ಭಯವೇ ಧರ್ಮದ ಮೂಲ: ಹಂಸಲೇಖ


Team Udayavani, Sep 25, 2017, 1:14 PM IST

mys1.jpg

ಮೈಸೂರು: ದೇಶದ ಜನತಂತ್ರ ವ್ಯವಸ್ಥೆಯ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಂಡು ಜನತಂತ್ರ ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕವಿಗಳು ಎಚ್ಚರವಾಗಬೇಕು ಎಂದು ಸಂಗೀತ ನಿರ್ದೇಶಕ ಡಾ.ಹಂಸಲೇಖ ಅಭಿಪ್ರಾಯಪಟ್ಟರು. ವಿಶ್ವವಿಖ್ಯಾತ ನಾಡಹಬ್ಬ ದಸರಾ ಅಂಗವಾಗಿ ಕವಿಗೋಷ್ಠಿ ಉಪ ಸಮಿತಿಯಿಂದ ನಗರದ ಜಗನ್ಮೋಹನ ಅರಮನೆಯಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ದಯವೇ ಧರ್ಮದ ಮೂಲವಯ್ಯ, ದಯವಿಲ್ಲದ ಧರ್ಮ ಅದ್ಯಾವುದಯ್ಯ, ದಯೆ ಇರಬೇಕು ಸಕಲ ಪ್ರಾಣಿಗಳಲ್ಲಿ, ಕೂಡಲ ಸಂಗಮ ದೇವ ಎಂಬುದು ಬಸವಣ್ಣನ ವಚನವಾಗಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಇದು ಬದಲಾಗಿದ್ದು, ಭಯವೇ ಧರ್ಮದ ಮೂಲವಯ್ಯ, ಭಯವಿಲ್ಲದ ಧರ್ಮ ಯಾವುದಯ್ಯ, ಭಯವಿರಬೇಕು ಸಕಲ ಪ್ರಾಣಿಗಳಲ್ಲಿ, ಬೇಗ ನುಂಗಿಕೋ ಅಯ್ಯ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜನತಂತ್ರದ ಉಳಿವು: ದೇಶದಲ್ಲಿ ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎಂಬುದು ಜನತಂತ್ರ ವ್ಯವಸ್ಥೆಯ ಆಶಯವಾಗಿದೆ. ಆದರೆ ಇಂದು ದೇಶದಲ್ಲಿ ಭಯವೇ ಧರ್ಮವಾಗಿದ್ದು, ಈ ನಿಟ್ಟಿನಲ್ಲಿ ಜನತಂತ್ರವನ್ನು ಉಳಿಸಬೇಕೆಂಬುದು ಕವಿಗೋಷ್ಠಿಯ ಆಶಯವಾಗಬೇಕಿದೆ ಎಂದರು.  ಇಂದು ಉತ್ತರ ಕೊರಿಯಾ ಮತ್ತು ಅಮೇರಿಕಾದ ನಡುವೆ ಮಾತಿನ ಯುದ್ಧ ಆರಂಭವಾಗಿದ್ದು, ಈ ಯುದ್ಧ ಮಾತಿನಲ್ಲೇ ಕೊನೆಯಾಗುವಂತೆ ಉದಯೋನ್ಮುಖ ಕವಿಗಳು ಕಾವ್ಯ ರಚನೆ ಮಾಡಬೇಕು ಎಂದು ಹೇಳಿದರು.

ಅವಗಣನೆ: ಕವಿ ಡಾ.ಸಿದ್ದಲಿಂಗಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲೂ ಕವಿಗಳು ಉತ್ತಮ ಕವಿತೆಗಳನ್ನು ರಚಿಸುತ್ತಿದ್ದಾರೆ. ಆದರೆ ಕವಿತೆಗಳನ್ನು ಕೇಳುವವರು ಮತ್ತು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಇನ್ನೂ ಕವಿಗಳು ಅವಗಣನೆಗೆ ಒಳಗಾಗಿರುವ ಇಂತಹ ಸ್ಥಿತಿಯಲ್ಲಿ ದಸರೆಯ ನಾಲ್ಕು ವಿವಿಧ ಕವಿಗೋಷ್ಠಿ ನಡೆಸುತ್ತಿರುವುದು ಅಭಿನಂದನೀಯ.

ಅಲ್ಲದೆ ನಾಡೋಜ ನಿಸಾರ್‌ ಅಹಮದ್‌ ನಾಡಹಬ್ಬ ದಸರೆಯನ್ನು ಉದ್ಘಾಟಿಸಿದ್ದು ಕವಿಗಳಿಗೆ ದೊರೆತ ಗೌರವ ಆಗಿದೆ. ಕಾವ್ಯ ಓದುವುದರಿಂದ ಸಂತೋಷ, ಉಲ್ಲಾಸ ದೊರೆಯುವ ಜತೆಗೆ ಬುದ್ದಿ, ಬಾವಗಳ ಪ್ರಚೋಧನೆಯಾಗುತ್ತದೆ ಎಂದ ಅವರು, ಕವಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿದರೆ ಸಮಾಜ ಅವರನ್ನು ನಮ್ಮವನೆಂದು ಒಪ್ಪಿಕೊಳ್ಳಲಿದೆ ಎಂದರು.

ಕೈಕೊಟ್ಟ ಕರೆಂಟ್‌: ಸಚಿವರು ಗರಂ
ದಸರಾ ಕವಿಗೋಷ್ಠಿ ಉದ್ಘಾಟನಾ ಸಮಾರಂ¸‌ದಲ್ಲಿ ಪದೇ ಪದೇ ಕರೆಂಟ್‌ ಕೈಕೊಡುತ್ತಿತ್ತು. ಸಚಿವ ಮಹದೇವಪ್ಪ ಅವರ ಬಾಷಣದ ವೇಳೆಯೂ ಕರೆಂಟ್‌ ಕಟ್‌ ಆಯಿತು. ಇದರಿಂದ ಅಸಮಾದಾನಗೊಂಡ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರ ಮೂಲಕ ಚೆಸ್ಕಾಂ ಅಧಿಕಾರಿಗೆ ಕರೆ ಮಾಡಿ ಪವರ್‌ ಕಟ್‌ ಮಾಡದಂತೆ ಸೂಚಿಸಿದರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಗಾಯಕಿ ಲತಾ ಹಂಸಲೇಖ, ಮೇಯರ್‌ ಎಂ.ಜೆ.ರವಿಕುಮಾರ್‌, ಉಪ ವಿಶೇಷಾಧಿಕಾರಿ ಡಾ ಬಿಕೆಎಸ್‌ ವರ್ಧನ್‌, ಕಾರ್ಯಧ್ಯಕ್ಷೆ  ಡಾ.ಎನ್‌.ಕೆ.ಲೋಲಾಕ್ಷಿ, ಉಪಾಧ್ಯಕ್ಷರಾದ ರತ್ನಅರಸ್‌, ಪ್ರಸನ್ನ ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.