ಪಿರಿಯಾಪಟ್ಟಣದ ಅರಸಿನ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ಕೊಲೆ ಶಂಕೆ
Team Udayavani, Jun 25, 2021, 12:26 PM IST
ಮೈಸೂರು: ಪಿರಿಯಾಪಟ್ಟಣ: ಪಟ್ಟಣದ ಅರಸಿನ ಕೆರೆಯಲ್ಲಿ ಅಪರಿಚತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪೊಲೀಸರು ಕೊಲೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಬೆಳಗಿನ ಜಾವ ನಸುಕಿನ ವೇಳೆಯಲ್ಲಿ ಸಾರ್ವಜನಿಕರು ಕೆರೆಯ ಏರಿಯ ಮೇಲೆ ವಾಕಿಂಗ್ ಹೋಗುವಾಗ ಕೆರೆಯ ದಡದಲ್ಲಿ
ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ್ದ ಸ್ಥಿತಿಯಲ್ಲಿದ್ದ ಶವ ತೇಲುತ್ತಿರುವುದನ್ನು ಕಂಡು ಗಾಬರಿಗೊಂಡು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.
ಇದನ್ನೂ ಓದಿ:ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವಕ ಆತ್ಮಹತ್ಯೆ: ಈ ಹಿಂದೆ ಎರಡು ಬಾರಿ ಪ್ರಯತ್ನ ಮಾಡಿದ್ದ!
ವ್ಯಕ್ತಿಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಕೆರೆಗೆ ಎಸೆಯಲಾಗಿದೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಎಸೆಲಾಗಿರುವ ಹಿನ್ನೆಲೆಯಲ್ಲಿ ಕೊಲೆ ಮಾಡಿ ಎಸೆದಿರುವ ಬಗ್ಗೆ ಶಂಕಿಸಲಾಗಿದೆ.
ಇದನ್ನೂ ಓದಿ:ಮೈಸೂರು: ಲಾಕ್ಡೌನ್ನಿಂದ ಕೆಲಸ ಇಲ್ಲದೇ ಮನನೊಂದ ಯುವಕ ಆತ್ಮಹತ್ಯೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್, ಡಿವೈಎಸ್ಪಿ ರವಿಪ್ರಸಾದ್, ಸಿಪಿಐ ಜಗದೀಶ್ ಹಾಗೂ ಬಿ.ಆರ್.ಪ್ರದೀಪ್, ಪಿಎಸ್ಐ ಸದಾಶಿವ ತಿಪ್ಪಾರೆಡ್ಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಗಿದ್ದು ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಿರಿಯಾಪಟ್ಟಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ