BJP ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ: ಎಸ್.ಟಿ.ಸೋಮಶೇಖರ್
Team Udayavani, Nov 8, 2023, 9:33 PM IST
ಮೈಸೂರು: ಜಾಮೂನು ಕೊಟ್ಟು ಪಕ್ಷಕ್ಕೆ ಸೇರಿಸಿಕೊಳ್ಳುವ ಬಿಜೆಪಿಯವರು ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿದ್ದವನನ್ನು ಅವರಾಗಿಯೇ ಬಿಜೆಪಿಗೆ ಸೇರಿಸಿಕೊಂಡರು. ಈಗ ಎಸ್.ಟಿ.ಸೋಮಶೇಖರ್ ಪಕ್ಷ ಬಿಟ್ಟರೆ ಬಿಡಲಿ ಎನ್ನುತ್ತಾರೆ. ನನ್ನನ್ನು ಪಕ್ಷ ಬಿಡಿಸಲು ಸಿದ್ಧವಾಗಿದ್ದಾರೆ. ನನ್ನ ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ? ಸಿಎಂ, ಡಿಸಿಎಂ ಹೊಗಳುವುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ ಎಂದು ಟೀಕಿಸಿದರು.
ನಾನು ಬಿಜೆಪಿ ಸೇರಿದ್ದು ಯಡಿಯೂರಪ್ಪ ಅವರನ್ನು ನೋಡಿ, ಈಶ್ವರಪ್ಪ ಅವರನ್ನು ನೋಡಿ ಅಲ್ಲ. ಈಶ್ವರಪ್ಪನಿಗೆ ಯಾವುದೇ ಬೆಲೆ ಇಲ್ಲ. ಬೆಲೆ ಇಲ್ಲದವರ ಹೇಳಿಕೆಗಳಿಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನನ್ನು ಪಕ್ಷದಿಂದ ಬಿಟ್ಟು ಹೋಗಲಿ ಎಂದು ಹೇಳಲು ಈಶ್ವರಪ್ಪ ಯಾರು?. ಅವರೇನು ರಾಜ್ಯಾಧ್ಯಕ್ಷರೆ? ಇಷ್ಟೆಲ್ಲಾ ಬೆಳವಣಿಗೆಗಳಾದ ಮೇಲೆ ನಾನು ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡ ಎಂದು ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್
Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ