ಯದುವಂಶದ ಕುಡಿಗೆ ಫೆ.20ರಂದು ನಾಮಕರಣ
Team Udayavani, Jan 16, 2018, 6:10 AM IST
ಮೈಸೂರು: ಯದುವಂಶದ ಕುಡಿ, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತ್ರಿಷಿಕಾ ಕುಮಾರಿ ದಂಪತಿಯ
ಮಗುವಿಗೆ ಫೆ.20ರಂದು ನಾಮಕರಣ ಶಾಸ್ತ್ರ ನಡೆಯಲಿದೆ.
ಅರಮನೆಯ ಕಲ್ಯಾಣಮಂಟಪದಲ್ಲಿ ಫೆ.19, 20ರಂದು ನಾಮಕರಣ ಶಾಸ್ತ್ರ ಏರ್ಪಡಿಸಲು ಪ್ರಮೋದಾದೇವಿ ಒಡೆಯರ್ ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. 19ರಂದು ಧಾರ್ಮಿಕ ಪೂಜೆ ವಿಧಿ ವಿಧಾನಗಳು ನಡೆಯಲಿದ್ದು, 20ರಂದು ಉತ್ತರಭಾದ್ರ ನಕ್ಷತ್ರದಲ್ಲಿ ನಾಮಕರಣ ಶಾಸ್ತ್ರ ನಡೆಯಲಿದೆ.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನ್ಮದಿನ (ಫೆ.20)ದಂದೇ ಮೊಮ್ಮಗನಿಗೆ ನಾಮಕರಣ ಮಾಡುತ್ತಿರುವುದು ವಿಶೇಷ. ಶ್ರೀಕಂಠದತ್ತ ಒಡೆಯರ್ ನಿಧನಾನಂತರ ಪ್ರಮೋದಾದೇವಿ ಯದುವೀರ್ ಅವರನ್ನು 2013ರಲ್ಲಿ ದತ್ತು ಸ್ವೀಕರಿಸಿ, 2016ರಲ್ಲಿ ರಾಜಸ್ಥಾನದ ಡುಂಗರ್ಪುರ್ ರಾಜಮನೆತನ ತ್ರಿಷಿಕಾಕುಮಾರಿಯನ್ನು ಯದುವೀರ್ಗೆ ವಿವಾಹ ಮಾಡಿದ್ದರು. ತ್ರಿಷಿಕಾ ಕುಮಾರಿ 2017ರ ನ.6ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಅಲ್ಲಿಂದ ತಾಯಿಮನೆಗೆ ತೆರಳಿದ್ದರು. ಫೆಬ್ರವರಿ ಎರಡನೇ ವಾರದಲ್ಲಿ ಮಗು-ಬಾಣಂತಿಯನ್ನು ಮೈಸೂರಿಗೆ ಕರೆತರಲಾಗುತ್ತದೆ ಎಂದು ಅರಮನೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ