ಹುಣಸೂರು: ಬಸ್ -ಬೈಕ್ ಮುಖಾಮುಖಿಯಲ್ಲಿ ಸವಾರರಿಬ್ಬರು ಸಾವು
Team Udayavani, Sep 13, 2020, 9:15 AM IST
ಹುಣಸೂರು: ಬಸ್ ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರರಿಬ್ಬರ ಸಾವನ್ನಪ್ಪಿದ ಘಟನೆ ಹುಣಸೂರು ಹೊರವಲಯದ ಯಶೋಧರಪುರ ಗೇಟ್ ಬಳಿ ನಡೆದಿದೆ.
ಮೃತರನ್ನು ಯಶೋಧರಪುರ ನಿವಾಸಿ ಪರ್ವತೇಗೌಡರ ಪುತ್ರ ಶಿವರಾಜ್ (32) ಹಾಗೂ ಹಿಂಬದಿಯ ಸವಾರ ಕಾರ್ತಿಕ್ (20) ಎಂದು ಗುರುತಿಸಲಾಗಿದೆ.
ಶಿವರಾಜ್ ಸ್ಥಳದಲ್ಲೇ ಮೃತಪಟ್ಟರೆ ಹಿಂಬದಿಯ ಸವಾರ ಕಾರ್ತಿಕ್ ಮೈಸೂರಿಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಉಸಿರಾಟದ ಸಮಸ್ಯೆಯಿಂದ ಮತ್ತೆ ಏಮ್ಸ್ ಗೆ ದಾಖಲಾದ ಗೃಹ ಸಚಿವ ಅಮಿತ್ ಶಾ
ಅಪಘಾತ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ್ದ ಗ್ರಾಮಸ್ಥರು ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.
ಪೋಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.