ಹಕ್ಕಿಜ್ವರ: ಆರು ಸಾವಿರಕ್ಕೂ ಹೆಚ್ಚು ಕೋಳಿಗಳ ಹನನ


Team Udayavani, Mar 18, 2020, 3:00 AM IST

6savirakku

ಮೈಸೂರು: ನಗರದ ಕುಂಬಾರಕೊಪ್ಪಲಿನಲ್ಲಿ ಹಕ್ಕಿಜ್ವರ (ಎಚ್‌5ಎನ್‌1) ದೃಢಪಟ್ಟ ಹಿನ್ನೆಲೆಯಲ್ಲಿ ಇತರೆಡೆಗೆ ಸೋಂಕು ಹರಡದಂತೆ ಎಚ್ಚರವಹಿಸಿರುವ ಜಿಲ್ಲಾಡಳಿತ, ಕುಂಬಾರಕೊಪ್ಪಲಿನ ಒಂದು ಕಿ.ಮೀ. ವ್ಯಾಪ್ತಿಯಲ್ಲಿನ ಕೋಳಿ ಮಾಂಸದ ಅಂಗಡಿಗಳನ್ನು ಬಂದ್‌ ಮಾಡಿಸಿದೆ.

ಹಕ್ಕಿಜ್ವರದಿಂದ ಕೋಳಿ ಸಾವನ್ನಪ್ಪಿದ್ದ ಕುಂಬಾರಕೊಪ್ಪಲಿನ ರಾಮಚಂದ್ರ ಅವರ ಮನೆಯನ್ನು ಕೇಂದ್ರವಾಗಿಟ್ಟುಕೊಂಡು, ಸುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿನ 17,820 ಮನೆಗಳ ಪೈಕಿ 144 ಮನೆಗಳಲ್ಲಿ ಪಕ್ಷಿಗಳನ್ನು ಸಾಕಲಾಗಿದೆ. 1252 ನಾಟಿಕೋಳಿ, ಫೌಲ್ಟ್ರಿಫಾರಂನಲ್ಲಿದ್ದ 5,100 ಬಾಯ್ಲರ್‌ ಕೋಳಿಗಳು, 254 ಸಾಕು ಪಕ್ಷಿಗಳು, 18 ಟರ್ಕಿ ಕೋಳಿಗಳು ಸೇರಿದಂತೆ 6,436 ಸಾಕುಪಕ್ಷಿಗಳನ್ನು ಹನನ ಮಾಡಲು ಗುರುತಿಸಲಾಗಿದೆ.

ನಗರದ ಹೊರ ವರ್ತುಲ ರಸ್ತೆಯ ಮೇಟಗಳ್ಳಿಯ ಅಶ್ವಿ‌ನಿ ಫೌಲ್ಟ್ರಿಫಾರಂನಲ್ಲಿರುವ ಕೋಳಿಗಳನ್ನು ಸಾಯಿಸಿ ಹೂತು ಹಾಕುವಂತೆ ಫೌಲ್ಟ್ರಿಫಾರಂ ಮಾಲೀಕರಿಗೆ ನಗರ ಪಾಲಿಕೆಯಿಂದ ಸೂಚಿಸಲಾಗಿತ್ತು. ಮಂಗಳವಾರ ನಗರಪಾಲಿಕೆ ವತಿಯಿಂದಲೇ ತೋಟಕ್ಕೆ ಜೆಸಿಬಿ ಕಳುಹಿಸಿ ಬೃಹತ್‌ ಗುಂಡಿಯನ್ನು ತೋಡಿಸಿ,

ಪಶುಪಾಲನಾ ಇಲಾಖೆ ಸಿಬ್ಬಂದಿ 5,100 ಬಾಯ್ಲರ್‌ ಕೋಳಿಗಳನ್ನು ಸಾಯಿಸಿ, ಗುಂಡಿಗೆ ಸುಣ್ಣ-ಉಪ್ಪು ಸುರಿದು, ರಾಸಾಯನಿಕವನ್ನು ಸಿಂಪಡಿಸಿದ ನಂತರ ಕೋಳಿಗಳನ್ನು ಹೂತು ಹಾಕಿದರು. ಇದೇ ರೀತಿ ಕುಂಬಾರಕೊಪ್ಪಲು ಸ್ಮಶಾನದ ಬಳಿಯಲ್ಲೂ ಸಾವಿರಾರು ಕೋಳಿಗಳನ್ನು ಸಾಯಿಸಿ, ಹೂಳಲಾಯಿತು.

ಕಣ್ಣೀರಿಟ್ಟ ಮಾಲೀಕರು: ಕಳೆದ 23 ವರ್ಷಗಳಿಂದ ಫೌಲ್ಟ್ರಿಫಾರಂ ನಡೆಸಿಕೊಂಡು ಬಂದಿರುವ ಮಾಲೀಕರಾದ ಶ್ರೀನಿವಾಸ, ರಾಮಚಂದ್ರ ಅವರು ಕೋಳಿಗಳ ಹನನ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಕಣ್ಣೀರಿಟ್ಟರು. ಸೋಮವಾರ ರಾತ್ರಿ ಅಧಿಕಾರಿಗಳು ಬಂದು ಹಕ್ಕಿಜ್ವರ ಬಂದಿರುವುದರಿಂದ ನಿಮ್ಮ ಫಾರಂನಲ್ಲಿರುವ ಕೋಳಿಗಳನ್ನ ಸಾಯಿಸಬೇಕು.

ಬೆಳಗ್ಗೆ ನಮ್ಮದೇ ಜೆಸಿಬಿ ಬರಲಿದ್ದು, ಹಳ್ಳತೋಡಿ ಹೂತು ಹಾಕುವುದಾಗಿ ತಿಳಿಸಿ ಹೋದರು. ನಮಗೆ ನಷ್ಟವಾದರೂ ಜನರ ಹಿತ ಮುಖ್ಯ. ಜಿಲ್ಲಾಧಿಕಾರಿಗಳ ಆದೇಶಕ್ಕೆ ನಾವು ತಲೆಬಾಗುತ್ತೇವೆ. ಹೀಗಾಗಿ ಸರ್ಕಾರದ ನಿಯಮವನ್ನು ಪಾಲಿಸುತ್ತಿದ್ದೇವೆ. ಈ ಕಾರ್ಯಾಚರಣೆಯಿಂದ ನಮಗೆ ಅಂದಾಜು 7 ಲಕ್ಷ ರೂ.ಗಳಷ್ಟು ನಷ್ಟ ಉಂಟಾಗಿದೆ.

ಆದರೆ, ಪರಿಹಾರ ಕೊಡುವ ಬಗ್ಗೆ ಈವರೆಗೆ ನಮಗೆ ಯಾರೂ ಮಾಹಿತಿ ನೀಡಿಲ್ಲ. ಕೋಳಿಗಳನ್ನೇ ನಂಬಿ ನಾವು ಜೀವನ ನಡೆಸುತ್ತಿದ್ದೇವೆ. ಮುಂದಾದರೂ ನಮಗೆ ಒಂದಿಷ್ಟು ಪರಿಹಾರ ಕೊಟ್ಟರೆ ಸಹಾಯವಾಗಲಿದೆ ಎಂದು ಅಳಲು ತೋಡಿಕೊಂಡರು.

ಕೋಳಿ ಮಾಂಸದ ಅಂಗಡಿಗಳ ಬಂದ್‌ : ಕುಂಬಾರಕೊಪ್ಪಲು, ಮೇಟಗಳ್ಳಿ, ಹೆಬ್ಟಾಳು ಮುಖ್ಯರಸ್ತೆ, ಸೂರ್ಯ ಬೇಕರಿ, ಮಹದೇಶ್ವರ ಬಡಾವಣೆಯಲ್ಲಿರುವ ಕೋಳಿಮಾಂಸದ ಅಂಗಡಿಗಳನ್ನು ಬಂದ್‌ ಮಾಡಿಸಲಾಯಿತು. ಮಹಾ ನಗರಪಾಲಿಕೆ ಸಿಬ್ಬಂದಿ, ಕೋಳಿ ಮಾಂಸದ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡುವ ಜತೆಗೆ ಮೈಕ್‌ನಲ್ಲಿ ಪ್ರಚಾರ ಮಾಡಿದ್ದರು.

ಹೀಗಾಗಿ ಈ ಭಾಗದ ಕೋಳಿ ಮಾಂಸದ ಅಂಗಡಿಗಳ ಬಂದ್‌ ಮಾಡಲಾಗಿತ್ತು. ಆದರೆ, ಮಾಂಸದ ಅಂಗಡಿಗಳು ಎಂದಿನಂತೆ ಬಾಗಿಲು ತೆರೆದಿದ್ದರಿಂದ ಕುರಿ-ಮೇಕೆ ಮಾಂಸ ಹಾಗೂ ಮೀನು ಅಂಗಡಿಗಳಲ್ಲಿ ಬೇಡಿಕೆ ಹೆಚ್ಚಾಗಿತ್ತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.