ಕಾವೇರಿ, ಕಬಿನಿ, ಕಪಿಲೆ ರೌದ್ರಾವತಾರಕ್ಕೆ ಜನತೆ ತತ್ತರ 


Team Udayavani, Aug 19, 2018, 11:23 AM IST

m1-kaveri.jpg

ಕೇರಳ, ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೈಸೂರು ಜಿಲ್ಲೆ ಹಾಗೂ ಚಾಮರಾಜನಗರದ ಹಲವು ಗ್ರಾಮಗಳು ತತ್ತರಿಸಿ ಹೋಗಿವೆ. ಕೆಆರ್‌ಎಸ್‌ನಿಂದ 1.27 ಲಕ್ಷ ಕ್ಯೂಸೆಕ್‌, ಕಬಿನಿಯಿಂದ 76,250 ಕ್ಯೂಸೆಕ್‌ ನೀರನ್ನು  ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳು ಜಲಾವೃತಗೊಂಡಿದ್ದು, ಸಹಸ್ರಾರು ಎಕರೆ ಗದ್ದೆಗಳು ಮುಳುಗಿ ಹೋಗಿವೆ. ನೂರಾರು ಮನೆಗಳು ಕುಸಿದಿವೆ. ಪ್ರವಾಹದಿಂದ ಜನರು ಬೀದಿಪಾಲಾಗಿದ್ದು, ಕೆಲವಡೆ ಗಂಜಿ ಕೇಂದ್ರ ತೆರೆಯಲಾಗಿದೆ. ನೆರೆ ಪ್ರದೇಶಕ್ಕೆ ಸಚಿವರಾದ ದೇಶಪಾಂಡೆ, ಜಿ.ಟಿ. ದೇವೇಗೌಡ, ಪುಟ್ಟರಂಗಶೆಟ್ಟಿ, ಎನ್‌.ಮಹೇಶ್‌ ಭೇಟಿ ನೀಡಿ ಪರಿಶೀಲಿಸಿದರು. ನೆರೆ ಸಂತ್ರಸ್ತರಿಗೆ ನೆರವು ನೀಡಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಮಳೆಗೆ ನಲುಗಿತು ಮೈಸೂರು ಜಿಲ್ಲೆ
ಮೈಸೂರು:
ಕೇರಳ ಹಾಗೂ ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೈಸೂರು ಜಿಲ್ಲೆಯೂ ನಲುಗಿ ಹೋಗಿದ್ದು, ನೂರಾರು ಎಕರೆ ಜಮೀನು ಜಲಾವೃತವಾಗಿ, ಜನಜೀವನ ಅಸ್ತವ್ಯಸ್ತವಾಗಿ ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಕೇರಳದ ವೈನಾಡು ಪ್ರದೇಶ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ 81,091 ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, 2284 ಅಡಿ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಹೆಚ್ಚಿನ ಒಳ ಹರಿವು ಬರುತ್ತಿರುವುದರಿಂದ ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಶನಿವಾರ ಮುಂಜಾನೆ 4ಗಂಟೆ ವೇಳೆಗೆ ಜಲಾಶಯದಿಂದ ನದಿಗೆ 75 ಸಾವಿರ ಕ್ಯೂಸೆಕ್‌ ಹಾಗೂ ನಾಲೆಗಳಿಗೆ 1250 ಕ್ಯೂಸೆಕ್‌ ಸೇರಿದಂತೆ ಒಟ್ಟಾರೆ 76,250 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದ್ದು, ಇದರ ಪರಿಣಾಮ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.

ಇದರಿಂದಾಗಿ ಕಪಿಲಾ ನದಿ ಪಾತ್ರದಲ್ಲಿ ಬರುವ ನಂಜನಗೂಡು, ತಿ.ನರಸೀಪುರ ತಾಲೂಕುಗಳಲ್ಲಿ ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ತಿ.ನರಸೀಪುರದಿಂದ ಇತಿಹಾಸ ಪ್ರಸಿದ್ಧ ತಲಕಾಡು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಹೆಮ್ಮಿಗೆ ಸೇತುವೆ ಮುಳುಗಡೆಯಾಗಿರುವುದರಿಂದ ಸೇತುವೆ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರೈತರು ಸಂಕಷ್ಟ ಪರಿಸ್ಥಿತಿ ಎದುರಿಸುವಂತಾಗಿದೆ. ಜೊತೆಗೆ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದರಿಂದ ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದ ಗಿರಿಜಾ ಕಲ್ಯಾಣ-ದಾಸೋಹ ಭವನದಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರದಲ್ಲಿ ಇವರಿಗೆ ಪುನರ್‌ವಸತಿ ಕಲ್ಪಿಸಲಾಗಿದೆ.

ಸಚಿವದ್ವಯರ ಭೇಟಿ:  ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಶನಿವಾರ, ಕಪಿಲಾ ನದಿ ಪ್ರವಾಹದಿಂದ ಹಾನಿಗೊಳಗಾದ ನಂಜನಗೂಡು ತಾಲೂಕು ವ್ಯಾಪ್ತಿಯ ಮೈಸೂರು-ಊಟಿ ಹೆದ್ದಾರಿಯಲ್ಲಿ ಬರುವ ಮಲ್ಲನಮೂಲೆ ಮಠ, ನಂಜನಗೂಡು ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನದ ಮುಡಿಕಟ್ಟೆ, ತೋಪಿನ ಬೀದಿ, ತೇರಿನ ಬೀದಿ, ಹಳ್ಳದಕೇರಿ, ಒಕ್ಕಲಗೇರಿ, ಸರಸ್ವತಿ ಕಾಲೋನಿ, ಹೆಜ್ಜಿಗೆ ಸೇತುವೆ, ಚಿಕ್ಕಯನ್ನ ಛತ್ರ ಹೋಬಳಿಯ ಬೊಕ್ಕಹಳ್ಳಿ, ಕುಳ್ಳಂಕನ ಹುಂಡಿ, ಬಿಳಿಗೆರೆ ಹೋಬಳಿಯ ಸುತ್ತೂರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯಕ್ಕೆ 1.14 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ಒಳ ಹರಿವು ಬರುತ್ತಿದೆ. 124.80 ಅಡಿ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥ್ಯದ ಕೆಆರ್‌ಎಸ್‌ ಜಲಾಶಯ ಈಗಾಗಲೇ ಭರ್ತಿಯಾಗಿರುವುದರಿಂದ ಜಲಾಶಯದ ಸುರಕ್ಷತೆ ದೃಷ್ಟಿಯಿಂದ 1.27 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ತಿ.ನರಸೀಪುರ ತಾಲೂಕಿನಲ್ಲಿ ನೂರಾರು ಎಕರೆ ಗದ್ದೆ ಜಲಾವೃತವಾಗಿದೆ. 

ಕೆ.ಆರ್‌.ನಗರದಲ್ಲೂ ಪ್ರವಾಹ: ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಕೆ.ಆರ್‌.ನಗರ ತಾಲೂಕಿನಲ್ಲೂ ಪ್ರವಾಹ ಭೀತಿ ಎದುರಾಗಿದ್ದು, ತಾಲೂಕಿನ ಹನಗೋಡು ಗ್ರಾಮದಲ್ಲಿರುವ ಈಶ್ವರ ದೇವಸ್ಥಾನ ಮುಳುಗಡೆಯಾಗಿದೆ. ಕೆ.ಆರ್‌.ನಗರ ಪಟ್ಟಣದ ಸುತ್ತಮುತ್ತಲಿನ ಹಳೆ ಎಡತೊರೆ, ಸನ್ಯಾಸಿಪುರ, ಹಂಪಾಪುರ, ಕಪ್ಪಡಿ, ಹಳೇ ಕಪ್ಪಡಿ ಗ್ರಾಮಗಳಲ್ಲಿ ನೆರೆ ಬಂದಿದ್ದು, ನೂರಾರು ಎಕರೆ ಗದ್ದೆ ಜಲಾವೃತವಾಗಿದೆ. ಕಪ್ಪಡಿಯ ರಾಚಪ್ಪಾಜಿ ದೇವಸ್ಥಾನದ ಸನ್ನಿಧಿವರೆಗೂ ನೀರು ನುಗ್ಗಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.