ಹುಣಸೂರಲ್ಲಿ ಬಿರ್ಸಾಮುಂಡರ 147 ನೇ ಜಯಂತಿ ಆಚರಣೆ

ಸೌಕರ್ಯ ಕಲ್ಪಿಸಿ ಇಲ್ಲವೇ ಕಾಡು ಪ್ರವೇಶ ಎಚ್ಚರಿಕೆ

Team Udayavani, Nov 21, 2022, 9:34 PM IST

1-dadsdasd

ಹುಣಸೂರು: ಆದಿವಾಸಿಗಳ ಅದಿ ನಾಯಕ ಬಿರ್ಸಾಮುಂಡರವರು ಸ್ವಾತಂತ್ರ್ಯ ಪೂರ್ವದಲ್ಲೇ ಬ್ರಿಟಿಷರ ವಿರುದ್ಧ ಹೋರಾಡುವ ಮೂಲಕ ಆದಿವಾಸಿಗಳಿಗೆ ಗೌರವ ತಂದು ಕೊಟ್ಟಿದ್ದಾರೆಂದು ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟ್ಯಾನ್ಲಿ ಅಭಿಪ್ರಾಯಪಟ್ಟರು.

ನಗರದ ಟ್ಯಾಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಡೀಡ್ ಸಂಸ್ಥೆಯು ಟ್ಯಾಲೆಂಟ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಬಿರ್ಸಾಮುಂಡರ 147 ನೇ ಜಯಂತಿಯಲ್ಲಿ ಮಾತನಾಡಿದ ಅವರು ಆದಿವಾಸಿಗಳು ಬಿರ್ಸಾಮುಂಡರ ಜೀವನ, ಹೋರಾಟದ ಬದುಕನ್ನು ಅರಿಯಬೇಕು. ಅತ್ತ ಕಾಡು ಇಲ್ಲದೆ ಇತ್ತ ನಾಡು ಇಲ್ಲದೆ ಕಷ್ಟದ ಜೀವನ ಸಾಗಿಸುತ್ತಿರುವ ಆದಿವಾಸಿಗಳನ್ನು ಅರಣ್ಯ ಇಲಾಖೆಯು ತನ್ನದೆ ರೀತಿಯ ಕಾನೂನುಗಳನ್ನು ತಂದು ಆದಿವಾಸಿಗಳನ್ನು ಕಾಡಿನಿಂದ ಹೊರಹಾಕಿ ಅವರ ಬದುಕನ್ನು ಅತಂತ್ರಗೊಳಿಸಿದ್ದು, ಬಿರ್ಸಾಮುಂಡರ ಮಾದರಿಯಲ್ಲಿ ಹೋರಾಟ ನಡೆಸಿ ತಮ್ಮ ಹಕ್ಕು ಹಾಗೂ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳುವಂತೆ ಸಲಹೆ ನೀಡಿದರು.

ಉದ್ಘಾಟಿಸಿದ ಟ್ಯಾಲೆಂಟ್ ಸಂಸ್ಥೆಯ ನಿರ್ದೇಶಕ ನವೀನ್‌ರೈ ಮಾತನಾಡಿ ಪ್ರಕೃತಿಯ ರಕ್ಷಣೆಯಲ್ಲಿ ಆದಿವಾಸಿಗಳ ಪಾತ್ರ ಅಪಾರವಿದೆ. ಆದಿವಾಸಿಗಳು ವಿದ್ಯಾವಂತರಾಗಬೇಕು, ಕಾನೂನು ಬಗ್ಗೆ ತಿಳಿದುಕೊಂಡಿರಬೇಕೇಂದರು.

ಬಿರ್ಸಾಮುಂಡ ಬ್ರಿಟಿಷರ ಕುತಂತ್ರಕ್ಕೆ ಬಲಿ
ಒಡನಾಡಿ ಸಂಸ್ಥೆಯ ಪರಶುರಾಮ್ ಮಾತನಾಡಿ ಅರಣ್ಯ ಸಂಪತ್ತನ್ನು ಲೂಟಿ ಮಾಡಲು ಬ್ರಿಟಿಷರು ತಂತ್ರಗಾರಿಕೆ ಮಾಡುತ್ತಾರೆ. ಬಿರ್ಸಾಮುಂಡರವರು ಬ್ರಿಟಿಷರ ವಿರುದ್ಧ ಗೆರಿಲ್ಲಾ ಮಾದರಿ ಯುದ್ಧನೀತಿಯನ್ನು ಜಾರಿಗೆ ತರುವ ಮೂಲಕ ಬ್ರಿಟಿಷರಿಗೆ ಭಯವನ್ನು ಹುಟ್ಟಿಸಿ ಹೋರಾಟ ನಡೆಸಿದರೂ ಅವರ ಕುತಂತ್ರಕ್ಕೆ ಬಿರ್ಸಾಮುಂಡ ಬಲಿಯಾದರೆಂದರು.

ಡೀಡ್‌ಸಂಸ್ಥೆಯ ನಿರ್ದೇಶಕ ಡಾ.ಎಸ್.ಶ್ರೀಕಾಂತ್ ಮಾತನಾಡಿ ಕೇಂದ್ರ ಸರಕಾರವು ಜನಜಾತಿ ಗೌರವ ದಿವಸ್ ಎಂದು ಘೋಷಣೆ ಮಾಡಿರುವುದು ಆದಿವಾಸಿ ಸಮುದಾಯಕ್ಕೆ ಗೌರವ ತಂದಿದೆ. ಆದಿವಾಸಿಗಳಿಗೆ ಅರಣ್ಯ ಹಕ್ಕಿನ ಮಾನ್ಯತಾ ಕಾಯ್ದೆಯಲ್ಲಿ ಅವರ ಪಾರಂಪರಿಕ ಹಕ್ಕುಗಳನ್ನು ನೀಡಬೇಕು. ಮತ್ತು ಹೈಕೋರ್ಟ್ ನೀಡಿರುವ ತೀರ್ಪಿನಂತೆ ೩೪೧೮ಕುಟುಂಬಗಳಿಗೆ ಪುನರ್ವಸತಿಗೊಳಿಸಬೇಕೆಂದರು.

ಕಾಡು ಪ್ರವೇಶ ಎಚ್ಚರಿಕೆ
ಬುಡಕಟ್ಟು ಕೃಷಿಕರ ಸಂಘದ ಪಿ.ಕೆ.ರಾಮು ಮತ್ತು ಗಿರಿಜರವರು ಮಾತನಾಡಿ ೭೫ನೇಅಮೃತ ಮಹೋತ್ಸವದಲ್ಲಿ ಜನಜಾತಿ ಗೌರವ ದಿವಸ್ ಘೋಷಿಸಿರುವುದು, ಆದಿವಾಸಿ ಮಹಿಳೆ ದ್ರೌಪತಿ ಮುರ್ಮುರನ್ನು ರಾಷ್ಟçಪತಿಯನ್ನಾಗಿಸಿರುವುದು ಆದಿವಾಸಿಗಳಿಗೆ ಗೌರವ ತಂದಿದೆ. ಆದಿವಾಸಿಗಳ ಪಾರಂಪರಿಕ ಅರಣ್ಯ ಹಕ್ಕುಗಳನ್ನು ಮಾನ್ಯಮಾಡಿ ಹಕ್ಕುಪತ್ರ ನೀಡದಿದ್ದರೆ ನಾವು ಕಾಡು ಪ್ರವೇಶ ಮಾಡುತ್ತೇವೆ. ನಮ್ಮ ಅರಣ್ಯ ಸಂಪತ್ತನ್ನು ನಾವೇ ಉಳಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಇದೇ ವೇಳೆ ಕಳೆದ ೪೨ವರ್ಷಗಳಿಂದ ಹೋರಾಟ ನಡೆಸಿರುವ ಭರತವಾಡಿ ಹಾಡಿಯ ಸಣ್ಣಮ್ಮ, ನೇರಳಕುಪ್ಪೆ ಹಾಡಿಯ ಕೆಂಪಮ್ಮರನ್ನು ಗೌರವಿಸಲಾಯಿತು. ಆದಿವಾಸಿ ಬುಡಕಟ್ಟುಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕೆಲಸಕಾರ್ಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಡೀಡ್‌ನ ತಾಲೂಕು ಸಂಯೋಜಕರಾದ ಪ್ರಕಾಶ್, ಜಯಪ್ಪ, ಬೊಮ್ಮಿ, ವಿಠಲ್, ರಕ್ಷಿತ, ಶಿಕ್ಷಕರು ಹಾಗೂ ವಿವಿಧ ಹಾಡಿ ಮಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.