ಹಿಂದುತ್ವದ ಮೂಲಕ ಕೋಮುವಾದ ಬಿತ್ತುವವರಿಗೆ ಭಾರತ ರತ್ನ ಬೇಡ: ಸಿದ್ದರಾಮಯ್ಯ
Team Udayavani, Oct 20, 2019, 1:32 PM IST
ಮೈಸೂರು: ಸಾವರ್ಕರ್ ಹಿಂದೂ ಮಹಾಸಭಾದಲ್ಲಿದ್ದರು. ಹಿಂದುತ್ವ ಪ್ರತಿಪಾದಕರು ಎಂಬ ಕಾರಣಕ್ಕಾಗಿಯೇ ಬಿಜೆಪಿಯವರು ಅವರಿಗೆ ಭಾರತ ರತ್ನ ಕೊಡುತ್ತಿದ್ದಾರೆ. ಗಾಂಧಿಯನ್ನು ಕೊಂದ ಆರೋಪಿಗೆ ಭಾರತ ರತ್ನ ಬೇಡ ಅಂತ ಹೇಳಿದ್ದೆ. ಎಂದು ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಹೇಳೀದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಿ.ಟಿ.ರವಿ ಟೀಕೆ ವಿಚಾರದಲ್ಲಿ ಸಿ.ಟಿ.ರವಿ ಒಬ್ಬ ಯಕಶ್ಚಿತ್ ರಾಜಕಾರಣಿ. ನಾನು ಹಿಂದೂಗಳಿಗೆ ಭಾರತ ರತ್ನ ಕೊಡಬೇಡಿ ಎಂದು ಹೇಳಿಲ್ಲ. ನಾನು ಕೂಡ ಒಬ್ಬ ಹಿಂದೂ. ಹಿಂದುತ್ವದ ಮೂಲಕ ಕೋಮಯವಾದ ಬಿತ್ತುವವರಿಗೆ ಬೇಡ. ಹಿಂದೂ ಹೆಸರಿನಲ್ಲಿ ಬೆಂಕಿ ಹಚ್ಚುವವರಿಗೆ ಬೇಡ ಅಂತ ಹೇಳಿದ್ದೆ ಎಂದು ಹೇಳಿದರು.
ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತೀರಾ ? : ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ, ಜನರ ಆಶೀರ್ವಾದ ಇದ್ದರೆ ನೋಡೋಣ. ರಾಜಕಾರಣ ಹೇಗೆ ಬರುತ್ತೆ ಅಂತ ಹೇಳೋಕೆ ಆಗಲ್ಲ. ಅವಕಾಶ ಸಿಕ್ಕರೆ ಮತ್ತೊಮ್ಮೆ ಸಿಎಂ ಆಗುತ್ತೇನೆ, ಇದರಲ್ಲಿ ತಪ್ಪೇನಿದೆ ? ಎಂದರು.
ನಂತರ ಮಾತಾನಾಡಿದ ಅವರು ಜಾತಿಗಣತಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಆಸಕ್ತಿ ಇಲ್ಲ. ಜಾತಿಗಣತಿ ವರದಿ ಸಿದ್ಧಪಡಿಸಿದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದರು. ಈಗ ಅವರು ಕರ್ತವ್ಯದಲ್ಲಿ ಇಲ್ಲ. ಆದರೆ ವರದಿ ಜಾರಿ ಮಾಡಲು ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ಹೇಳಿದರು.
ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಕಮಿಟ್ಮೆಂಟ್ ಇಲ್ಲ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್ನರನ್ನು ಹತ್ತಿರಕ್ಕೆ ಸೇರಿಸುವುದಿಲ್ಲ. ದಲಿತರು, ಹಿಂದುಳಿದವರ ಅಭಿವೃದ್ಧಿ ಬೇಕಾಗಿಲ್ಲ. ಸ್ವಾತಂತ್ರ್ಯ ಬಂದ ನಂತರ ಆಯಾ ಜಾತಿಯ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಏನು ಅಂತ ಅರ್ಥ ಮಾಡಿಕೊಳ್ಳಬೇಕಿತ್ತು. ಅದಕ್ಕಾಗಿಯೇ ಜಾತಿಗಣತಿ ಮಾಡಿಸಿದೆ. ಆ ವರದಿಯನ್ನು ಜಾರಿ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಜಾತಿಗಣತಿ ವರದಿ ಜಾರಿ ಮಾಡದೇ ಇದ್ದರೆ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ