ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ


Team Udayavani, Jul 20, 2019, 3:00 AM IST

mahalakshmi

ಮೈಸೂರು: ಮೂರನೇ ಆಷಾಢ ಶುಕ್ರವಾರದಂದು ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದರು. ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್‌ ಅವರ ನೇತೃತ್ವದಲ್ಲಿ ಅರ್ಚಕರು ತಾಯಿ ಚಾಮುಂಡೇಶ್ವರಿಗೆ ಮುಂಜಾನೆ 3.30ಕ್ಕೆ ಪಂಚಾಮೃತ ಅಭಿಷೇಕ ಹಾಗೂ ಏಕ ರುದ್ರಾಕ್ಷೆ ಪೂಜೆ ಸೇರಿದಂತೆ ನಾನಾ ಪೂಜ ಕೈಂಕರ್ಯ ನೆರವೇರಿಸಿದರು.

ಬೆಳಗ್ಗೆ 5.30ರಿಂದ ರಾತ್ರಿ 10ವರೆಗೂ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30 ಕ್ಕೆ ದೇವಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.

ಮಹಾಲಕ್ಷ್ಮೀ ಅಲಂಕಾರ: ಮೂರನೇ ಆಷಾಢ ಶುಕ್ರವಾರದಂದು ನಾಡಿನ ಅದಿದೇವತೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ಮುಂಜಾನೆ ನಸುಕಿನಲ್ಲಿಯೇ ನೆರೆದಿದ್ದ ಸಾವಿರಾರು ಭಕ್ತರು ಚಾಮುಂಡೇಶ್ವರಿಗೆ ಜಯಘೋಷಗಳನ್ನು ಕೂಗಿದರು. ಹರಕೆ ಹೊತ್ತ ಮಹಿಳೆಯರು ದೇವಸ್ಥಾನದ ಆವರಣದಲ್ಲಿ ಎಣ್ಣೆ ದೀಪಗಳನ್ನು ಹಚ್ಚಿ ತಮ್ಮ ಹರಕೆ ತೀರಿಸಿದರು.

ದೇಗುಲ ಒಳಾಂಗಣದಲ್ಲಿ ಸಚಿವ ಜಿ.ಟಿ.ದೇವೇಗೌಡ ಅವರು ಹೂವಿನ ಅಲಂಕಾರ ಮಾಡಿಸಿದ್ದರು. ರಾಜವಂಶಸ್ಥ ಯದುವೀರ್‌ ದಂಪತಿ ದೇವಿಗೆ ಮೊದಲ ಪೂಜೆ ನೆರವೇರಿಸಿದರು. ಬಳಿಕ ಸಚಿವ ಜಿ.ಟಿ. ದೇವೇಗೌಡ, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ದೇವಿ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ಜಿ.ಟಿ. ದೇವೇಗೌಡ, ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಇನ್ನಿತರರ ಗಣ್ಯರು ವಿಶೇಷ ಪೂಜೆ ಸಲ್ಲಿಸಿ ಚಾಮುಂಡೇಶ್ವರಿ ದರ್ಶನ ಪಡೆದರು.

ದಾಸೋಹ ಭವನದಲ್ಲಿ ಪ್ರಸಾದ ಸಂತರ್ಪಣೆ: ಬೆಂಗಳೂರಿನ ಉದ್ಯಮಿ ವೇಣುಗೋಪಾಲ್‌ ಅವರು ದಾಸೋಹ ಭವನದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ಇವರು ಕಳೆದ 28 ವರ್ಷಗಳಿಂದ ಮೂರನೇ ಆಷಾಢ ಶುಕ್ರವಾರದಂದು ಪ್ರಸಾದ ಸಂತರ್ಪಣೆ ಮಾಡುತ್ತಾ ಬಂದಿದ್ದಾರೆ.

ಅನ್ನಸಂತರ್ಪಣೆ ರಾತ್ರಿ 7.30 ರವರೆಗೂ ನಡೆಯಿತು. ಉಪ್ಪಿಟ್ಟು, ಮೊಸರನ್ನ, ಪಲಾವ್‌, ಬಿಸಿಬೇಳೆ ಬಾತ್‌, ಕೇಸರಿ ಬಾತನ್ನು ಭಕ್ತರಿಗೆ ನೀಡಲಾಯಿತು. ಜತೆಗೆ ಬೆಟ್ಟದ ಬಸ್‌ ನಿಲ್ದಾಣದ ಬಳಿ ಹರಕೆ ಹೊತ್ತಿದ್ದ ಸಾರ್ವಜನಿಕರು ಆಟೋ ಮತ್ತು ಕಾರುಗಳ ಮೂಲಕ ಭಕ್ತರಿಗೆ ಪ್ರಸಾದ ವಿತರಿಸಿದರು.

ಜುಲೈ 24 ರಂದು ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಬೆಳಗ್ಗೆ 8ರಿಂದ ರಾತ್ರಿ 10 ಗಂಟೆಯವರೆಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಪ್ರಧಾನ ಅರ್ಚಕ ಡಾ. ಶಶಿಶೇಖರ್‌ ದೀಕ್ಷಿತ್‌ ತಿಳಿಸಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.