ಪೊಲೀಸರೇ ಚುರುಕಾಗಿ ಕಾರ್ಯನಿರ್ವಹಿಸಿ

ನಗರ ಪೊಲೀಸ್‌ ಆಯುಕ್ತರ ನೂತನಕಚೇರಿ ಕಟ್ಟಡ ಉದ್ಘಾಟಿಸಿದ ಬಿ.ಎಸ್‌ಯಡಿಯೂರಪ್ಪ ಅಭಿಮತ

Team Udayavani, Nov 25, 2020, 3:24 PM IST

yeddyurappa-speech

ಮೈಸೂರು: ಮೈಸೂರು ನಗರ ಪೊಲೀಸ್‌ ಆಯುಕ್ತರ ನೂತನ ಕಚೇರಿ ಕಟ್ಟಡ ಕೊನೆಗೂ ಎಲ್ಲ ಅಡೆತಡೆಗಳನ್ನು ಮೀರಿ ಸಾರ್ವಜನಿಕರ ಸೇವೆಗೆ ಮುಕ್ತವಾಗಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಗಳವಾರ ಉದ್ಘಾಟಿಸಿದರು. ನಜರ್‌ಬಾದ್‌ನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಾಣವಾಗಿರುವ ಕಟ್ಟಡವನ್ನು ಸಿಎಂ ಬಿ.ಎಸ್‌.ಯಡಿಯೂರಪ್ಪ ಕಟ್ಟಡವನ್ನು ಪೊಲೀಸರ ಸೇವೆಗೆ ಮುಕ್ತವಾಗಿಸಿದರು. ಇದೇ ವೇಳೆ ಪೊಲೀಸ್‌ ಗೃಹ-2020 ಯೋಜನೆಯಡಿ ನಿರ್ಮಿಸಿರುವ 108 ವಸತಿ ಗೃಹಗಳ ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವದ್ದು. ಸಾರ್ವಜನಿಕರಿಗೆ ಗುಣಾಣ್ಮತ, ವೃತ್ತಿಪರ, ಉತ್ತಮ ಆಡಳಿತವನ್ನು ಪೊಲೀಸರು ನೀಡಬೇಕಿದ್ದು, ಅದಕ್ಕಾಗಿ ಸರ್ಕಾರ ಸಕಲ ಸವಲತ್ತು ಹಾಗೂ ಸೌಲಭ್ಯಗಳನ್ನು ನೀಡುತ್ತಿದೆ. ಬೆಂಗಳೂರಿನ ನಂತರ ಮೈಸೂರು ಅತ್ಯಂತವೇಗವಾಗಿ ಬೆಳೆಯುತ್ತಿರುವ ನಗರವಾಗಿರುವುದರಿಂದ

ಇಂತಹ ಕಟ್ಟಡದ ಅಗತ್ಯತೆ ಮನಗಂಡು ಇಂದು ಉದ್ಘಾಟಿಸಲಾಗಿದೆ. ಕೇವಲ ಕಟ್ಟಡ ಮಾತ್ರವಲ್ಲದೆ ಜ್ಯೋತಿನಗರದಲ್ಲಿ 36, ಜಾಕಿ ಕ್ವಾರ್ಟಸ್‌ನಲ್ಲಿ 72 ವಸತಿಗಳೂ ಸಿದ್ಧವಿದ್ದು,ಅವುಗಳನ್ನೂಉದ್ಘಾಟಿಸಲಾಗಿದೆ ಎಂದು ಹೇಳಿದರು.

ಕಟ್ಟಡದಲ್ಲಿ ಕೂರದೆ ಕೆಲಸ ಮಾಡಿ: ಪೊಲೀಸ್‌ ಆಯುಕ್ತ ಕಟ್ಟಡ ಮೈಸೂರಿನ ಘನತೆ, ಪಾರಂಪರಿಕತೆಗೆ ತಕ್ಕಂತೆ ನಿರ್ಮಾಣವಾಗಿದೆ. ಅಧಿಕಾರಿಗಳು ಭವ್ಯ ಕಟ್ಟಡದಲ್ಲಿ ಕಾಲ ಕಳೆಯದೆ ಹೊರಗಡೆ ಹೋಗಿ ಕೆಲಸ ಮಾಡಿ. ಅತ್ಯಂತ ಚಲನಶೀಲವಾಗಿ, ಚುರುಕಾಗಿ, ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ತೆರಳಿ ಕಾರ್ಯನಿರ್ವಹಿಸಿ ಎಂದು ಸೂಚನೆ ನೀಡಿದರು.

ಇದನ್ನೂ ಓದಿ:ದಂಪತಿಗೆ ಸಮಗ್ರ ಕೃಷಿಯೇ ಜೀವನ

ಮೈಸೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣ ಅಧಿಕ ‌ವಾಗಿತ್ತು. ಇದೀಗ ತಹಬದಿಗೆ ಬರುತ್ತಿದೆ. ಆದರೂ ಮೈಮರೆಯದೆ  ಎಚ್ಚರಿಕೆಯಿಂದ  ‌ ಇರಬೇಕು . ಜನಸಾಮಾನ್ಯರು ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸೋಂಕಿನಿಂದ     ದೂರವಿರಲು  ಸ‌ರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ಕ್ರೈಂ ರೇಟ್‌ ಇಳಿಕೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಕಾಪಾಡಲು, ಶಾಂತಿ ನೆಲೆಸುವಂತೆ ಮಾಡಲು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.ಇದರಿಂದಾಗಿ ಕ್ರೈಂ ರೇಟ್‌ ಕಡಿಮೆಯಾಗಿದೆ. ಇನ್ನಷ್ಟುಕಡಿಮೆ ಮಾಡಲು ಗುರಿ ಇದೆ. ಅಲ್ಲದೆ ರಾಜ್ಯದಾದ್ಯಂತ ಡ್ರಗ್ಸ್‌ ವಿರುದ್ಧ ನಿರಂತರವಾಗಿ ಸಮರ ಸಾರುತ್ತಿದ್ದು, 10 ವರ್ಷಗಳಲ್ಲಿ ವಶಪಡಿಸಿಕೊಳ್ಳಲು ಆಗದ ಡ್ರಗ್ಸ್ ಅನ್ನು ಕೇವಲ 6 ತಿಂಗಳಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳ ಮಾರಾಟ ಜಾಲ ಭೇದಿಸಲಾಗಿದೆ ಎಂದರು. ತಂತ್ರಜ್ಞಾನ ಅಧಿಕಗೊಂಡಂತೆ ಸೈಬರ್‌ ಕ್ರೈಂ ಹೆಚ್ಚಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಸೆಲ್‌ ಪೊಲೀಸ್‌ ಠಾಣೆಯನ್ನು ಸ್ಥಾಪಿಸಿಸೈಬರ್‌ಕ್ರೈಂನಿಯಂತ್ರಿಸಲಾಗುತ್ತಿದೆ ಎಂದರು. ಕಟ್ಟಡದ ವಿನ್ಯಾಸಗಾರ ಜಯಪ್ರಕಾಶ್‌ ಸೈಮನ್‌ ಅವರನ್ನು ಅಭಿನಂದಿಸಲಾಯಿತು.

ಉಪ ಮುಖ್ಯಮಂತ್ರಿ ಗೋವಿಂದ  ‌ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ  ಉಸ್ತುವಾರಿ   ಸಚಿವ  ಎಸ್‌.ಟಿ.ಸೋಮಶೇಖರ್‌, ಸಂಸ¨ ‌ ಪ್ರತಾಪ್‌ ಸಿಂಹ, ಶಾಸಕರಾ¨ ‌ ಎಸ್‌.ಎ.ರಾಮದಾಸ್‌, ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಚ್‌.ವಿಶ್ವನಾಥ್‌, ಕೆ.ಟಿ.ಶ್ರೀಕಂಠೇಗೌಡ, ಎಲ್‌.ನಾಗೇಂದ್ರ, ಕೆ.ಮಹದೇವ, ಹರ್ಷವರ್ಧನ್‌, ಮೇಯರ್‌ ತಸ್ನಿಂ, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ, ಮುಡಾ ಅಧ್ಯಕ್ಷ ಎಚ್‌ .ವಿ.ರಾಜೀವ್‌, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಪೊಲೀಸ್‌ ಮಹಾ ನಿರ್ದೇಶಕ ‌ ಪ್ರವೀಣ್‌ ಸೂದ್‌, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್‌, ಪಾಲಿಕೆ  ಆಯುಕ್ತ ಗುರುದತ್‌ ಹೆಗಡೆ ಇದ್ದರು.

ಬಜೆಟ್‌ನಲ್ಲಿ ಅನುದಾನದ ನಿರೀಕ್ಷೆ

ಮೈಸೂರು ಪೊಲೀಸರಿಗೆ 31 ವರ್ಷಗಳ ಬಳಿಕ ಅತ್ಯಂತ ಸುಂದರವಾದ ಕಟ್ಟಡ ಸಿಕ್ಕಿದೆ. ಪೊಲೀಸರು ಅತ್ಯತ್ತಮವಾಗಿ ಕೆಲಸ ಮಾಡಲು ಮುಖ್ಯವಾಗಿ ಬೇಕಿರುವುದು ಕಚೇರಿ ಹಾಗೂ ಮನೆ. ಇಲಾಖೆಯ ಸಿಬ್ಬಂದಿಗೆ  ವಸತಿ ಗೃಹಗಳ ಕೊರತೆ  ಇದೆ. ಸದ್ಯ ಶೇ.51ರಷ್ಟು ಸಿಬ್ಬಂದಿಗೆ ವಸತಿ ಗೃಹವಿದೆ. ಇದು ಶೇ.75ಕ್ಕೆ ಏರಿಕೆಯಾಗಲು 11 ಸಾವಿರ ಮನೆಗಳನ್ನು ನಿರ್ಮಿಸಬೇಕು. ಮುಂದಿನ ಬಜೆಟ್‌ನಲ್ಲಿ ಇಲಾಖೆಗೆ ಹೆಚ್ಚಿನ ಅನುದಾನ  ‌ ನೀಡುವ ಭರವಸೆ  ಇದೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದರು.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.