ಹುಲಿ ದಾಳಿಗೆ ರಾಸು ಬಲಿ: ಕಾರ್ಯಾಚರಣೆ
Team Udayavani, Sep 7, 2019, 3:00 AM IST
ಹುಣಸೂರು: ನಾಗರಹೊಳೆ ಉದ್ಯಾನದಂಚಿನಲ್ಲಿ ಮತ್ತೆ ಹುಲಿ ದಾಳಿ ಮುಂದುವರಿದಿದ್ದು, ಮತ್ತೊಂದು ಜಾನುವಾರು ಬಲಿಯಾಗಿದೆ. ತಾಲೂಕಿನ ಹನಗೋಡು ಹೋಬಳಿಯ ಕೆ.ಜಿ.ಹೆಬ್ಬನಕುಪ್ಪೆಯ ತರಗನ್ ಎಸ್ಟೇಟ್ನಲ್ಲಿ ಎಸ್ಟೇಟ್ ಮಾಲೀಕರಿಗೆ ಸೇರಿದ ಜಾನುವಾರು ಬಲಿಯಾಗಿದ್ದು, ಮೇಯಲು ಬಿಟ್ಟಿದ್ದ ವೇಳೆ ಹುಲಿ ದಾಳಿ ನಡೆಸಿ ಕೊಂದು-ತಿಂದು ಹಾಕಿದೆ.
ಘಟನೆ ವಿವರ: ಜಾನುವಾರುಗಳನ್ನು ಎಸ್ಟೇಟ್ನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಒಂದು ಜಾನುವಾರು ಹೊರತು ಪಡಿಸಿ, ಉಳಿದೆಲ್ಲ ಜಾನುವಾರುಗಳು ಗುರುವಾರ ಸಂಜೆ ವಾಪಸ್ಸಾಗಿದ್ದವು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಆರ್ಎಫ್ಒ ಹನುಮಂತರಾಯ ಹಾಗೂ ಸಿಬ್ಬಂದಿ ಎಸ್ಟೇಟ್ನಲ್ಲಿ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ನಡೆಸಿದ ವೇಳೆ ಹುಲಿ ದಾಳಿ ನಡೆಸಿದ್ದು, ಜಾನುವಾರ ಸಾವಿಗೀಡಾಗಿರುವುದು ಪತ್ತೆಯಾಗಿದೆ.
ಹುಲಿ ಪತ್ತೆಗೆ ಸಿಸಿ ಕ್ಯಾಮೆರಾ: ಇದೀಗ ಸ್ಥಳದಲ್ಲಿ ನಾಲ್ಕು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ, ಹುಲಿಯೋ, ಹುಲಿ ಮರಿಯೋ ಎಂಬುದನ್ನು ತಿಳಿದು ಸೆರೆ ಹಿಡಿಯಲು ಬೋನ್ ಇಡಲಾಗುವುದು ಎಂದು ಅರಣ್ಯಾಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ವರ್ಷದಿಂದ ಹುಲಿ ಉಪಟಳ: ಕಳೆದ ಒಂದು ವರ್ಷದಿಂದೀಚೆಗೆ ಆಡು-ಕುರಿ ಸೇರಿದಂತೆ 15ಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿ ತೆಗೆದುಕೊಂಡಿದೆ. ಈ ಭಾಗದಲ್ಲಿ ಜನರು ಓಡಾಡಲು ಹೆದರುತ್ತಿದ್ದು, ಹುಲಿ ಸೆರೆ ಹಿಡಿದು ಆತಂಕವನ್ನು ದೂರಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ