ಸಂಸ್ಕೃತಿ ಹೆಸರಿನಲ್ಲಿ ಸಂಕೋಲೆ: ವಿಷಾದ


Team Udayavani, Mar 24, 2017, 12:50 PM IST

mys7.jpg

ಎಚ್‌.ಡಿ.ಕೋಟೆ: ಕಲಿತ ಒಳ್ಳೆಯ ಗುಣಗಳು ಅಂಟುರೋಗ ಹರಡುವ ವೈರಸ್‌ ಮಾದರಿಯಲ್ಲಿ ಇತರರಿಗೂ ಹರಡಬೇಕು. ಅಂತೆಯೇ ಕೆಟ್ಟಗುಣಗಳು ಇತರಿಗೆ ಹರಡಬಾರದು ಆಗ ಮಾತ್ರ ದೇಶದ ಉದ್ಧಾರ ಸಾಧ್ಯ. ಸಂಸ್ಕೃತಿಯ ಹೆಸರಿನಲ್ಲಿ ಸಂಕೋಲೆಗಳಿಗೆ ಬಲಿಯಾಗಬಾರದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಹೇಳಿದರು.

ಪಟ್ಟಣದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿದ್ದ 3 ದಿನಗಳ ನಮ್ಮ ರಕ್ಷಣೆ ನಮ್ಮಿಂದಲೇ ಧೈರ್ಯ ಸ್ಥೈರ್ಯ ಆತ್ಮವಿಶ್ವಾಸಕ್ಕಾಗಿ ವಿದ್ಯಾರ್ಥಿನಿಯರಿಗೆ ಸ್ವಯಂ ತಕ್ಷಣಾ ತರಬೇತಿ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆತ್ಮರಕ್ಷಣೆಗಾಗಿ ಆರಂಭದಲ್ಲಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಿರುವ ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೂ  ತರಬೇತಿ ನೀಡುವ ಆಲೋಚನೆ ಇದೆ. ಕಿಡಿಗೇಡಿಗಳು ರಸ್ತೆಯಲ್ಲಿ ವಿದ್ಯಾರ್ಥಿನಿಯರನ್ನು ರೇಗಿಸುವ, ಅತ್ಯಾಚಾರಕ್ಕೆ ಯತ್ನಿಸುವ ಹಲವಾರು ಘಟನೆಗಳನ್ನು ನೋಡಿದ್ದೇವೆ. ಅಂತಹ ಸಂದರ್ಭಗಳಲ್ಲಿ ಹೆಣ್ಣು ಮಕ್ಕಳು ತಮ್ಮ ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಮಾನ ಪ್ರಾಣ ಆತ್ಮರಕ್ಷಣೆಗೆ ನಡೆಸುವ ಹಲ್ಲೆ ಅಪರಾಧವಲ್ಲ, ಕಾನೂನು ಆತ್ಮರಕ್ಷಣೆ ವ್ಯಕ್ತಿತ್ವ ಇದರ ಬಗ್ಗೆ ಸಮುದಾಯಕ್ಕೆ ತಿಳಿಸಿದಾಗ ಅಪರಾಧಗಳನ್ನು ತಡೆಗಟ್ಟಬಹುದು. ವಿದ್ಯಾರ್ಥಿಗಳು ಪ್ರತಿದಿನ ಹೀಗೇ ಇರಬೇಕು ಅನ್ನುವ ತೀರ್ಮಾನದಂತೆ ನಡೆಯಬೇಕು. ಬುದ್ಧ, ಬಸವ, ಅಂಬೇಡ್ಕರ್‌, ವಿವೇಕಾನಂದ,  ಭಗತ್‌ ಸಿಂಗ್‌ ಅವರ ಅದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕಾರ್ಯವಾದರೆ ಬಹುತೇಕ ವಿದ್ಯಾರ್ಥಿಗಳು ಸಮಾಜ ಮುಖೀಯಾಗುತ್ತಾರೆ ಎಂದು ತಿಳಿಸಿದರು.

ಅತೀ ಶೀಘ್ರದಲ್ಲಿ ತಾಲೂಕಿನಲ್ಲಿ 10 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೆವೆ. ಬಂದೂಕು ತರಬೇತಿ, ಇಂಗ್ಲಿಷ್‌ ಹಾಗೂ ಹಿಂದಿ ಭಾಷೆ ಕಲಿಕೆ ಸೇರಿದಂತೆ ಇನ್ನಿತರ ವಿಚಾರವಾಗಿ ತರಬೇತಿ ನೀಡಲಾಗುವುದು. ನಾಗರಿಕರು ಭಾಗವಹಿಸಿ ಯೋಜನೆಯ ಉಪಯೋಗ ಪಡೆದುಕೊಂಡು ಉತ್ತಮ ಗುಣಗಳು ಗುಣಮಟ್ಟದ ಸಾಧನೆಗಳ ಬಗ್ಗೆ ನೀವು ತಿಳಿದುಕೊಂಡು ಇತರರಿಗೂ ತಿಳಿಸುಬೇಕು.

ಎಲ್ಲಕ್ಕಿಂತ ಮಿಗಿಲಾಗಿ ಗಂಡು ಮಕ್ಕಳಷ್ಟೇ ಸ್ವಾತಂತ್ರ್ಯ ಹೆಣ್ಣುಮಕ್ಕಳಿಗೂ ಪೋಷಕರು ನೀಡುವಂತೆ ಪೋಷಕರಲ್ಲಿ ಮನವಿ ಮಾಡಿಕೊಂಡರು. ಕಾಲೇಜಿನ ಪ್ರಚಾರ್ಯ ಶಶಿಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಎಚ್‌.ಡಿ.ಕೋಟೆ ಮತ್ತು ಸರಗೂರು ಕಾಲೇಜಿನ ವಿದ್ಯಾರ್ಥಿನಿಯರು 3 ದಿನಗಳ ಕಲಿತ ತರಬೇತಿ ಪಡೆದ ಕರಾಟೆ ಪ್ರದರ್ಶನಗಳ ವಿವಿಧ ಭಂಗಿಗಳ ಪ್ರದರ್ಶನ ನೀಡಿದರು.

ಸರ್ಕಲ್‌ಇನ್ಸ್‌ಪೆಕ್ಟರ್‌ ಹರೀಶ್‌ಕುಮಾರ್‌, ಸಬ್‌ಇನ್ಸ್‌ಪೆಕ್ಟರ್‌ಗಳಾದ ಅಶೋಕ್‌, ಸುರೇಶ್‌, ತೋಟದ ಬೆಳೆಗಾರರ ಸಂಘದ ಅಧ್ಯಕ್ಷ ಮಲಾರಪುಟ್ಟಯ್ಯ, ಮಹದೇವಯ್ಯ, ತರಬೇತಿದಾರರಾದ ರವಿಶಂಕರ್‌, ಮನೋಜ್‌ಕುಮಾರ್‌, ಚಲಪತಿ, ಕಾಲೇಜಿನ ಉಪನ್ಯಾಸಕಿಯರಾದ ಉಷಾದೇವಿ, ಸವಿತ ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.