ಆಧುನಿಕ ಕೃಷಿ ಮಾಹಿತಿಗೆ ಕೃಷಿ ಮೇಳಕ್ಕೆ ಬನ್ನಿ


Team Udayavani, Jan 21, 2017, 12:11 PM IST

mys1.jpg

ತಿ.ನರಸೀಪುರ: ಪಟ್ಟಣದಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೊದಲ ಬಾರಿಗೆ ಶನಿವಾರ ಹಾಗೂ ಭಾನುವಾರ ತಾಲೂಕು ಮಟ್ಟದ ಕೃಷಿ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೈಸೂರು ಮುಖ್ಯರಸ್ತೆಯ ತಿರುಮಕೂಡಲು ಬಳಿ ಸುಮಾರು 6 ಎಕರೆ ಪ್ರದೇಶದಲ್ಲಿ ಕೃಷಿ ಉತ್ಸವಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಎರಡು ದಿನಗಳ ಕಾಲ ನಡೆವ ಕೃಷಿ ಉತ್ಸವದಲ್ಲಿ ಆಧುನಿಕ ಕೃಷಿ ಬೇಸಾಯ ಪದ್ಧತಿ, ತಾಂತ್ರಿಕತೆ, ಉಪಕರಣ ಕುರಿತು ಗ್ರಾಮೀಣ ಪ್ರದೇಶದ ರೈತರು ಹಾಗೂ ಮಹಿಳಾ ಸ್ವಸಹಾಯದ ಸಂಘದ ಮಹಿಳೆಯರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪುಗೊಳಿಸಲಾಗಿದೆ.

100 ಮಳಿಗೆಗಳಲ್ಲಿ ವಸ್ತು ಪ್ರದರ್ಶನ: ಹೈನುಗಾರಿಕೆ, ರೇಷ್ಮೆ ಬೆಳೆ ಹಾಗೂ ವಿವಿಧ ಕೃಷಿಯ ಬೇಸಾಯದ ಬಗ್ಗೆ ರೈತರಿಗೆ ಮಾಹಿತಿ ನೀಡಲು ಕೃಷಿ ಮೇಳದಲ್ಲಿ 100 ಮಳಿಗೆಗಳನ್ನು ತೆರೆದು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ರಾಸುಗಳ ಪ್ರದರ್ಶನ ಮಾರಾಟವನ್ನು ಕೂಡ ಆಯೋಜಿಸಲಾಗಿದೆ. ಸುಮಾರು 100 ಜೊತೆ ರಾಸುಗಳು ತಂಗಲು ಶಾಮಿಯಾನ ವ್ಯವಸ್ಥೆ ಮಾಡಲಾಗಿದ್ದು, ರಾಸುಗಳಿಗೆ ಬೇಕಾದ ಮೇವು, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಉತ್ಸವದಲ್ಲಿ ಭಾಗವಹಿಸುವ ಜನರಿಗೆ ಅಗತ್ಯ ಮೂಲಸೌಕರ್ಯವನ್ನು ಕಲ್ಪಿಸಲಾಗಿದೆ. 

25 ಸಾವಿರ ಮಂದಿ ನಿರೀಕ್ಷೆ: ಎರಡು ದಿನಗಳ ಕಾಲ ನಡೆವ ಕಾರ್ಯಕ್ರಮದಲ್ಲಿ  ರೈತ ಮಹಿಳೆಯರು, ಸ್ವಸಹಾಯ ಸಂಘದ ಸದಸ್ಯರು ಹಾಗೂ ರೈತರು ಸೇರಿದಂತೆ ಅಂದಾಜು 25 ಸಾವಿರ ಕ್ಕೂ ಹೆಚ್ಚು ಜನರು ಸೇರುವ ನೀರಿಕ್ಷೆ ಇದೆ. ಬಂದಂತಹ ಜನರಿಗೆ ಮಧ್ಯಾಹ್ನ  ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ.

ಕೃಷಿ ವಿಚಾರಗೋಷ್ಠಿಗಳು: ಕೃಷಿ ಉತ್ಸವ ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ನೆಲ ಜಲ ಸಂರಕ್ಷಣೆ ಮಹತ್ವ, ಪ್ರತಿಕೂಲ ಪರಿಸ್ಥಿತಿಯಲ್ಲಿ ಪಶುಸಂಗೋಪನಾ ಸಾಧ್ಯತೆಗಳು, ಮಹಿಳಾ ಸಬಲೀಕರಣಕ್ಕೆ ಇರುವ ಪೂರಕ ಸೌವಲತ್ತುಗಳು, ಧಾರಣೆ ಕುಸಿತಕ್ಕೆ ಮಿಶ್ರ ಬೇಸಾಯ ಪರಿಹಾರವೇ, ಕೃಷಿಯಲ್ಲಿ ಖರ್ಚುವೆಚ್ಚಗಳ ನಿಯಂತ್ರಣ ಹಾಗೂ ಯಂತ್ರೊಫ‌ಕರಣಗಳ ಬಳಕೆ, ಸುಧಾರಿತ ಭತ್ತ, ಕಬ್ಬು ಬೇಸಾಯದ ವಿಧಾನದ ಪ್ರಯೋಜನದ ಬಗ್ಗೆ ವಿಚಾರಗೊಷ್ಠಿಗಳನ್ನು ಆಯೋಜಿಸಲಾಗಿದೆ.

ತಾಲೂಕಿನಲ್ಲಿ ಹೆಚ್ಚಾಗಿ ಬೆಳೆವ ಕಬ್ಬು, ಹಲ್ಲಿನ ಜೋಳ, ಶೇಂಗಾ, ಬಾಳೆ ಫ‌ಸಲುಗಳಿಂದ ವಿಶೇಷ ಕುಟೀರಗಳನ್ನು ನಿರ್ಮಿಸಲಾಗುತ್ತಿದೆ. ಕೃಷಿ ಉತ್ಸವ ಮೊದಲ ದಿನದ ಕಾರ್ಯಕ್ರಮವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಉದ್ಘಾಟಿಸಲಿದ್ದಾರೆ. ದಿವ್ಯ ಸಾನ್ನಿಧ್ಯವನ್ನು ವಾಟಾಳು ಸಿದ್ದಲಿಂಗಶಿವಚಾರ್ಯ ಸ್ವಾಮೀಜಿ, ಅಧ್ಯಕ್ಷತೆ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ , ಸಂಸದ ಆರ್‌. ಧ್ರುವನಾರಾಯಣ್‌, ವಿಧಾನ ಪರಿಷತ್‌ ಸದಸ್ಯ ಆರ್‌.ಧರ್ಮಸೇನ, ಜಿಪಂ ಅಧ್ಯಕ್ಷೆ ನಯೀಮಸುಲ್ತಾನ್‌, ಉಪಾಧ್ಯಕ್ಷ ಕೈಯಂಬಳ್ಳಿ ಜಿ.ನಟರಾಜು  ಸೇರಿದಂತೆ ಹಲವು ಗಣ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.