BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ
ಯದುವೀರ್ ಅವರನ್ನು ಗೆಲ್ಲಿಸಿಕೊಂಡು ಬರುವುದೇ ನನ್ನ ಗುರಿ
Team Udayavani, Mar 18, 2024, 6:48 PM IST
ಮೈಸೂರು: ‘ಬಿಜೆಪಿ 10 ವರ್ಷದ ಹಿಂದೆ ನನಗೆ ಟಿಕೆಟ್ ಕೊಡುವಾಗ ಪಕ್ಷ ಯಾರನ್ನೂ ಕೇಳಿರಲಿಲ್ಲ, 10 ವರ್ಷದ ನಂತರ ಬೇರೆಯವರಿಗೆ ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ’ ಎಂದು ಸಂಸದ ಪ್ರತಾಪ್ ಸಿಂಹ ಸೋಮವಾರ ಹೇಳಿಕೆ ನೀಡಿದ್ದಾರೆ.
ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ “ಮಾಧ್ಯಮ ಸಂವಾದ” ‘ಸಂಕಲ್ಪ ಪತ್ರಕ್ಕೆ ನಿಮ್ಮ ಸಲಹೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದರು.
”ನನಗೆ 10 ವರ್ಷದ ಹಿಂದೆ ನನಗೆ ಟಿಕೆಟ್ ಕೊಡುವಾಗ ಯಾರನ್ನಾದರೂ ಪಕ್ಷ ಕೇಳಿತ್ತಾ? ನಾನು ಸೂಕ್ತ ಅಭ್ಯರ್ಥಿ ಎಂದು ಪಕ್ಷ ನನಗೆ ಟಿಕೆಟ್ ಕೊಟ್ಟು ಗೆಲ್ಲಿಸಿತು. ಈಗಲೂ ಟಿಕೆಟ್ ಕುರಿತಾಗಿ ಕಾರಣ ಹೇಳಬೇಕಾದ ಅಗತ್ಯ ಇಲ್ಲ” ಎಂದರು.
”ನಾನು ಸಂಸದನಾಗಿ ಹತ್ತು ವರ್ಷದಲ್ಲಿ ನಿರೀಕ್ಷೆ ಮೀರಿ ಕೆಲಸ ಮಾಡಿದ್ದೇನೆ. ಕ್ಷೇತ್ರದಲ್ಲಿ ಮಾತ್ರವಲ್ಲದೆ ಬೇರೆ ಕಡೆಗಳಲ್ಲೂ ಸಹಾನುಭೂತಿ ವ್ಯಕ್ತವಾಗಿದೆ. ಪಕ್ಷ ಸಂಘಟನೆಗೂ ನನ್ನನ್ನು ಬಳಸಿಕೊಳ್ಳಬಹುದು. ಕಾರ್ಯಕರ್ತರೊಂದಿಗೆ ಕೆಲಸ ಮಾಡುತ್ತೇನೆ. ಯದುವೀರ್ ಅವರನ್ನು ಗೆಲ್ಲಿಸಿಕೊಂಡು ಬರುವುದೇ ನನ್ನ ಮುಂದಿರುವ ಗುರಿ” ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್ ಸೇರಿ ಬಿಜೆಪಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ