ಮೃಗಾಲಯಕ್ಕೆ ನುಗ್ಗಿ ಮರವೇರಿ ಕುಳಿತ ಗಂಡು ಚಿರತೆ ಸೆರೆ!
Team Udayavani, Oct 26, 2017, 2:53 PM IST
ಮೈಸೂರು: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ ಚಿರತೆಯೊಂದು ಮರವೊಂದರ ಮೇಲೆ ಪ್ರತ್ಯಕ್ಷವಾಗಿ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಮರವೇರಿ ಕುಳಿತಿದ್ದ ಚಿರತೆಯನ್ನು ಕಂಡು ಪ್ರವಾಸಿಗರು ಆತಂಕಗೊಂಡಿದ್ದಾರೆ.ಕೂಡಲೇ ಮೃಗಾಲಯದ ಸಿಬಂದಿಗಳು ವೀಕ್ಷಕರನ್ನು ಹೊರಗಿನಿಂದ ಒಳ ಪ್ರವೇಶಿಸುವುದಕ್ಕೆ ತಡೆ ಒಡ್ಡಿ ಕಾರ್ಯಾಚರಣೆಗೆ ಸಹಕರಿಸಿದರು.
ಅರಣ್ಯ ಸಿಬಂದಿಗಳು ತಕ್ಷಣ ಕಾರ್ಯಾಚರಣೆಗಿಳಿದು ಅರಿವಳಿಕೆ ಚಚ್ಚು ಮದ್ದು ನೀಡಿ ಒಂದೂವರೆ ವರ್ಷದ ಗಂಡು ಚಿರತೆಯನ್ನು ಸೆರೆ ಹಿಡಿದಿದ್ದಾರೆ.
ಮೃಗಾಲಯದಲ್ಲಿರುವ ಚಿರತೆಗಳೆಲ್ಲಾ ಬೋನಿನೊಳಗೆ ಇದ್ದು, ಈ ಚಿರತೆ ಹೊರಗಿನಿಂದ ಬಂದಿದೆ ಎಂದು ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಚಾಮುಂಡಿ ಬೆಟ್ಟ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ ಇದಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ