ಉಪ ಚುನಾವಣೆ ಬಳಿಕ ಬದಲಾವಣೆ ನಿರೀಕ್ಷಿತ: ದೇವೇಗೌಡ
Team Udayavani, Nov 27, 2019, 9:02 PM IST
ಮೈಸೂರು: ಮಹಾರಾಷ್ಟ್ರದಲ್ಲಾದ ದಿಢೀರ್ ರಾಜಕೀಯ ಬೆಳವಣಿಗೆಗಳು ಕರ್ನಾಟಕದ ರಾಜಕಾರಣಕ್ಕೂ ಅನ್ವಯವಾಗಬಹುದು. ಉಪ ಚುನಾವಣೆ ಫಲಿತಾಂಶದ ನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾರ್ಮಿಕವಾಗಿ ನುಡಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇದೇ ವೇಳೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹರಿಹಾಯ್ದವರು, ಅವರು ಎಷ್ಟು ದುಡ್ಡು ಸಾಗಿಸಿದರು ಯಾರೂ ಕೇಳುತ್ತಿಲ್ಲ. ಅದಕ್ಕೇ 15ಕ್ಕೆ 15 ಕ್ಷೇತ್ರವನ್ನೂ ಗೆಲ್ಲುತ್ತೇವೆ ಅನ್ನುತ್ತಿದ್ದಾರೆ. ಯಡಿಯೂರಪ್ಪ ಬಳಿ ಸರ್ಕಾರ ಇದೆ, ಗುಪ್ತವಾರ್ತೆ ದಳ ಇದೆ. ಬಿಜೆಪಿಯವರು ಎಲ್ಲೆಲ್ಲಿ ಹಿಂದೆ ಬಿದ್ದಿದ್ದಾರೆ ಎಂಬುದನ್ನು ಗುಪ್ತವಾರ್ತೆಯವರು ತಕ್ಷಣವೇ ತಿಳಿಸುತ್ತಿದ್ದಾರೆ.
ಆರ್ಥಿಕವಾಗಿಯೂ ಅವರಿಗೆ ಶಕ್ತಿ ಇದೆ. ಹೀಗಾಗಿ, 15 ಕ್ಷೇತ್ರವನ್ನೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲಾÉ ಅನರ್ಹ ಅಭ್ಯರ್ಥಿಗಳಿಗೂ ಎಷ್ಟು ಹಣ ಬೇಕೋ ಕೇಳಿ ಎಂದಿದ್ದಾರೆ. ಎಲ್ಲಾ ಕ್ಷೇತ್ರಗಳಿಗೂ ಮಂತ್ರಿಗಳನ್ನು ಬಿಟ್ಟು ನೀವು ಚುನಾವಣೆ ಮುಗಿಸಿಯೇ ಬರಬೇಕು ಎಂದು ಕಟ್ಟಪ್ಪಣೆ ಹೊರಡಿಸಿದ್ದಾರೆ.
ಮಂತ್ರಿಗಳಿಗೂ ಹಣ ಬೇಕಿದ್ದರೆ ಅಲ್ಲಿಂದಲೇ ಫೋನ್ ಮಾಡಿ ನಾನು ಕಳುಹಿಸುತ್ತೇನೆ ಎಂದಿದ್ದಾರೆ. ಅವರು ಎಷ್ಟು ಹಣ ಸಾಗಿಸಿದರೂ ಯಾರು ಕೇಳುವವರಿಲ್ಲ. ಇಷ್ಟೆಲ್ಲ ನಡೆಯುತ್ತಿರಬೇಕಾದರೆ ನಾವೇನು ಮಾಡೋಕಾಗುತ್ತೆ?. ಯಡಿಯೂರಪ್ಪ ಈ ಉಪ ಚುನಾವಣೆಯನ್ನು ದುಡ್ಡಿನಿಂದಲೇ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಎಚ್.ವಿಶ್ವನಾಥ್ ಅವರು ಓಟಿಗಾಗಿ ನನ್ನನ್ನೂ ಹೊಗಳ್ತಾರೆ, ಸಿದ್ದರಾಮಯ್ಯ ಅವರನ್ನೂ ಹೊಗಳ್ತಾರೆ. ವಿಶ್ವನಾಥ್ ಒಬ್ಬ ಸೀಸನ್x ಪೊಲಿಟಿಷಿಯನ್. ಹೃದಯದಲ್ಲಿ ಇರುವುದೇ ಬೇರೆ, ಜನರ ಮುಂದೆ ಹೇಳುವುದೇ ಬೇರೆ. ಈ ಸಂದರ್ಭದಲ್ಲಿ ನಮ್ಮಂಥ ನಾಯಕರನ್ನು ಟೀಕೆ ಮಾಡಿದರೆ ಅದು ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಅನ್ನುವುದು ವಿಶ್ವನಾಥ್ಗೆ ಗೊತ್ತಿದೆ. ಹೀಗಾಗಿ ಈ ರೀತಿ ಹೊಗಳಿಕೆಯ ಮಾತುಗಳನ್ನಾಡುತ್ತಿದ್ದಾರೆ.
– ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ