ಗರ್ಭಿಣಿಯರಿಗೆ ಹುಳು ಹಿಡಿದ ಕಡ್ಲೆಮಿಠಾಯಿ


Team Udayavani, Sep 21, 2019, 3:00 AM IST

garbhiniyar

ನಂಜನಗೂಡು: ಗರ್ಭಿಣಿಯರಿಗೆ ಸರ್ಕಾರ ವಿತರಿಸುತ್ತಿರುವ ಕಡ್ಲೆಕಾಯಿ ಮಿಠಾಯಿ ಹುಳು ಹಿಡಿದಿದ್ದು, ಅದನ್ನು ತಿನ್ನಲು ಯೋಗ್ಯವೇ ಎಂದು ತಾಪಂ ಸದಸ್ಯ ಸಿದ್ದರಾಜೇಗೌಡ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ತಾಪಂ ಅಧ್ಯಕ್ಷ ಬಿ.ಎಸ್‌. ಮಹದೇವಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಹಿಳಾ ಹಾಗೂ ಮಕ್ಕಳ ಇಲಾಖೆಯ ಲೋಪದೋಷಗಳನ್ನು ಸದಸ್ಯರು ತೆರದಿಟ್ಟರು.

ಈ ವಿಷಯ ಪ್ರಾಸ್ತಪಿಸಿದ ಸದಸ್ಯ ಸಿದ್ದರಾಜೇಗೌಡ, ಮಹಿಳೆಯರಲ್ಲಿ ಪೌಷ್ಟಿಕಾಂಶ ಕಡಿಮೆಯಾಗಬಾರದು ಎಂಬ ಸದುದ್ದೇಶದಿಂದ ಸರ್ಕಾರ ಪೌಷ್ಟಿಕ ಆಹಾರ ನೀಡುತ್ತಿದ್ದು, ಆದರೆ, ಹುಳು ಹಿಡಿದ ಕಡ್ಲೆ ಕಾಯಿ ಮಿಠಾಯಿ ನೀಡಲಾಗುತ್ತಿದೆ ಎಂದು ಕಿಡಿಕಾರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಡಿಪಿಒಗಳಾದ ಗೀತಾ ಹಾಗೂ ಲಕ್ಷ್ಮೀ, ಇವುಗಳನ್ನು ನಾವು ಖರೀದಿಸುವುದಿಲ್ಲ. ಅಂಗನವಾಡಿಗಳ ಆಹಾರವನ್ನು ಸಂಸ್ಕರಿಸಲು ಪ್ರತ್ಯೇಕ ಸಂಸ್ಥೆ ಇದೆ ಎಂದು ಸಮಜಾಯಶಿ ನೀಡಲು ಪ್ರಯತ್ನಿಸಿದರು. ಆದರೆ, ಇವರ ವಾದಕ್ಕೆ ಒಪ್ಪದ ಸದಸ್ಯರು, ಹುಳು ಹಿಡಿದ ಆಹಾರ ಪದಾರ್ಥ ವಿತರಣೆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆಸ್ಪತ್ರೆ ಬಾಗಿಲಿಗೆ ದೀಪವಿಲ್ಲ: ಹುಲ್ಲಹಳ್ಳಿಯ ಸಾರ್ವಜನಿಕ ಆಸ್ಪತ್ರೆಯ ಸುತ್ತಮುತ್ತ ಕತ್ತಲು ಆವರಿಸಿದ್ದು, ದೀಪ ಅಳವಡಿಸುವಂತೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸದಸ್ಯ ಶಿವಣ್ಣ ಅವಲತ್ತುಕೊಂಡರು. ಗ್ರಾಮೀಣ ಆಸ್ಪತ್ರೆಗೆ ದೀಪ ಅಳವಡಿಸುವುದು ತಾಪಂ ಜವಾಬ್ದಾರಿಯಲ್ಲ. ಈ ಕುರಿತು ಗ್ರಾಮ ಪಂಚಾಯಿತಿಗೆ ಆದೇಶ ನೀಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇ ಅರಸು ಉತ್ತರಿಸಿದರು.

3 ತಿಂಗಳ ಬೆಳೆ ಪರಿಶೀಲಿಸಲು 6 ತಿಂಗಳು: ಸದಸ್ಯೆ ಸವಿತಾ ರಂಗನಾಥ ಮಾತನಾಡಿ, ತಾಲೂಕಿನಾದ್ಯಂತ ವಿವಿಧ‌ ಬೆಳೆಗಳು ಹಾನಿಯಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿಲ್ಲ. ಅಲ್ಪಾವಧಿ ಮೂರು ತಿಂಗಳ ಬೆಳೆಯನ್ನು ಪರೀಕ್ಷಿಸಲು ಆರು ತಿಂಗಳು ಸಮಯ ತೆಗೆದುಕೊಳ್ಳುತ್ತಾರೆ. ಹೀಗಾದರೆ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸಕಾಲದಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಹಾಸ್ಟೆಲ್‌ಗ‌ಳಲ್ಲಿ ರ್ಯಾಗಿಂಗ್‌: ತಾಲೂಕಿನ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ರ್ಯಾಗಿಂಗ್‌ ನಡೆಯುತ್ತಿದೆ. ಅದರೆ, ಸಂಬಂಧಿಸಿದ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಹಾಸ್ಟೆಲ್‌ನಲ್ಲಿ ರಾತ್ರಿ ವೇಳೆ ವಾರ್ಡನ್‌ ಇರುವುದಿಲ್ಲ ಎಂದು ಸದಸ್ಯರಾದ ಸಿ.ಎಂ. ಮಹದೇವು, ಶಿವಣ್ಣ, ರಾಮು, ಸಿದ್ದರಾಜೇಗೌಡ ಮತ್ತಿತರರು ದೂರಿದರು. ಮುಂದುವರಿದು, ಅನೇಕ ವಿದ್ಯಾರ್ಥಿಗಳು ರ್ಯಾಗಿಂಗ್‌ನಿಂದ ಹಾಸ್ಟೆಲ್‌ ತೊರೆಯಲಾರಂಭಿಸಿದ್ದಾರೆ ಎಂದು ತಿಳಿಸಿದರು.

ಇದಕ್ಕೆ ಉತ್ತರಿಸಿದ ಬಿಸಿಎಂ ಅಧಿಕಾರಿ ಸಹದೇವು, ವಸತಿ ನಿಲಯಗಳಲ್ಲಿ ವಾರ್ಡನ್‌ ಗೈರು ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದರಲ್ಲದೇ ರ್ಯಾಗಿಂಗ್‌ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಹೇಳಿದಾಗ ಸದಸ್ಯರು ಮಧ್ಯಪ್ರವೇಶಿಸಿ, ಈ ವಿಷಯ ಗೊತ್ತಿಲ್ಲ ಎನ್ನುವುದು ನಿಮ್ಮ ದೌರ್ಬಲ್ಯ. ನೀವೇ ಅತ್ತ ಸುಳಿಯುತ್ತಿಲ್ಲ ಎಂದು ಏರುಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಧ್ವನಿಗೂಡಿಸಿದ ಉಪಾಧ್ಯಕ್ಷ ಗೋಂದರಾಜು, ನಿಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿ, ಇಲ್ಲದಿದ್ದರೆ ಬೇರೆಡೆ ಹೋಗಿ ಎಂದು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.