ಅರಮನೆ ನಗರಿಯಲ್ಲಿ ಬಟರ್‌ ಫ್ಲೈ ಚಿತ್ರೀಕರಣ


Team Udayavani, Apr 8, 2018, 12:53 PM IST

m2-aramane.jpg

ಮೈಸೂರು: ನಟ ರಮೇಶ್‌ ಅರವಿಂದ್‌ ನಿರ್ದೇಶನದಲ್ಲಿ ಹಿಂದಿಯ ಪ್ರಖ್ಯಾತ ಕ್ವೀನ್‌ ಚಿತ್ರದ ಕಥೆಯನ್ನು ಆಧರಿಸಿ ಏಕಕಾಲದಲ್ಲಿ ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬಟರ್‌ ಫ್ಲೈಸಿನಿಮಾ ಹೊರತರುವ ಮೂಲಕ ದಾಖಲೆ ಬರೆಯಲು ಚಿತ್ರತಂಡ ಮುಂದಾಗಿದೆ.

ಮೈಸೂರಿನ ಲಲಿತ್‌ ಮಹಲ್‌ ರಸ್ತೆಯ ಕೃಷ್ಣಪ್ರಸಾದ ನಿವಾಸದಲ್ಲಿ ನೃತ್ಯ ನಿರ್ದೇಶಕ ಸೀಸರ್‌ ಗೊನ್ಸಲ್ವಸ್‌ ನಿರ್ದೇಶನದಲ್ಲಿ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು ನಾಯಕಿ ನಟಿ ಪಾರುಲ್‌ ಯಾದವ್‌, ಪೋಷಕ ಕಲಾವಿದರಾದ ಧರ್ಮೇಂದ್ರ ಅರಸ್‌, ಪದ್ಮಜಾರಾವ್‌, ಭಾರ್ಗವಿ ನಾರಾಯಣ್‌ ಮುಂತಾದವರು ಅಭಿನಯಿಸುತ್ತಿದ್ದಾರೆ.

ಕನ್ನಡ, ತಮಿಳು, ತೆಲಗು ಮತ್ತು ಮಲೆಯಾಳಂ ಭಾಷೆಯಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಆಗಸ್ಟ್‌ ವೇಳೆಗೆ ಕನ್ನಡ ಮತ್ತು ತೆಲುಗು ಸಿನಿಮಾ ಬಿಡುಗಡೆಗೆ ಚಿತ್ರ ತಂಡ ಮುಂದಾಗಿದೆ. ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ನಡೆಯುತ್ತಿರುವ ಹೋರಾಟದಿಂದಾಗಿ ತಮಿಳು ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹೀಗಾಗಿ ತಮಿಳು ಮತ್ತು ಮಲಯಾಳಂ ಚಿತ್ರಗಳು ನಂತರದ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಚಿತ್ರದ ನಿರ್ದೇಶಕ ರಮೇಶ್‌ ಅರವಿಂದ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕನ್ನಡ ಸಿನಿಮಾದ ಚಿತ್ರೀಕರಣ ಬಹುಪಾಲು ಪೂರ್ಣಗೊಂಡಿದೆ. ನಾಯಕಿ ಪ್ರಧಾನವಾದ ಈ ಸಿನಿಮಾದಲ್ಲಿ ಪಾರುಲ್‌ ಯಾದವ್‌ ಪ್ರಧಾನ ಪಾತ್ರ ನಿರ್ವಹಿಸಿದ್ದಾರೆ.

ದುಂಬಿಯೊಂದು ಹೇಗೆ ಚಿಟ್ಟೆಯಾಗುತ್ತದೋ ಹಾಗೆಯೇ ಮುಗª ಹುಡುಗಿಯೊಬ್ಬಳ ಮದುವೆ ನಿಗದಿಯಾಗಿ ಮದುವೆಯ ಹಿಂದಿನ ದಿನವೇ ಮದುವೆ ನಿಂತು ಹೋಗುತ್ತದೆ. ಇದರಿಂದ ಬೇಸತ್ತ ಆಕೆ ಇಡೀ ವಿಶ್ವವನ್ನೇ ಸುತ್ತುತ್ತಾಳೆ. ಕ್ವೀನ್‌ ಸಿನಿಮಾದ ಕಥೆಯಾದರೂ ವಿಭಿನ್ನ ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ ಎಂದು ರಮೇಶ್‌ ಅರವಿಂದ್‌ ವಿವರಿಸಿದರು.

ಈ ಚಿತ್ರ ಏಕಕಾಲಕ್ಕೆ ನಾಲ್ಕು ಭಾಷೆಗಳಲ್ಲಿ ಮೂಡಿಬಂದರೂ ಪ್ರತಿಯೊಂದು ಚಿತ್ರಕ್ಕೂ ಸ್ವಲ್ಪ ಭಿನ್ನತೆ ಇರುತ್ತದೆ. ಚಿತ್ರದಲ್ಲಿ ಆರು ಹಾಡುಗಳಿದ್ದು, ನಾಲ್ಕು ಹಾಡನ್ನು ಜಯಂತ್‌ ಕಾಯ್ಕಿಣಿ, ಒಂದು ಹಾಡನ್ನು ಯೋಗರಾಜ್‌ ಭಟ್‌ ಮತ್ತು ಪ್ರದ್ಯುಮ್ನ ರಚಿಸಿದ್ದಾರೆ.

ನಾಯಕ ನಟಿ ಪಾರುಲ್‌ ಯಾದವ್‌ ಮಾತನಾಡಿ, ಈ ಸಿನಿಮಾ ಕಥೆ ಕೇಳಿಯೇ ತುಂಬಾ ಇಷ್ಟಪಟ್ಟೆ. ತೀರಾ ಸರಳ ಜೀವನವನ್ನು ಕಥೆ ಆಧರಿಸಿದೆ. ಇದೊಂದು ವಿಶಿಷ್ಟವಾದ ಕಥೆ. ಚಿತ್ರತಂಡದಲ್ಲಿ ನನಗೆ ಮನ್ನಣೆ ದೊರೆಯುತ್ತಿದೆ. ರಮೇಶ್‌ ಅರವಿಂದ್‌ ಅವರ ಬಳಿ ಕೆಲಸ ಮಾಡುವುದೇ ಹೆಮ್ಮೆಯ ಸಂಗತಿ ಎಂದು ಖುಷಿ ಹಂಚಿಕೊಂಡರು.

ಬಾಲ ನಟ ಪರಿಚಯ: ಶಿರಸಿಯ ಸಮರ್ಥ್ ಎಂಬ ಬಾಲ ಕಲಾವಿದನನ್ನು ಈ ಸಿನಿಮಾದಲ್ಲಿ ಬಾಲನಟನಾಗಿ ಬೆಳ್ಳಿತೆರೆಗೆ ಪರಿಚಯಿಸಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಈ ಬಾಲಕನನ್ನು ಆಯ್ಕೆ ಮಾಡಲಾಗಿದೆ. ಯಕ್ಷಗಾನ ಮೂಲದಿಂದ ಬಂದ ಈ ಬಾಲಕನಿಗೆ ಸಿನಿಮಾ ರಂಗದಲ್ಲಿ ಒಳ್ಳೆ ಭವಿಷ್ಯವಿದೆ ಎಂದು  ರಮೇಶ್‌ ಅರವಿಂದ್‌ ಹೇಳಿದರು. ಛಾಯಾಗ್ರಹಕ ಸತ್ಯ ಹೆಗಡೆ, ನಿರ್ಮಾಪಕ ಮನು ಕುಮಾರ್‌, ಕಲಾವಿದರಾದ ಪದ್ಮಜಾರಾವ್‌, ಭಾರ್ಗವಿ ನಾರಾಯಣ್‌, ನಾಗಸುಂದರ್‌  ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.