇಂತಹ ಮಹಾಪುರುಷರ ಜಯಂತಿಗಳು ಆಚರಣೆಯಾಗುತ್ತಿರಬೇಕು. ಇಲ್ಲವಾದಲ್ಲಿ ಮಹಾಪುರುಷರನ್ನು ಮರೆತು ಬಿಡುತ್ತೇವೆ. ಇಲ್ಲವೇ ಅವರು ನೆನಪಿನಿಂದ ಹಿಂದೆ ಸರಿದುಬಿಡುತ್ತಾರೆ. ಇತ್ತೀಚಿಗೆ ಓದಿನ ಹವ್ಯಾಸಗಳು ನಮಗೆ ಕಡಿಮೆಯಾಗಿಬಿಟ್ಟಿದೆ. ಜಯಂತಿಗಳು ಆಗುತ್ತಿದ್ದರೆ ಅವರ ಸ್ಮರಣೆ ಸಾಧ್ಯವಾಗುತ್ತದೆ ಎಂದರು.

ಸಂದೇಶ: ಸಮಾಜದಲ್ಲಿ ಮೌಲ್ಯಗಳು ಕಡಿಮೆಯಾಗುತ್ತಿವೆ ಎನ್ನುವ ಈ ಸಂದರ್ಭದಲ್ಲಿ ಇಂತಹ ಮಹನೀಯರ ಸಂದೇಶಗಳನ್ನು ಕೇಳಿದಾಗ ನಮಗೆ ಹೊಸ ಚೈತನ್ಯ ಬಂದಂತೆ ಆಗುತ್ತದೆ. ಹೊಸ ಸಾಧನೆಗಳನ್ನು ಮಾಡಲು ಭರವಸೆ ಮತ್ತು ಧೈರ್ಯ ಬರುತ್ತದೆ. ಇಂತಹವರ ಸಂದೇಶಗಳನ್ನು ಹಂಚಿಕೊಳ್ಳುವಾಗ ಸಮಾಜದಲ್ಲಿ ಧನಾತ್ಮಕ ಶಕ್ತಿ ಸಂಚಲನಗೊಳ್ಳುತ್ತದೆ ಎಂದು ಹೇಳಿದರು.

ಭಗೀರಥ ಮಹರ್ಷಿಗಳು ಮಾಡಿದ ಸಾಧನೆ ಒಂದು ಸಮಾಜಕ್ಕೆ ಸೀಮಿತವಲ್ಲ. ಇಡೀ ಮನುಷ್ಯ ಕುಲಕ್ಕೆ ಅದು ಸಲ್ಲುವಂತದ್ದು. ಪುರುಷರು-ಮಹಿಳೆಯರು ಯಾರೇ ಸಾಧನೆ ಮಾಡಲಿ, ಸಮಾಜದ ಒಳಿತಿಗಾಗಿ, ಮಕ್ಕಳ ಭವಿಷ್ಯಕ್ಕಾಗಿ ಸಾಧನೆ ಮಾಡಬೇಕು. ಸಮಾಜಮುಖೀಯಾದ ಹಾಗೂ ಒಳ್ಳೆಯತನದ ಪ್ರಯತ್ನ ಯಾವತ್ತೂ ಸೋಲುವುದಿಲ್ಲ ಎಂಬುದನ್ನು ಹಲವು ನಿದರ್ಶನಗಳಲ್ಲಿ ನೋಡಿದ್ದೇವೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಚೆನ್ನಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್‌.ರಾಜು ಉಪಸ್ಥಿತರಿದ್ದರು.

ಭಗೀರಥ ಪ್ರಯತ್ನ: ಯಾರದರೂ ಬಲವಾದ ಪ್ರಯತ್ನ ಮಾಡುತ್ತಿದ್ದರೆ ಅದನ್ನು ಭಗೀರಥ ಪ್ರಯತ್ನ ಎನ್ನುತ್ತಾರೆ. ಎಲ್ಲರಿಗೂ ಭಗೀರಥ ಪ್ರಯತ್ನ ಸ್ಫೂರ್ತಿಯಾಗಿದೆ. ನಾವು ಏನಾದರೂ ಸಾಧಿಸುವ ಪ್ರಯತ್ನ ಮಾಡಿದರೆ ಭಗೀರಥರನ್ನು ಮಾದರಿಯಾಗಿಟ್ಟುಕೊಂಡು ಪ್ರಯತ್ನ ಮುಂದುವರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ ತಿಳಿಸಿದರು. ಕಪಿಲ ಮಹರ್ಷಿಗಳ ಶಾಪದಿಂದ ತಮ್ಮವರನ್ನು ವಿಮೋಚನೆಗೊಳಿಸಲು ಭಗೀರಥರು ಗಂಗೆಯನ್ನು ಭೂಲೋಕಕ್ಕೆ ತರುವ ಪ್ರಯತ್ನ ಬಹಳ ಕಠಿಣವಾದದ್ದು, ಈ ಪ್ರಯತ್ನದಲ್ಲಿ ಯಶಸ್ವಿಯಾಗಿ ಮಹಾನ್‌ ವ್ಯಕ್ತಿಯಾಗುತ್ತಾರೆ ಎಂದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.