ಕೆಮಿಕಲ್‌ ತ್ಯಾಜ್ಯಕ್ಕೆ ಬಾಲಕ ಬಲಿ 


Team Udayavani, Apr 17, 2017, 9:31 AM IST

17-BIG-2.jpg

ಮೈಸೂರು: ಕಾರ್ಖಾನೆಗಳು ಸುರಿದಿದ್ದ ರಾಸಾಯನಿಕ ತ್ಯಾಜ್ಯದಲ್ಲಿ ಸಿಲುಕಿದ ಬಾಲಕ ತೀವ್ರ ಸುಟ್ಟಗಾಯಗಳಿಂದ ಮೃತಪಟ್ಟಿದ್ದು, ಮತ್ತೂಬ್ಬ ಬಾಲಕ ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ತಾಲೂಕಿನ ಕ್ಯಾದನಹಳ್ಳಿಯಲ್ಲಿ ನಡೆದಿದೆ. ಈ ಬಾಲಕನ ಸ್ಥಿತಿಯೂ ಚಿಂತಾಜನಕವಾಗಿದೆ.

ಕ್ಯಾದನಹಳ್ಳಿಯ ಹರ್ಷಲ್‌ (14) ಮೃತ ವಿದ್ಯಾರ್ಥಿ. ಶನಿವಾರ ಬೆಳಗ್ಗೆ ಸ್ನೇಹಿತ ಮಂಜುನಾಥ್‌ ಜತೆಗೆ ಗ್ರಾಮದ ಖಾಸಗಿ ಜಮೀನಿನಲ್ಲಿ ಬಹಿರ್ದೆಸೆಗೆ ತೆರಳಿದ್ದ. ಈ ಸಂದರ್ಭ ಕಾರ್ಖಾನೆಗಳು ಸುರಿದಿದ್ದ ರಾಸಾಯನಿಕ ತ್ಯಾಜ್ಯದಲ್ಲಿ ಸಿಲುಕಿದ ಆತ ಶೇ.70ರಷ್ಟು ಸುಟ್ಟಗಾಯಗಳಿಗೆ ಒಳಗಾಗಿ ಮೃತಪಟ್ಟಿದ್ದಾನೆ. 

ಇಬ್ಬರು ಬಾಲಕರೂ ಈ ಜಮೀನಿನಲ್ಲಿ ಬಹಿರ್ದೆಸೆಗೆ ಕುಳಿತಾಗ ಕಾಲು ಬಿಸಿಯಾದ ಅನುಭವವಾಗಿದೆ. ಕೂಡಲೇ ಓಡಿಬರಲು ಯತ್ನಿಸಿದ್ದಾರೆ, ಆದರೆ ಮರಳಿನೊಳಗೆ ಮಂಜುನಾಥ್‌ನನ್ನು ಸೆಳೆದುಕೊಳ್ಳುತ್ತಿದ್ದು
ದನ್ನು ಕಂಡ ಹರ್ಷಲ್‌ ಸ್ನೇಹಿತನನ್ನು ರಕ್ಷಿಸಿ ತಾನು ಮರಳಿನೊಳಗೆ ಸಿಲುಕಿಕೊಂಡಿದ್ದಾನೆ. ಸ್ಥಳೀಯ ದಾರಿಹೋಕರು ಇದನ್ನು ಕಂಡು ಹರ್ಷಲ್‌ನನ್ನು ಅಲ್ಲಿಂದ ಹೊರತೆಗೆದರಾದರೂ ಅಷ್ಟರಲ್ಲಿ ಆತನ ದೇಹ ಶೇ.70ರಷ್ಟು ಸುಟ್ಟು ಹೋಗಿತ್ತು. ಕೂಡಲೇ ನಗರದ ಕೆ.ಆರ್‌. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫ‌ಲಕಾರಿಯಾಗದೆ ಭಾನುವಾರ ಸಂಜೆ ಬಾಲಕ ಮೃತಪಟ್ಟಿದ್ದಾನೆ. ಸುಟ್ಟಗಾಯಗಳಿಗೆ
ಒಳಗಾಗಿರುವ ಮತ್ತೂಬ್ಬ ಬಾಲಕ ಮಂಜುನಾಥ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾನೆ. ಇವನ ಸ್ಥಿತಿಯೂ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾತ್ರೋರಾತ್ರಿ ತ್ಯಾಜ್ಯ: ಕುಂಬಾರ ಕೊಪ್ಪಲಿನ ಸೋಮಣ್ಣ ಎಂಬುವರಿಗೆ ಸೇರಿದ ಈ ಜಮೀನು ಆರ್‌ಬಿಐ ನೋಟು ಮುದ್ರಣ ಘಟಕದ ಹಿಂಭಾಗದಲ್ಲಿದೆ. ಇಲ್ಲಿ ಕಾರ್ಖಾನೆಗಳು ರಾತ್ರೋರಾತ್ರಿ ರಾಸಾಯನಿಕ ತ್ಯಾಜ್ಯವನ್ನು ಸುರಿಯುತ್ತವೆ. ಹೀಗಾಗಿ ಇಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಳ್ಳುತ್ತದೆ. ಜತೆಗೆ ಘಟನೆ ನಡೆದ ಜಾಗದಲ್ಲಿ ಪೆಟ್ರೋಲ್‌ ಸುರಿದರೆ ಧಗ ಧಗನೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು, ಲಾವಾರಸದಂತೆ ಗೋಚರವಾ ಗುತ್ತದೆ ಎಂದು ಬೆಲವತ್ತ ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತಾರೆ.

ಪ್ರತಿಭಟನೆ ಎಚ್ಚರಿಕೆ: ವಿಷಯ ತಿಳಿದ ಕೂಡಲೇ ಮೈಸೂರು ತಾಲೂಕು ಕಂದಾಯ ಇಲಾಖೆ ಅಧಿಕಾರಿಗಳು ಕೆ.ಆರ್‌.ಆಸ್ಪತ್ರೆಗೆ ತೆರಳಿ ಬಾಲಕನ ಪೋಷಕರಿಂದ ಮಾಹಿತಿ ಪಡೆದಿದ್ದಾರೆ. ಆದರೆ, ಬೆಲವತ್ತ ಗ್ರಾಮದ ಸುತ್ತಮುತ್ತ ಕೃಷಿ ಜಮೀನಿನಲ್ಲಿ ರಾಸಾಯನಿಕ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಮೇಟಗಳ್ಳಿ ಪೊಲೀಸ್‌ ಠಾಣೆಗೆ ಸಾಕಷ್ಟು ಬಾರಿ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಈಗ ಬಾಲಕ ಮೃತಪಟ್ಟ ನಂತರ ಈ ಜಾಗಕ್ಕೆ ನಿಷೇಧಿತ ಪ್ರದೇಶ ಎಂದು ನಾಮಫ‌ಲಕ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಬಾಲಕನ ಸಾವಿಗೆ ನ್ಯಾಯ ದೊರಕಿಸಿಕೊಡದಿದ್ದಲ್ಲಿ ಸೋಮವಾರ ಕೆ.ಆರ್‌. ಆಸ್ಪತ್ರೆ ವೃತ್ತದಲ್ಲಿ ಬಾಲಕನ ಮೃತ ದೇಹವನ್ನಿಟ್ಟು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. 

ಪ್ರಕರಣ ಮಾಲಿನ್ಯ ನಿಯಂತ್ರಣ ಮಂಡಳಿ ವ್ಯಾಪ್ತಿಗೆ ಬರುತ್ತೆ. ಆದರೂ ವಿಷಯ ತಿಳಿದ ಕೂಡಲೇ ಗ್ರಾಮಲೆಕ್ಕಿಗ ಮತ್ತು ರಾಜಸ್ವ ನಿರೀಕ್ಷಕರನ್ನು ಸ್ಥಳಕ್ಕೆ ಕಳುಹಿಸಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರದವರು ಈ ಬಗ್ಗೆ ಗಮನಹರಿಸಬೇಕು. 
ರಮೇಶ್ ಬಾಬು ತಹಶೀಲ್ದಾರ್,ಮೈಸೂರು ತಾಲೂಕು

ಮೈಸೂರಿನ ಬೆಲವತ್ತ ಗ್ರಾಮದಲ್ಲಿ ಭೂಮಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗಮನಕ್ಕೆ ಬಂದಿದೆ. ಆದರೆ, ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ತಜ್ಞರ ತಂಡವನ್ನು ಕಳುಹಿಸಿದ್ದು, ಮಾದರಿ ಸಂಗ್ರಹಿಸಲು ಸೂಚಿಸಲಾಗಿದೆ. ತಂಡದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಕೇಂದ್ರ ಕಚೇರಿಯ ಇಬ್ಬರು ತಜ್ಞರು, ಕಾರ್ಖಾನೆಗಳ ತಜ್ಞರು, ಮೈಸೂರಿನ ಸ್ಥಳೀಯ ತಜ್ಞರು ಇರುತ್ತಾರೆ. ಮಾದರಿಯನ್ನು ಪರೀಕ್ಷೆಗೊಳಪಡಿಸಿದ ನಂತರ ನಿಖರ ಕಾರಣ ತಿಳಿಯಲಿದೆ.
ಲಕ್ಷ್ಮಣ್, ಅಧ್ಯಕ್ಷರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.