ಪುಂಡರು ಚುಡಾಯಿಸಿದರೆ ಕರೆ ಮಾಡಿ


Team Udayavani, Mar 12, 2020, 3:00 AM IST

pundaru

ಹುಣಸೂರು: ಹೆಣ್ಣು ಮಕ್ಕಳು ದೌರ್ಜನ್ಯವನ್ನು ಮೆಟ್ಟಿ ನಿಲ್ಲುವ ಆತ್ಮ ಸ್ಥೈರ್ಯ ಬೆಳೆಸಿಕೊಳ್ಳಬೇಕು. ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ನಗರಠಾಣೆ ಎಎಸ್‌ಐ ಲಕ್ಷ್ಮಮ್ಮ ಸಲಹೆ ನೀಡಿದರು. ನಗರದ ಮಹಿಳಾ ಸರ್ಕಾರಿ ಪದವಿ ಕಾಲೇಜಿನ ಲೈಂಗಿಕ ಕಿರುಕುಳ ನಿವಾರಣೆ ಹಾಗೂ ರ್ಯಾಗಿಂಗ್‌ ವಿರೋಧಿ ಸಮಿತಿ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಲೈಂಗಿಕ ದೌರ್ಜನ್ಯ ತಡೆ ವಿಷಯ ಕುರಿತು ಅವರು ಮಾತನಾಡಿದರು.

ಬಹುತೇಕ ಸಂದರ್ಭಗಳಲ್ಲಿ ಬಸ್‌ಗಳಲ್ಲಿ, ರಸ್ತೆಯಲ್ಲಿ ಓಡಾಡುವಾಗ, ಕಾಲೇಜಿಗೆ ಬರುವ-ಹೋಗುವ ವೇಳೆ ಕಿಡಿಗೇಡಿಗಳು ಚುಡಾಯಿಸುತ್ತಾರೆ. ದೌರ್ಜನ್ಯ ನಡೆದರೂ ಮರ್ಯಾದೆಗೆ ಅಂಜಿ ಪ್ರಶ್ನಿಸಲ್ಲ, ಇದರಿಂದಾಗಿಯೇ ಯುವತಿಯರು ತೊಂದರೆಗೆ ಸಿಲುಕಿಕೊಳ್ಳಲಿದ್ದಿರಿ ಎಂದು ಎಚ್ಚರಿಕೆ ನೀಡಿದರು.

ಸಹಾಯವಾಣಿ: ನಿಮ್ಮನ್ನು ಚುಡಾಯಿಸುವ, ಹಿಂಬಾಲಿಸುವ, ತೊಂದರೆ ಕೊಡುವ ಸಂದರ್ಭಗಳಲ್ಲಿ ತುರ್ತು ಸ್ಪಂದನ ಸಹಾಯವಾಣಿ (112) ಕರೆ ಮಾಡಿದರೆ ನೀವು ಇರುವ ಸ್ಥಳಕ್ಕೆ ಸಿಬ್ಬಂದಿ ಬಂದು ನೆರವು ನೀಡುವರು. ನಿಮಗೆ ತೊಂದರೆಯಾದಾಗ ಹೆದರದೆ ದೂರು ನೀಡಬೇಕು. ಕಾಲೇಜು ವಿದ್ಯಾರ್ಥಿಗಳು ಓದು ಮುಗಿಸುವ ತನಕ ಪ್ರೀತಿಯ ಬಲೆಯಲ್ಲಿ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು. ಹೆಣ್ಣುಮಕ್ಕಳು ಸಹ ಸಭ್ಯ ಬಟ್ಟೆಗಳನ್ನು ಧರಿಸಬೇಕು. ಮೊಬೈಲ್‌ ಚಾಟಿಂಗ್‌, ಫೇಸ್‌ಬುಕ್‌, ವ್ಯಾಟ್ಸಾಪ್‌ನಿಂದ ಆದಷ್ಟು ದೂರವಿರಬೇಕು. ಅಗತ್ಯವಿದ್ದಲ್ಲಿ ಮಾತ್ರ ಮೊಬೈಲ್‌ ಬಳಸಬೇಕು ಎಂದು ತಿಳಿಸಿದರು.

ಗೆಳತಿ ಕ್ಲಿನಿಕ್‌: ವಕೀಲೆ‌ ಪವಿತ್ರ ಮಾತನಾಡಿ, ಕಾಲೇಜುಗಳಲ್ಲಿ ನಡೆಯುವ ರ್‍ಯಾಂಗಿಂಗ್‌, ಸಾಮಾಜಿಕ ಜಾಲತಾಣಗಳಲ್ಲಿ ಸಲ್ಲದ ವಿಷಯ, ಫೋಟೋ ಅಪ್‌ ಲೋಡ್‌ ಮಾಡುವುದು, ಅನುಮತಿ ಇಲ್ಲದೆ ಯಾವುದೇ ಹೆಣ್ಣುಮಕ್ಕಳ ಫೋಟೋ ತೆಗೆಯುವುದು, ಸಾರ್ವಜನಿಕ ಸ್ಥಳಗಳಲ್ಲಿ ಚುಡಾಯಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಹಿಳೆಯರ ಸಂರಕ್ಷಣೆಗಾಗಿ 2012ರಲ್ಲಿ ಜಾರಿಗೆ ಬಂದ ಫೋಕ್ಸೋ ಕಾಯ್ದೆ ರಕ್ಷಾಕವಚವಿದ್ದಂತೆ. ಯಾವುದೇ ದೌರ್ಜನ್ಯ ನಡೆದ ಸಂದರ್ಭದಲ್ಲಿ ಸಿಡಿಪಿಒ ಕಚೇರಿಯಲ್ಲಿ ಮಹಿಳಾ ಸಹಾಯವಾಣಿ ಇದೆ.

ಆಸ್ಪತ್ರೆಯಲ್ಲಿ ಗೆಳತಿ ಕ್ಲಿನಿಕ್‌ ತೆರೆಯಲಾಗಿದ್ದು, ನಿಮ್ಮ ರಕ್ಷಣೆಗಾಗಿ ಇರುವ ಯೋಜನೆಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಪ್ರಾಚಾರ್ಯ ಜ್ಞಾನಪ್ರಕಾಶ್‌, ಲೈಂಗಿಕ ಕಿರುಕುಳ ನಿವಾರಣಾ ಸಮಿತಿ ಸಂಚಾಲಕಿ ಡಿ.ದೀಪಾ ರ್ಯಾಗಿಂಗ್‌ ವಿರೋಧಿ ಸಮಿತಿ ಸಂಚಾಲಕಿ ಡಾ.ಕಲಾಶ್ರೀ, ವಿದ್ಯಾರ್ಥಿನಿಯರಾದ ಉಮ್ಮೇ ಅಸ್ಮಾ, ಹರ್ಷಿತಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಚಾಲಕ ಡಾ.ದೀಪುಕುಮಾರ್‌, ಸಹಾಯಕ ಪ್ರಾಧ್ಯಾಪಕರಾದ ನಾಗಣ್ಣ, ಅಂಬುಜಾಕ್ಷಿ, ಭಾರತಿ, ಜನಿಫರ್‌ ಅಂದ್ರಾದೆ ಮತ್ತಿತರರು ಉಪಸ್ಥಿತರಿದ್ದರು.

ಕೇಸ್‌ ದಾಖಲಿಸಿದ 6 ತಿಂಗಳೊಳಗೆ ನ್ಯಾಯ: ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ಪ್ರೀತಿ-ಪ್ರೇಮದ ಹೆಸರಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಬಹುತೇಕ ಸಂದರ್ಭಗಳಲ್ಲಿ ಬಸ್‌ಗಳಲ್ಲಿ, ರಸ್ತೆಯಲ್ಲಿ ಓಡಾಡುವಾಗ, ಕಾಲೇಜಿಗೆ ಬರುವ-ಹೋಗುವ ವೇಳೆ ಪುಂಡರು, ಕಿಡಿಗೇಡಿಗಳು ರೇಗಿಸುವುದು ಸಾಮಾನ್ಯವಾಗಿದೆ. ತಮ್ಮ ಮೇಲೆ ದೌರ್ಜನ್ಯ ನಡೆದರೂ ಮರ್ಯಾದೆಗೆ ಅಂಜುವರು. ದೂರು ನೀಡಲ್ಲ, ಇದು ತಪ್ಪು. ಮಹಿಳೆಯರ ರಕ್ಷಣೆಗಾಗಿಯೇ ಪರಿಣಾಮಕಾರಿ ಫೋಕ್ಸೋ ಕಾಯ್ದೆ ಜಾರಿಯಲ್ಲಿದೆ. ಪ್ರಕರಣ ದಾಖಲಾದ ಆರು ತಿಂಗಳೊಳಗೆ ನ್ಯಾಯ ಸಿಗಲಿದೆ ಎಂದು ಎಎಸ್‌ಐ ಲಕ್ಷ್ಮಮ್ಮ ತಿಳಿಸಿದರು.

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.