ಬೋರ್‌ವೆಲ್‌ ಹಾನಿಗೊಳಿಸಿ ನೀರು ನಿಲ್ಲಿಸಿದ ಭೂಪ


Team Udayavani, Apr 28, 2021, 3:29 PM IST

Borewell damage

ಎಚ್‌.ಡಿ.ಕೋಟೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನೆರೆ ಗ್ರಾಮದ ಕಿಡಿಗೇಡಿ ಯುವಕನೊಬ್ಬಇಡೀ ಗ್ರಾಮಕ್ಕೆ ಕುಡಿಯುವ ನೀರಿನ ಸಂಪರ್ಕಕಲ್ಪಿಸಿದ್ದ ಬೋರ್‌ವೆಲ್‌ಗೆ ಟ್ರ್ಯಾಕ್ಟರ್‌ನಿಂದ ಗುದ್ದಿರುವ ಘಟನೆ ತಾಲೂಕಿನ ಬಣ್ಣವಾಡಿ ಗ್ರಾಮದಲ್ಲಿ ಸಂಭವಿಸಿದೆ. ಇದರಿಂದ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ನೀರು ಪೂರೈಕೆ ಸ್ಥಗಿತವಾಗಿದೆ.

ಬಣ್ಣವಾಡಿ ಗ್ರಾಮಕ್ಕೆ ಹೊಂದಿಕೊಂಡಿರುವ ಜೊಂಪನಹಳ್ಳಿ ನಿವಾಸಿ ಮಹೇಶ್‌ ಎಂಬಾತ ಬಣ್ಣವಾಡಿ ಗ್ರಾಮದ ಯುವತಿಯೊಬ್ಬಳ ವಿಚಾರವಾಗಿ ಹಿಂದಿನಿಂದ ವೈಷಮ್ಯ ಇತ್ತು. ಹೀಗಾಗಿ ಮಹೇಶ್‌ ಬಣ್ಣವಾಡಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವ ಬೋರ್‌ವೆಲ್‌ಗೆ ಟ್ರ್ಯಾಕ್ಟರ್‌ನಿಂದ ಐದಾರು ಬಾರಿಗುದ್ದಿದ್ದಾನೆ. ಅಲ್ಲದೇ ಹಾರೆಯಿಂದ ಮೀಟಿ ನೀರಿನಸಂಪರ್ಕ ಕಡಿತಗೊಳಿಸಿದ್ದಾನೆ.

ಜೊತೆಗೆ ಭಾರಿಗಾತ್ರದ ಕಲ್ಲುಗಳನ್ನು ಪೈಪ್‌ಗಳ ಮೇಲೆ ಹಾಕಿದ್ದಾನೆ ಎಂದು ಬಣ್ಣವಾಡಿ ಗ್ರಾಮಸ್ಥರು ಆರೋಪಿಸಿದ್ದಾರೆ. ಕಳೆದ 3 ದಿನಗಳ ಹಿಂದೆ ಬಣ್ಣವಾಡಿ ಗ್ರಾಮಕ್ಕೆಆಗಮಿಸಿದ್ದ ಮಹೇಶ್‌ ಜಗಳ ತೆಗೆದು “ನಿಮ್ಮೂರಿಗೆ ಹೇಗೆ ನೀರು ಬರುತ್ತೆ ನಾನೂ ನೋಡುತ್ತೇನೆ’ ಎಂದು ಧಮಕಿ ಹಾಕಿದ್ದ. ಅದರಂತೆ ಬೋರ್‌ವೆಲ್‌ಹಾಳು ಮಾಡಿದ್ದಾನೆ.

ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಇಡೀ ಬೋರ್‌ವೆಲ್‌ಗೆ ವಿಷಬೆರೆಸಿ ಜನರನ್ನು ಸಾಯಿಸುವ ಬೆದರಿಕೆ ಹಾಕಿದ್ದರಿಂದ ನಾವು ಭಯಭೀತರಾಗಿ ಯಾರಿಗೂ ವಿಷಯ ತಿಳಿಸಿರಲಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಘಟನೆ ಸಂಬಂಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ವಾಟರ್‌ಮ್ಯಾನ್‌ ದೂರು ನೀಡಿದ್ದಾರೆ.

ಘಟನೆ ಸಂಬಂಧ ಬಣ್ಣವಾಡಿ ಗ್ರಾಮಸ್ಥರು ಮಂಗಳವಾರ ಸಭೆ ಸೇರಿ ಆರೋಪಿ ಮಹೇಶ್‌ ವಿರುದ್ಧ ಪೊಲೀಸರಿಗೆ ದೂರು ನೀಡುವಂತೆ ಪಿಡಿಒಗೆ ಮನವಿ ಮಾಡಿದ್ದಾರೆ.

ಪಿಡಿಒ ಭೇಟಿ: ಬಾಚೇಗೌಡನಹಳ್ಳಿ ಗ್ರಾಪಂ ಪಿಡಿಒ ಪ್ರತಿಭಾ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಆರೋಪಿ ಮಹೇಶ್‌ ವಿರುದ್ಧ ಎಚ್‌.ಡಿ.ಕೋಟೆಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ದ್ವೇಷಕ್ಕಾಗಿ ಇಡೀ ಗ್ರಾಮಕ್ಕೆ ಕುಡಿವ ನೀರಿಗೆ ವ್ಯತ್ಯಯ ಮಾಡಿ, ಬೋರ್‌ವೆಲ್‌ ಹಾನಿ ಮಾಡಿರುವ ಈ ಕಿಡಿಗೇಡಿ ಯುವಕನ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.