ಜು.6ರಿಂದ ಬಿಜೆಪಿ ಸದಸ್ಯತ್ವ ಅಭಿಯಾನ
Team Udayavani, Jul 4, 2019, 3:00 AM IST
ತಿ.ನರಸೀಪುರ: ಜಿಲ್ಲೆಯಲ್ಲಿ 2 ಲಕ್ಷ ಜನರನ್ನು ಹೊಸದಾಗಿ ಬಿಜೆಪಿ ಸದಸ್ಯರನ್ನಾಗಿ ಮಾಡುವ ಗುರಿ ಇದೆ ಎಂದು ಮೈಸೂರು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ ತಿಳಿಸಿದರು.
ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 6 ರಿಂದ ಆಗಸ್ಟ್ 11 ರವರೆಗೆ ಅಭಿಯಾನ ನಡೆಯಲಿದೆ. ಪ್ರಚಾರದ ಮೂಲಕ ಅಭಿಯಾನ ಮಾಡಿ ಹೆಚ್ಚಿನ ಸದಸ್ಯತ್ವ ಮಾಡಬೇಕಿದೆ. ಬಿಜೆಪಿಗೆ ಹೆಚ್ಚು ಮತ ಬೀಳದ ಬೂತ್ಗಳಲ್ಲಿ ಹೆಚ್ಚಿನ ಸದಸ್ಯತ್ವ ಮಾಡಬೇಕಿದೆ ಎಂದರು.
ಸಂಘಟನೆ: ಪ್ರತಿ 6 ವರ್ಷಗಳಿಗೊಮ್ಮೆ ರಾಷ್ಟ್ರಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡುವ ಕಾರ್ಯಕ್ರಮ ಇದಾಗಿದೆ ಎಂದರು.
ಪ್ರತಿನಿಧಿ ನೇಮಕ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಸಭೆಯಲ್ಲಿ ಮೈಸೂರು ಜಿಲ್ಲೆಗೆ 2 ಲಕ್ಷ ಸದಸ್ಯತ್ವದ ನೋಂದಣಿ ಗುರಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಹೇಮಂತ್ಕುಮಾರ್ ಅವರನ್ನು ಸದಸ್ಯತ್ವ ಅಭಿಯಾನದ ಪ್ರಮುಖರನ್ನಾಗಿ ಮಾಡಿದ್ದೇವೆ. ಸಹ ಪ್ರಮುಖರಾಗಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಅವರನ್ನು ನೇಮಿಸಲಾಗಿದೆ. ಇದೇ ರೀತಿಯಲ್ಲಿ ಪ್ರತಿ ತಾಲೂಕಿನಲ್ಲೂ ಓರ್ವ ಪ್ರತಿನಿಧಿ ನೇಮಕ ಮಾಡಲಾಗಿದೆ ಎಂದು ಹೇಳಿದರು.
ಬಿಜೆಪಿ ಸೇರಲು ತವಕ: ಕಳೆದ ವಿಧಾನಸಭೆ ಚುನಾವಣೆಗಿಂತ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ಚಲಾಯಿಸಿದ್ದಾರೆ. ಅದರಲ್ಲೂ ಯುವ ಸಮುದಾಯ ಮೋದಿ ನೇತೃತ್ವದಲ್ಲಿ ಬಿಜೆಪಿ ಸೇರಲು ತವಕಿಸುತ್ತಿದ್ದಾರೆ. ಅಂತಹವರನ್ನು ಪಕ್ಷಕ್ಕೆ ಬರಮಾಡಿ ಮಾಡಿಕೊಂಡಲ್ಲಿ ಸಂಘಟನೆಗೆ ಬಹಳ ಅನುಕೂಲವಾಗಲಿದೆ. ಅಭಿಯಾನವನ್ನು ಪರಿಣಾಮಕಾರಿಯಾಗಿ ಮಾಡಲು ಸ್ಥಳೀಯ ಮಟ್ಟದ ಎಲ್ಲಾ ನಾಯಕರು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಪ್ರಸಾದ್ ಅಭಿಮಾನ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರ ಮೇಲಿನ ಅಭಿಮಾನ, ಮೋದಿಯವರ ನಾಯಕತ್ವ, ಪಕ್ಷದ ಮೇಲಿನ ವಿಶ್ವಾಸಕ್ಕೆ ಜನ ಬೆಂಬಲ ನೀಡಿ ಪ್ರಸಾದ್ ಅವರನ್ನು ಗೆಲ್ಲಿಸುವ ಮೂಲಕ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಇಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಡಾ. ಎನ್. ಎಲ್. ಭಾರತೀಶಂಕರ್, ಮಾಜಿ ಜಿಲ್ಲಾಧ್ಯಕ್ಷ ಹೇಮಂತ್ಕುಮಾರ್, ಕ್ಷೇತ್ರಾಧ್ಯಕ್ಷ ಹಿರಿಯೂರು ಪರಶಿವಮೂರ್ತಿ, ಪುರಸಭಾ ಸದಸ್ಯ ಕೆ. ಕಿರಣ್, ಟೈಲರ್ ಸಿದ್ದರಾಜು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?