ಡಿಕೆಶಿಗೆ ಭ್ರಷ್ಟಾಚಾರದ ಪ್ರಕರಣಗಳು ಹೊಸದೇನಲ್ಲ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Team Udayavani, Oct 13, 2021, 6:19 PM IST
ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಕುರಿತು ಸ್ವಪಕ್ಷದವರೇಯಾದ ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದು ಇದೀಗ ಬಿಜೆಪಿ ಪಕ್ಷಕ್ಕೆ ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿದೆ. ಉಗ್ರಪ್ಪ-ಸಲೀಂ ಅವರ ಸಂಭಾಷಣೆಯ ವಿಡಿಯೋ ಇಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ.
ಇಂದು ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಇಂತಹ ಹೊಲಸು ರಾಜಕೀಯದ ಬಗ್ಗೆ ಮಾತನಾಡುವ ಆಸಕ್ತಿ ಇಲ್ಲ. ಡಿಕೆಶಿಗೆ ಭ್ರಷ್ಟಾಚಾರದ ಪ್ರಕರಣಗಳು ಹೊಸದೇನಲ್ಲ. ಕಾಂಗ್ರೆಸ್ ಅಂದ್ರೆ ಅದು ಹಗರಣಗಳ ಸರ್ಕಾರ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಾಕಷ್ಟು ಹಗರಣಗಳು ನಡೆದಿವೆ. ಅವರದು ಹಗರಣಗಳ ಸರ್ಕಾರವಾಗಿತ್ತು. ಡಿಕೆಶಿ ನಡೆಸಿದ ಹಗರಣವನ್ನ ಅವರ ಪಕ್ಷದ ಮುಖಂಡರೇ ಇದೀಗ ಬಯಲು ಮಾಡಿದ್ದಾರೆ ಎಂದರು.
ಉತ್ತರ ಪ್ರದೇಶದಲ್ಲಿ ದೊಡ್ಡ ಯುದ್ದವೇ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ದೇಶದ ರಾಜಕೀಯ ನಿರ್ಣಯ ಮಾಡುವ ಚುನಾವಣೆ ಇದೆ. ಅಯೋಧ್ಯೆಯಲ್ಲಿ ಶತಮಾನಗಳ ನಮ್ಮ ಶ್ರೀರಾಮನ ಕನಸು ಈಡೇರಲಿದೆ. ಅದಕ್ಕಾಗಿ ಯೋಗೀಜಿಯ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು. ಈ ದೇಶ ನೆಮ್ಮದಿಯಿಂದ ಇರಬೇಕು. ಗಡಿಗಳ ರಕ್ಷಣೆ ಆಗಬೇಕು, ಕೃಷಿಕ ನೆಮ್ಮದಿಯಾಗಿರಬೇಕು ಎಂದು ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಇನ್ನು ದೇಶದಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದು ತಿಳಿಸಿದ ಕರಂದ್ಲಾಜೆ, ಈ ವರ್ಷ ದೇಶದಲ್ಲಿ ಉತ್ತಮ ಮಳೆ ಆಗಿ ಕೃಷಿ ಆದಾಯ ಹೆಚ್ಚಾಗಿದೆ. ನಮಗೆ ಪೊಟಾಷ್ ಹೊರ ದೇಶದಿಂದ ಬರುತ್ತೆ. ಕೋವಿಡ್ ಕಾರಣಕ್ಕೆ ವಿದೇಶದಿಂದ ಬರುವ ರಸಗೊಬ್ಬರದಲ್ಲಿ ಕೊಂಚ ಕೊರತೆ ಇದೆ. ಮೋದಿ ಸರ್ಕಾರ ಇನ್ನೆರಡು ವರ್ಷದಲ್ಲಿ ರಸಗೊಬ್ಬರದಲ್ಲೂ ಸ್ವಾವಲಂಬಿ ಆಗುವತ್ತ ಕಾರ್ಯಕ್ರಮ ರೂಪಿಸಿದೆ. ಅದರಲ್ಲೂ ಆತ್ಮನಿರ್ಭರ ಸಾಧಿಸಲು ಹೆಚ್ಚು ಕಾರ್ಖಾನೆಗಳ ಸ್ಥಾಪನೆ ಆಗಯತ್ತಿದೆ. ಈಗ ಎಣ್ಣೆ ತೈಲ ಹೊರತುಪಡಿಸಿ ದೇಶ ಉಳಿದ ವಿಚಾರದಲ್ಲಿ ಆತ್ಮನಿರ್ಭರ ಸಾಧಿಸಿದೆ. ಖಾದ್ಯ ತೈಲದ ವಿಚಾರದಲ್ಲೂ ನಾವು ಸ್ವಾವಲಂಬನೆ ಸಾಧಿಸಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ