ಕಲ್ಲು, ಮರಳು, ಮರ ಬಳಸದೆ ಮನೆ ನಿರ್ಮಿಸಿ


Team Udayavani, Nov 24, 2018, 11:58 AM IST

m4-kallu.jpg

ಮೈಸೂರು: ನವೀನ ತಾಂತ್ರಿಕತೆಯನ್ನು ಬಳಸಿಕೊಂಡು ಬಡವರಿಗೆ ಕಡಿಮೆ ವೆಚ್ಚದಲ್ಲಿ ಶೀಘ್ರವಾಗಿ ಸುಂದರವಾದ ಮನೆ ಕಟ್ಟಿಕೊಡುವ ಯೋಜನೆಗಳು ಬರಬೇಕು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಬಿಲ್ಡರ್ ಅಸೋಸಿಯೇಷನ್‌ ಆಫ್ ಇಂಡಿಯಾದ ಮೈಸೂರು ಘಟಕದ ವತಿಯಿಂದ ಮೈಸೂರು ವಿಶ್ವವಿದ್ಯಾಲಯದ ಸೆನೆಟ್‌ ಭವನದಲ್ಲಿ ಶುಕ್ರವಾರ ಆಯೋಜಿಸಿರುವ ಬಿಲ್ಡ್‌ಟೆಕ್‌; ಸ್ಮಾರ್ಟ್‌ ಕನ್ಸ್‌ಸ್ಟ್ರಕ್ಷನ್ಸ್‌ ಮತ್ತು ಎಫಿಶಿಯಂಟ್‌ ಬಿಲ್ಡಿಂಗ್‌ ಸರ್ವೀಸಸ್‌ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನಿರ್ಮಾಣ ಕ್ಷೇತ್ರದಲ್ಲಿನ ತಾಂತ್ರಿಕತೆಗಳು ವೇಗವಾಗಿ ಬೆಳೆಯುತ್ತಿದ್ದು, ಮನೆಕಟ್ಟಲು ಈ ತಾಂತ್ರಿಕತೆಯನ್ನು ಬಳಸಿಕೊಳ್ಳಬೇಕು ಎಂದರು.

ಸಂಪನ್ಮೂಲಗಳ ಕೊರತೆ: ಹಿಂದೆ ಮಣ್ಣು, ಕಲ್ಲು, ಮರಳು, ಮರ ಬಳಸಿ ಮನೆ ಕಟ್ಟಲಾಗುತ್ತಿತ್ತು. ಕೆಆರ್‌ಎಸ್‌ ಅಣೆಕಟ್ಟನ್ನು ಚುರ್ಕಿ ಗಾರೆ ಬಳಸಿ ಕಟ್ಟಲಾಗಿದೆ. ಈಗ ಮರಳು, ಮರ ಸಿಗುತ್ತಿಲ್ಲ. ಬಂಡೆಗಳೂ ಇಲ್ಲದಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತಂದು ಫ‌ಲಾನುಭವಿಗಳ ಖಾತೆಗೇ ನೇರವಾಗಿ ಹಣ ಜಮೆ ಮಾಡಿದರೂ ಬಡವರು ಆಶ್ರಯ ಮನೆ ಕಟ್ಟಿಕೊಳ್ಳಲೂ ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸೂರು ಕನಸು: ಮರಳು, ಕಲ್ಲು, ಮರ ಬಳಸದೆ ಮನೆಕಟ್ಟುವ ತಾಂತ್ರಿಕತೆಗಳನ್ನು ಅಭಿವೃದ್ಧಿಗೆ ತರಲಾಗಿದೆ. ದೊಡ್ಡ ದೊಡ್ಡ ಮಹಲುಗಳನ್ನು ಕಟ್ಟುವುದು ದೊಡ್ಡ ವಿಷಯವಲ್ಲ. ಜೀವನದಲ್ಲಿ ತಲೆಯ ಮೇಲೊಂದು ಸ್ವಂತ ಸೂರು ಕಟ್ಟಿಕೊಳ್ಳಬೇಕು ಎಂದು ಕನಸು ಕಾಣುವ ಬಡವರಿಗೆ ಮನೆ ಕಟ್ಟಿಕೊಳ್ಳಲು ನವೀನ ತಾಂತ್ರಿಕತೆ ನೆರವಾಗಬೇಕು. ಈ ನಿಟ್ಟಿನಲ್ಲಿ ಸಮ್ಮೇಳನದಲ್ಲಿ ಹೊರಹೊಮ್ಮುವ ಅಂಶಗಳನ್ನು ಸರ್ಕಾರದ ಮುಂದಿಡಲು ದುಂಡುಮೇಜಿನ ಸಭೆಗೆ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಉದ್ಯಮಿ ರಾಜ್‌ ಪಿಳ್ಳೆ„ ಮುಖ್ಯ ಭಾಷಣ ಮಾಡಿದರು. ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌, ಬಿಎಐ ಕರ್ನಾಟಕ ಘಟಕದ ಅಧ್ಯಕ್ಷ ಕೆ.ಎಸ್‌.ಸೋಮೇಶ್ವರ ರೆಡ್ಡಿ, ಮೈಸೂರು ಘಟಕದ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ರಾವ್‌, ಬಿಲ್ಡ್‌ಟೆಕ್‌-18 ಅಧ್ಯಕ್ಷ ವಿ.ಶ್ರೀನಾಥ್‌, ಕಾರ್ಯದರ್ಶಿ ಕೆ.ಅಜಿತ್‌ ನಾರಾಯಣ, ಸಿ.ಎಸ್‌.ಶ್ರೀಕಾಂತ್‌ ಮೊದಲಾದವರು ಉಪಸ್ಥಿತರಿದ್ದರು.

ಮುಡಾ, ಬಿಡಿಎ ವೈಫ‌ಲ್ಯ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಮುಡಾದಂತಹ ಪ್ರಾಧಿಕಾರಗಳು ಸಮರ್ಪಕವಾಗಿ ಕೆಲಸ ಮಾಡಿದ್ದರೆ, ಖಾಸಗಿ ರಿಯಲ್‌ ಎಸ್ಟೇಟ್‌ ಈ ಮಟ್ಟಕ್ಕೆ ಬೆಳೆಯುತ್ತಿರಲಿಲ್ಲ. ಬಿಲ್ಡರ್‌ಗಳು ನಿರ್ಮಿಸುವ ಲೇಔಟ್‌ಗಳಲ್ಲಿ ರಸ್ತೆ, ಒಳಚರಂಡಿ ಸೇರಿದಂತೆ ಯಾವ ಮೂಲಸೌಲಭ್ಯವೂ ಇರುವುದಿಲ್ಲ. ಇದಕ್ಕೆ ಪ್ರಾಧಿಕಾರಗಳ ವೈಫ‌ಲ್ಯವೂ ಕಾರಣವಾಗಿದೆ. ಬೆಂಗಳೂರು ಸುತ್ತಮುತ್ತ 50 ಕಿ.ಮೀ. ವ್ಯಾಪ್ತಿಯಲ್ಲಿ ಅಂದೇ ಟೌನ್‌ಶಿಪ್‌ಗ್ಳನ್ನು ಮಾಡಿದ್ದರೆ, ಬೆಂಗಳೂರು ನಗರದ ಮೇಲಿನ ಒತ್ತಡ ಕಡಿಮೆಯಾಗುತ್ತಿತ್ತು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.