ಹುಣಸೂರು: ಚಿರತೆ ದಾಳಿಗೆ ಕರು ಬಲಿ
Team Udayavani, Sep 28, 2022, 12:57 PM IST
ಹುಣಸೂರು: ಮನೆ ಮುಂದೆ ಕಟ್ಟಿ ಹಾಕಿದ್ದ ಇಲಾತಿ ಕರುವನ್ನು ಚಿರತೆ ಕೊಂದು ಹಾಕಿರುವ ಘಟನೆ ತಾಲೂಕಿನ ಪೆಂಜಹಳ್ಳಿಯಲ್ಲಿ ಸೆ.27ರ ರಾತ್ರಿ ನಡೆದಿದೆ.
ಹನಗೋಡು ಹೋಬಳಿಯ ನಿವಾಸಿಯೊಬ್ಬರಿಗೆ ಸೇರಿದ ಇಲಾತಿ ಕರು ಇದಾಗಿದ್ದು, ಸಂಜೆ ಮನೆ ಬಳಿ ಹಸುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಹಸುಗಳ ಚೀರಾಟ ಕೇಳಿ ಹೊರ ಬಂದ ಸಂದರ್ಭ ಚಿರತೆ ಕಂಡು ಕೂಗಿಕೊಂಡಿದ್ದಾರೆ. ಕೂಗಾಟ ಕೇಳಿ ಕರುವಿನ ಕುತ್ತಿಗೆಯನ್ನು ಕಚ್ಚಿ ಎಳೆದೊಯ್ಯುಲು ಪ್ರಯತ್ನಿಸುತ್ತಿದ್ದ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ತಕ್ಷಣವೇ ಗ್ರಾಮಸ್ಥರು ಕರುವಿಗೆ ಉಪಚರಿಸಿದರಾದರೂ ಕರು ಸಾವನ್ನಪ್ಪಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್