ಜಗತ್ತಿನ ಉದ್ಧಾರಕ್ಕೆ ಬುದ್ಧನ ತತ್ವಗಳು ಅನಿವಾರ್ಯ


Team Udayavani, Apr 18, 2018, 12:46 PM IST

m5 jagattina.jpg

ಮೈಸೂರು: ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಎಲ್ಲಾ ಕಾಲಕ್ಕೂ ಸಲ್ಲುವವರಾಗಿದ್ದು, ವಿಶ್ವಕ್ಕೆ ಇಂದಿಗೂ ಬಸವಣ್ಣ ಪ್ರಸ್ತುತವಾದರೆ, ಜಗತ್ತಿನ ಉದ್ಧಾರಕ್ಕೆ ಬುದ್ಧನ ತತ್ವಾದರ್ಶನಗಳು ಅನಿವಾರ್ಯ ಎಂದು ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಂವಹನ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಪಿ.ಮಹೇಶ್‌ ಚಂದ್ರಗುರು ಹೇಳಿದರು.

ಮೈಸೂರು ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದಿಂದ ಮಂಗಳವಾರ ಆಯೋಜಿಸಿದ್ದ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಕತ್ತಲು ಹಾಗೂ ಅಜ್ಞಾನದಲ್ಲಿ ಸಿಲುಕಿದ್ದ ಭಾರತೀಯರನ್ನು ಪರಿವರ್ತನೆಯತ್ತ ಕೊಂಡೊಯ್ಯುವ ಜತೆಗೆ ಮಹಿಳೆಯರಿಗೆ ಸಮಾನತೆ ನೀಡಿದ ಕೀರ್ತಿ ಬುದ್ಧನಿಗೆ ಸಲ್ಲುತ್ತದೆ. ಹೀಗಾಗಿ ವಿಶ್ವದ ರಕ್ಷಣೆ ಬುದ್ಧನಿಂದಲೇ ಆಗಲಿದೆ ಎಂಬುದು ಅನಿವಾರ್ಯ ಎಂದು ಹೇಳಿದರು. 

ಪ್ರಜ್ಞಾವಂತರ ಕೊರತೆ: ಇಂದು ವಿಶ್ವದ ನಾಗರಿಕತೆ ಬೆಳೆದಿದ್ದರೂ, ಹೃದಯವಂತಿಕೆ ಬೆಳೆದಿಲ್ಲ. ಬುದ್ದಿವಂತರು ಸಾಕಷ್ಟು ಸಂಖ್ಯೆಯಲ್ಲಿ ಬೆಳೆದರೂ, ಪ್ರಜ್ಞಾವಂತರ ಕೊರತೆ ಇದೆ. ಅಲ್ಲದೆ ಸಮಾಜದಲ್ಲಿ ಸ್ವಾರ್ಥ ಮನೋಭಾವ ಹೆಚ್ಚಾಗಿದ್ದು, ಅನ್ಯರ ಉದ್ಧಾರಕ್ಕಾಗಿ ಶ್ರಮಿಸುವವರ ಸಂಖ್ಯೆ ಕಡಿಮೆ ಆಗಿದೆ.

ಈ ಎಲ್ಲದರ ಪರಿಣಾಮ ಆಧುನಿಕತೆ ಎಂಬುದು ಪಾಶ್ಚಾತ್ಯವಾಗಿದ್ದು, ಪಾಶ್ಚಿಮಾತ್ಯ ಎಂಬುದೇ ಆಧುನಿಕತೆಯಾಗಿದೆ. ಇಂತಹ ಕವಲುದಾರಿಯ ಸಂದರ್ಭದಲ್ಲಿ ಜಗತ್ತಿನ ಉದ್ಧಾರಕ್ಕೆ ಬುದ್ಧನ ಸಂದೇಶಗಳು ಅನಿವಾರ್ಯವಾಗಿದೆ ಎಂದರು. ಇಂದು ಸಮಾಜದ ಬುದ್ಧನ ಯೋಗ ಸಂಸ್ಕೃತಿಯನ್ನು ಮರೆತು ಪಾಶ್ಚಿಮಾತ್ಯರ ಭೋಗ ಸಂಸ್ಕೃತಿಯತ್ತ ಸಾಗುತ್ತಿರುವುದು ಮಾರಕ ಬೆಳವಣಿಗೆ.

ಸಮಾಜದಲ್ಲಿಂದು ಬುದ್ಧ, ಬಸವ ಹಾಗೂ ಅಂಬೇಡ್ಕರ್‌ರಂತಹ ಮಹನೀಯರನ್ನು ಕಡೆಗಣಿಸಲಾಗುತ್ತಿದೆ. ಇಂದಿನ ಯುವಜನತೆ ಹಾಗೂ ಜಗತ್ತಿಗೆ ಬುದ್ಧನ ಸಂದೇಶದ ಅಗತ್ಯವಿದೆ. ಜಗತ್ತಿನಲ್ಲಿ ಜಾತಿ ರಾಜಕೀಯ ಮಾಡಿದವರ್ಯಾರು ಉದ್ಧಾರವಾಗಿಲ್ಲ. ಸಮಾಜದಲ್ಲಿ ಜನರನ್ನು ಒಗ್ಗೂಡಿಸಬೇಕಿದ್ದು, ಸಮಾಜವನ್ನು ಒಡೆಯಬಾರದು. ಜಾತೀವಾದ ಶಾಶ್ವತವಲ್ಲ ಕೇವಲ ಕಾಲ್ಪನಿಕ ಎಂದು ಹೇಳಿದರು.

ಮನುಕುಲಕ್ಕೆ ಸೀಮಿತ: 12ನೇ ಶತಮಾನದಲ್ಲಿ ಕಲ್ಯಾಣ ಕರ್ನಾಟಕವನ್ನು ನಿರ್ಮಿಸಿದ ಬಸವಣ್ಣ, ಕೇವಲ ವೀರಶೈವ, ಲಿಂಗಾಯತ ಧರ್ಮಕ್ಕೆ ಸೀಮಿತವಾಗದೆ, ಇಡೀ ಮನುಕುಲಕ್ಕೆ ಸೀಮಿತವಾಗಿದ್ದಾರೆ. ಅಲ್ಲದೆ ಅಂತರ್ಜಾತಿ ವಿವಾಹದ ಮೂಲಕ ಸಮಾಜದಲ್ಲಿ ಜಾತಿವಿನಾಶಕ್ಕೆ ಬಸವಣ್ಣ ಶ್ರಮಿಸಿದ್ದು, ದೇಶದಲ್ಲಿರುವ ಜಾತಿ ವಿನಾಶವಾದರೆ ಅಮೆರಿಕಾ, ರಷ್ಯಾ, ಚೀನಾ ರಾಷ್ಟ್ರಗಳನ್ನು ಮೀರಿಸಬಹುದಾಗಿದೆ.

ಇಂದು ಬಸವಣ್ಣನ ಹೆಸರಿನಲ್ಲಿ ರಾಜಕೀಯ ಮಾಡಲಾಗುತ್ತಿದ್ದು, ಲಿಂಗಾಯತ ಮತ್ತು ವೀರಶೈವರನ್ನು ಇಬ್ಭಾಗ ಮಾಡಲಾಗುತ್ತಿದೆ. ಆದರೆ ಈ ಇಬ್ಬರೂ ಬಸವಣ್ಣನ ಅನುಸರಿಸಬೇಕಿದ್ದು, ಇಲ್ಲವಾದಲ್ಲಿ ವೀರಶೈವರು ಯಾರಿಗೂ ಬೇಡದ ಶೋಷಿತರಾಗುವುದು ಕಟ್ಟಿಟ್ಟಬುತ್ತಿ ಎಂದರು.

ಕಾರ್ಯಕ್ರಮದಲ್ಲಿ ಎಂಬಿಎ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ.ಆನಂದ್‌, ಸಮಾಜಕಾರ್ಯ ಅಧ್ಯಯನ ವಿಭಾಗದ ಅಧ್ಯಕ್ಷ ಡಾ.ಆರ್‌.ಶಿವಪ್ಪ, ಸಹಾಯಕ ಪ್ರಾಧ್ಯಾಪಕರಾದ ಚಂದ್ರಮೌಳಿ, ಡಾ.ಎಚ್‌.ಪಿ.ಜ್ಯೋತಿ ಹಾಜರಿದ್ದರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.