ಅಯೋಧ್ಯೆಯಲ್ಲಿ ಬುದ್ಧ ಮಂದಿರ ನಿರ್ಮಿಸಿ
Team Udayavani, Jul 22, 2020, 7:50 AM IST
ಮೈಸೂರು: ಮುಂಬೈನಲ್ಲಿ ಡಾ.ಅಂಬೇಡ್ಕರ್ ನಿವಾಸದ ಮೇಲೆ ನಡೆದ ದಾಳಿ ಖಂಡಿಸಿ, ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಾಣ ಸ್ಥಳದಲ್ಲಿ ಬುದ್ಧ ಮಂದಿರ ನಿರ್ಮಿಸಬೇಕೆಂದು ಒತ್ತಾಯಿಸಿ ನಾಗರಿಕ ಹಕ್ಕು ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಮಂಗಳವಾರ ಪ್ರತಿಭಟನೆ ನಡೆಸಿ, ದುಷ್ಕರ್ಮಿಳ ವಿರುದ್ಧ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾಗರಿಕ ಹಕ್ಕು ರಕ್ಷಣಾ ಸಮಿತಿ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ಬಾಂಬೇಯ ದಾದರ್ನಲ್ಲಿರುವ ಸಂವಿಧಾನ ಶಿಲ್ಪಿ, ಮಾನವತಾವಾದಿ ಡಾ.ಅಂಬೇಡ್ಕರ್ ರಾಜಗೃಹದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಇಡೀ ದೇಶವೇ ಈ ಕೃತ್ಯದಿಂದ ತಲೆ ತಗ್ಗಿಸುವಂತಾಗಿದೆ. ಆರ್ಯರ ಸಂಸ್ಕೃತಿಯನ್ನು ಹೊತ್ತು ಮೆರೆಯುವ ಹಿಂದುತ್ವವಾ ದಿಗಳು ಈ ಕೃತ್ಯವನ್ನು ಎಸಗಿರಬಹುದೆಂದು ಅನುಮಾನ ಉಂಟಾಗಿರುವುದರಿಂದ ಈ ಕೃತ್ಯ ಎಸಗಿದವರನ್ನು ಕೂಡಲೇ ಪತ್ತೆ ಹಚ್ಚಿ ದೇಶದ್ರೋಹ ಕಾಯ್ದೆಯಡಿ ದೇಶದಿಂದ ಗಡಿಪಾರು ಮಾಡಬೇಕು. ಡಾ.ಅಂಬೇಡ್ಕರ್ ಕುಟುಂಬಕ್ಕೆ ನಿರಂತರವಾಗಿ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ತಾರಾ, ಕೃಷ್ಣಮೂರ್ತಿ, ಕೃಷ್ಣ ಕುಮಾರ್, ಮಣಿಯಮ್ಮ, ರವಿಕುಮಾರ್ ಪುಟ್ಟ ಮಾದು, ಪಾರ್ವತಮ್ಮ, ಕೃಷ್ಣಾಬಾಯಿ, ಇಂದ್ರಮ್ಮ, ಮಹ ಮದ್ ಮುನಾವರ್, ಭೀಮರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!