ಸಿಬಿಎಸ್‌ಸಿ ಪಠ್ಯಾಧಾರಿತ ಏಕರೂಪ ಶಿಕ್ಷಣ ಜಾರಿ


Team Udayavani, Jun 24, 2018, 11:51 AM IST

m3-cbse.jpg

ಹುಣಸೂರು: ಮಗುವಿಗಾಗಿ ಶಾಲೆ ಅದು ಶಿಕ್ಷಕರಿಗಲ್ಲ ಎಂಬುದನ್ನು ಅರಿಯಬೇಕಿದೆ. ಮುಂದೆ ಸಿಬಿಎಸ್‌ಸಿ ಪಠ್ಯಕ್ರಮ ಆಧಾರಿತ ಏಕರೂಪ ಶಿಕ್ಷಣ ಜಾರಿಗೆ ಬರುತ್ತಿದೆ. ನಮ್ಮ ಶಿಕ್ಷಕರು ಬದಲಾಗಬೇಕಿದೆ ಎಂದು ಶಾಸಕ ಎಚ್‌.ವಿಶ್ವನಾಥ್‌ ತಿಳಿಸಿದರು.

ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ತಾಲೂಕು ಪ್ರೌಢಶಾಲೆಗಳ ಸಹಶಿಕ್ಷಕರಿಗಾಗಿ ನಡೆದ ಯಶಸ್ಸಿನ ಹರಿಕಾರ ಗುರು ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಶಾಲೆಗೆ ಬರುವ ಮಗುವನ್ನು ಕೇಂದ್ರ ಬಿಂದುವನ್ನಾಗಿಸಿಕೊಂಡು ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸಬೇಕಿದೆ. ಶಿಕ್ಷಕರು ಮಕ್ಕಳಲ್ಲಿ ಮಕ್ಕಳಾಗಿ ಅವರ ಭಾವನೆ, ಮಾತುಗಳನ್ನು ಕೇಳುವ ಕಿವಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಸರಕಾರಿ ಶಾಲೆಗಳು ಬಾಗಿಲು ಹಾಕುತ್ತಿರುವುದು ದುರಂತ. ಸದನದಲ್ಲಿ ತಲಾ 7 ಮಂದಿ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೂ ಇವರೆಲ್ಲ ಸದನದಲ್ಲಿ ಮಕ್ಕಳ ಶಿಕ್ಷಣದ ಬಗ್ಗೆ ಚರ್ಚಿಸದೆ, ಖಾಸಗಿ ಆಡಳಿತ ಮಂಡಳಿ, ಶಿಕ್ಷಕರ ಬಗ್ಗೆ ಮಾತ್ರ ಚರ್ಚಿಸುತ್ತಾರೆ. ಇದನ್ನು ಪ್ರಶ್ನಿಸಿ, ವಿರೋಧ ಕಟ್ಟಿಕೊಂಡಿದ್ದೆ ಎಂದು ಸ್ಮರಿಸಿದರು. 

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ರೇವಣ್ಣ  ಮಾತನಾಡಿ, ತಾಲೂಕಿನ ಹಲವು ಶಾಲೆಗಳಲ್ಲಿ ಮೂಲ ಸೌಕರ್ಯದ ಕೊರತೆ, ಶಿಕ್ಷಕರ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿದೆ. ಶಾಸಕರ ಗಮನಕ್ಕೆ ತರಲಾಗಿದೆ. ಶಿಕ್ಷಕರಲ್ಲಿ ಹೊಸ ಹುರುಪು-ಕ್ರಿಯಾಶೀಲತೆಯನ್ನು ಬೆಳೆಸಲು ಕಾರ್ಯಗಾರಗಳು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪ್ರಾತ್ಯಕ್ಷತೆ ಮೂಲಕ ಪಾಠ ಮಾಡಿ: ಶಿಕ್ಷಣ ತಜ್ಞ, ತರಬೇತುದಾರ ಚೇತನ್‌ರಾಮ್‌ ಮಾತನಾಡಿ, ಶಿಕ್ಷಕರು ಮಕ್ಕಳನ್ನು ಅಂಕದ ಹಿಂದೆ ಓಡಿಸುವ  ಪ್ರವೃತ್ತಿ ಬೇಡ. ಪ್ರೀತಿಯಿಂದ ಕಾಣುವ, ಜ್ಞಾನದೊಂದಿಗೆ ಕೌಶಲ್ಯ, ಮೌಲ್ಯಗಳನ್ನು ತಿಳಿಸುವ, ಬದುಕು ಕಟ್ಟಿಕೊಳ್ಳುವ ಶಿಕ್ಷಣ ನೀಡಬೇಕು. ಕೊಠಡಿಯಲ್ಲಿ ಮಕ್ಕಳನ್ನು ತಮ್ಮತ್ತ ಸೂಜಿಗಲ್ಲಿನಂತೆ ಸೆಳೆಯುವ ಪಾಠ ನಿಮ್ಮಿಂದಾಗಲಿ,

ಪಾಠ ಮಾಡುವ ವೇಳೆ ಮಧ್ಯದಲ್ಲಿ ಪ್ರಶ್ನಿಸುವ, ಕಥೆ ಹೇಳುವ, ನೀತಿ ಪಾಠಗಳನ್ನು ತುಂಬುತ್ತಿರಬೇಕು. ಪಾಠಕ್ಕೆ ತಕ್ಕಂತೆ ಪ್ರಾತ್ಯಕ್ಷತೆ ನೀಡಿದಲ್ಲಿ ಬದಲಾವಣೆ ಸಾಧ್ಯ. ಅವರಲ್ಲಿ ಕೇಳಿಸುವ, ಓದಿಸುವ, ಪ್ರಶ್ನಿಸುವುದನ್ನು ರೂಢಿಸಿಕೊಳ್ಳಿ. ಪಾಠದಾಚೆಗಿನ ವಿಚಾರಗಳನ್ನೂ ತಿಳಿಸುವ ಮೂಲಕ ಅವರಲ್ಲಿ ಜ್ಞಾನವನ್ನು ಅರಳಿಸಬೇಕು. . ಕಲಿಕೆಯಲ್ಲಿ ಹಿಂದುಳಿದವರನ್ನು ಗುರುತಿಸಿ ಹೆಚ್ಚಿನ ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದರು.

ರೋಟರಿ ಕ್ಲಬ್‌ ಅಧ್ಯಕ್ಷ ಶ್ರೀಧರ್‌, ಇನ್ನರ್‌ವೀಲ್‌ ಕ್ಲಬ್‌ ಅಧ್ಯಕ್ಷರಾದ ಸೌಮ್ಯ, ಡಾ.ರಾಜೇಶ್ವರಿ, ಜೆಡಿಎಸ್‌ ಅಧ್ಯಕ್ಷ ಮಾದೇಗೌಡ, ಬಿಆರ್‌ಸಿ ಮೊಗಣ್ಣ, ಸಿಆರ್‌ಪಿಗಳಾದ ಕುಮಾರ್‌, ಮಾಧು ಪ್ರಸಾದ್‌, ಶಿಕ್ಷಕರ ಸಂಘಟನೆಯ ಕಾಂತರಾಜ್‌, ಸಿದ್ದರಾಜು ಭಾಗವಹಿಸಿದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.