ಕಾವೇರಿ ನೀರು ಬಿಡಲು ಸಾಧ್ಯವಿಲ್ಲ


Team Udayavani, May 5, 2018, 12:31 PM IST

m1-kaveri.jpg

ತಿ.ನರಸೀಪುರ: ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಇರುವುದರಿಂದ ಸುಪ್ರೀಂಕೋರ್ಟ್‌ ತೀರ್ಪಿನಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಪಾದಯಾತ್ರೆ ನಡೆಸಿ ಮತಯಾಚಿಸಿದ ಮಾತನಾಡಿದ ಅವರು, ಸತತ ಮೂರ್‍ನಾಲ್ಕು ವರ್ಷಗಳಿಂದ ಮಳೆ ಬೀಳದ್ದರಿಂದ ಕೃಷಿಗಿರಲಿ, ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲ ಸಂಕಷ್ಟದಲ್ಲಿ ನಾವಿದ್ದೇವೆ. ಇಂತಹ ಸಂದರ್ಭದಲ್ಲಿ ನೆರೆಯ ರಾಜ್ಯಕ್ಕೆ ನೀರು ಹರಿಸುವುದು ಕಷ್ಟವಾದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ನೀಡಿದ ಕಾಂಗ್ರೆಸ್‌ ಸಾಧನೆ ಮತ್ತು ಜನಪರ ಯೋಜನೆಗಳನ್ನು ಜನರು ಬೆಂಬಲಿಸಿ ಮತ್ತೆ ಸರ್ಕಾರ ರಚನೆಗೆ ಕಾಂಗ್ರೆಸ್‌ಗೆ ಅವಕಾಶ ನೀಡುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸವನ್ನು ಜನರು ಬೆಂಬಲಿಸಿ ಮತ ನೀಡಲಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರ ಪರಿಶ್ರಮದಿಂದ ಚುನಾವಣಾ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಎಲ್ಲಾ ವರ್ಗದ ಜನರ ಬೆಂಬಲದಿಂದ ಮತ್ತೆ ಗೆಲ್ಲುವ ವಿಶ್ವಾಸವಿದೆ ಎಂದು ಮಹದೇವಪ್ಪ ತಿಳಿಸಿದರು.

ಇದೇ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಮುಖಂಡರಾದ ನಂಜುಂಡಸ್ವಾಮಿ, ಸಣ್ಣಪ್ಪ, ದ.ಮಹಾದೇವಪ್ಪ, ಪಿ.ಸ್ವಾಮಿ, ಮೀಸೆ ಮರಿಸ್ವಾಮಿ, ಜಿ.ನಟರಾಜು, ನಾಗೇಶ, ದ.ಗುರುಸ್ವಾಮಿ, ಎಂ.ಎನ್‌.ಶಿವು, ನಾಗರಾಜಪ್ಪ ಹಾಗೂ ಇನ್ನಿತರರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಮತಯಾಚನೆಗೆ ಆಗಮಿಸಿದ ಮಹದೇವಪ್ಪ ಅವರನ್ನು ಪಟಾಕಿ ಸಿಡಿಸಿ, ಭಾರಿ ಗಾತ್ರದ ಹಾರವನ್ನು ಹಾಕಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಮಾಜಿ ಶಾಸಕ ಎಸ್‌.ಕೃಷ್ಣಪ್ಪ, ಜಿಪಂ ಸದಸ್ಯ ಮಂಜುನಾಥನ್‌, ಮೀನುಗಾರಿಕೆ ಮಹಾ ಮಂಡಲದ ಅಧ್ಯಕ್ಷ ಎನ್‌.ನಂಜೇಗೌಡ, ಜಿಪಂ ಮಾಜಿ ಸದಸ್ಯ ಪುಟ್ಟಬಸವಯ್ಯ, ಕಾಂಗ್ರೆಸ್‌ ಯುವ ಮುಖಂಡ ಸುನೀಲ್‌ ಬೋಸ್‌, ಕಿಯೋನಿಕ್ಸ್‌ ನಿರ್ದೇಶಕ ಉಕ್ಕಲಗೆರೆ ಬಸವಣ್ಣ, ಸ್ಪಟಿಕ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಂ.ಕುಮಾರ, ತಾಪಂ ಸದಸ್ಯ ರಾಮಲಿಂಗಯ್ಯ, ಗ್ರಾಪಂ ಸದಸ್ಯ ಎಂ.ರಾಜು, ಮಾಜಿ ಉಪಾಧ್ಯಕ್ಷ ಸಿ.ನಂಜುಂಡಯ್ಯ, ಪಿಕಾರ್ಡ್‌ ಮಾಜಿ ಅಧ್ಯಕ್ಷ ಕೆ.ವಜ್ರೆàಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಕಗ್ಗಲೀಪುರ ಎಂ.ರಾಜು, ಉದ್ಯಮಿ ಕೆ.ನಾಗೇಂದ್ರ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.