ಪಿರಿಯಾಪಟ್ಟಣ ಹಾಲಿ ಮಾಜಿ, ಶಾಸಕರು, ಕಾರ್ಯಕರ್ತರ ಪ್ರಚಾರ


Team Udayavani, Nov 26, 2019, 3:00 AM IST

piriyapa

ಪಿರಿಯಾಪಟ್ಟಣ: ನೆರೆ ಹುಣಸೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಪ್ರಚಾರದಲ್ಲಿ ತಾಲೂಕಿನ ಹಾಲಿ ಮಾಜಿ ಶಾಸಕರು ಹಾಗೂ ಕಾರ್ಯಕರ್ತರ ಅಬ್ಬರ ಜೋರಾಗಿದೆ. ರಾಜ್ಯ ರಾಜಕಾರಣದ ಅಳಿವು ಉಳಿವು, ರಾಜಕಾರಣದ ದಿಕ್ಸೂಚಿಯ ಚುನಾವಣೆ ಎಂದು ಬಿಂಬಿತವಾಗಿರುವ ರಾಜ್ಯದ 17 ಕ್ಷೇತ್ರಗಳ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ಚುನಾವಣೆಯೂ ಗಮನ ಸೆಳೆದಿದೆ.

ಪ್ರಥಮ ಚುನಾವಣೆ: ಮೊದಲನೆಯದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ, ಇವರು ವಿರೋಧ ಪಕ್ಷದ ನಾಯಕರಾಗಿ ಆಧಿಕಾರ ವಹಿಸಿಕೊಂಡ ನಂತರ ಪ್ರಥಮವಾಗಿ ನಡೆಯುತ್ತಿರುವ ಚುನಾವಣೆ ಇದಾಗಿದೆ. ತಮ್ಮ ರಾಜಕೀಯ ವೈರಿ ಎಚ್‌.ವಿಶ್ವನಾಥ್‌ ಅವರನ್ನು ಸೋಲಿಸಿ ತಮ್ಮ ಆಪ್ತ ಎಚ್‌.ಪಿ.ಮಂಜುನಾಥ್‌ ಅವರನ್ನು ಗೆಲ್ಲಿಸುವ ಪಣ ಹಾಗೂ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ನಡೆಯುತ್ತಿರುವ ಎಂಬಿತ್ಯಾದಿ ಕಾರಣಗಳಿಂದ ಹುಣಸೂರು ಉಪಚುನಾವಣೆ ರೋಚಕತೆ ಪಡೆದಿದೆ.

ಪಿರಿಯಾಪಟ್ಟಣ-ಹುಣಸೂರು ನಂಟು: ನೆರೆಯ ತಾಲೂಕಾದ ಹುಣಸೂರಿಗೂ ಪಿರಿಯಾಪಟ್ಟಣಕ್ಕೂ ಅವಿನಾಭಾವ ಸಂಬಂಧ ಇದೆ. ಪಿರಿಯಾಪಟ್ಟಣದ ಶಾಸಕ ಕೆ.ಮಹದೇವ್‌ ಹಾಗೂ ಮಾಜಿ ಸಚಿವ ಕೆ.ವೆಂಕಟೇಶ್‌ ಹುಣಸೂರು ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಮಾಜಿ ಸಚಿವ ಕೆ.ವೆಂಕಟೇಶ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ಪರ ಹಬ್ಬನಕುಪ್ಪೆ, ಚಿಲ್ಕುಂದ, ನಾಗಮಂಗಲ, ಅತ್ತಿಕುಪ್ಪೆ, ಹನಗೋಡು, ಹೊನ್ನೇನಹಳ್ಳಿ, ವಡ್ಡಂಬಾಳು, ತಟ್ಟೆಕೆರೆ ಮತ್ತಿತರ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದರೆ, ಶಾಸಕ ಕೆ.ಮಹದೇವ್‌ ಅವರು ಜೆಡಿಎಸ್‌ ಅಭ್ಯರ್ಥಿ ಸೋಮಶೇಖರ್‌ ಪರ ಹುಣಸೂರು ಟೌನ್‌, ಬನ್ನಿಕುಪ್ಪೆ, ಹನಗೋಡು, ಬಿಳಿಕೆರೆ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇನ್ನಳಿದಂತೆ ತಾಲೂಕಿನ ಗಡಿ ಭಾಗದ ಆಯಾಯ ಪಕ್ಷದ ಕಾರ್ಯಕರ್ತರು, ಮುಖಂಡರು, ಸಂಬಂಧಿಕರ ಮನೆಗಳಿಗೆ ತೆರಳಿ ಮತಯಾಚಿಸುತ್ತಿದ್ದಾರೆ.

ಅದೇ ರೀತಿ ತಾಲೂಕು ಬಿಜೆಪಿ ಘಟಕದ ಮುಖಂಡರು ಹಾಗೂ ಕಾರ್ಯಕರ್ತರು ಕೂಡ ಬಿಜೆಪಿ ಅಭ್ಯರ್ಥಿ ವಿಶ್ವನಾಥ್‌ ಪರ ಅಲ್ಲಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಪಿರಿಯಾಪಟ್ಟಣಕ್ಕೆ ಗಡಿಗೆ ಹೊಂದಿಕೊಂಡಂತಿರುವ ಹುಣಸೂರಿನ ಗ್ರಾಮಗಳಲ್ಲಿ ಮಾಜಿ ಮತ್ತು ಹಾಲಿ ಶಾಸಕರ ಅಪಾರ ಅಭಿಮಾನಿಗಳಿದ್ದು, ಮತದಾರರು ಯಾರ ಪರವಾಗಿ ಮತ ನೀಡಿ ಯಾವ ಪಕ್ಷದ ಉತ್ತಮ ಅಭ್ಯರ್ಥಿಯನು ಗೆಲ್ಲಿಸುತ್ತಾರೆ ಚುನಾವಣಾ ನಂತರದ ಫ‌ಲಿತಾಂಶವನ್ನು ಕಾದು ನೋಡಬೇಕಾಗಿದೆ.

ಹಣ, ಹೆಂಡಕ್ಕಾಗಿ ದುಂಬಾಲು: ಪಿರಿಯಾಪಟ್ಟಣದಿಂದ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಹುಣಸೂರು ವಿಧಾನಸಭಾ ಉಪ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲೂ ಯುವಕರು ಗುಂಪು ಗುಂಪುಗಳನ್ನು ಮಾಡಿಕೊಂಡು ಮತಯಾಚಿಸುತ್ತಿದ್ದಾರೆ. ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರೆ ದಿನಕ್ಕಿಷ್ಟು ಹಣ, ಹೆಂಡ, ಪಾರ್ಟಿಗಳು ಕೂಡ ಸಿಗುತ್ತಿರುವುದು ಕಂಡು ಬರುತ್ತಿದೆ.

ಇದನ್ನು ಮನಗಂಡ ಕೆಲವು ಯುವಕರ ಗುಂಪು ಆಯಾಯ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡಿ ತಮ್ಮ ಕಡೆಯವರು ಆ ಊರಿನಲ್ಲಿದ್ದಾರೆ, ಈ ಊರಿನಲ್ಲಿದ್ದಾರೆ, ನಮಗೆ ಹಣ ನೀಡಿದರೆ ಅವರಿಂದ ಓಟು ಹಾಕಿಸುತ್ತೇವೆ ಎಂದು ದುಂಬಾಲು ಬೀಳುತ್ತಿರುವುದು ಕಂಡು ಬರುತ್ತಿದೆ.

* ಪಿ.ಎನ್‌.ದೇವೇಗೌಡ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.