ದೋಣಿ ಸ್ಥಗಿತಕ್ಕೆ ಮಕ್ಕಳ ಶಿಕ್ಷಣ ಕೂಡ ಸ್ಥಗಿತ..!


Team Udayavani, Nov 25, 2021, 12:06 PM IST

ಮೈಸೂರು ದೋಣಿ ಸಮಸ್ಯೆ

ಎಚ್‌.ಡಿ.ಕೋಟೆ: ತಾಲೂಕಿನ ಕೇರಳ ಗಡಿ ಭಾಗದ ಡಿ.ಬಿ.ಕುಪ್ಪೆಯಲ್ಲಿ ಕಪಿಲಾ ನದಿ ಮೂಲಕ ಜನರನ್ನು ದಾಟಿಸುತ್ತಿದ್ದ ದೋಣಿಗಳ ಸಂಚಾರ ಸ್ಥಗಿತಗೊಂಡ ಕಾರಣ ಶಿಕ್ಷಣ ಕ್ಕಾಗಿ ಕೇರಳಕ್ಕೆ ಹೋಗುತ್ತಿದ್ದ 25ಕ್ಕೂ ಅಧಿಕ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ. ತಾಲೂಕಿನ ಡಿ.ಬಿ.ಕುಪ್ಪೆ ಕೇರಳ- ಕರ್ನಾಟಕ ಗಡಿಭಾಗ.

ಕೇರಳದಿಂದ ಬಹುತೇಕ ಮಂದಿ ಇಲ್ಲಿಗೆ ಆಗಮಿಸಿ ನೆಲೆಯೂರಿದ್ದಾರೆ. ಕೋಟೆ ತಾಲೂಕಿನ ಗಡಿಯಲ್ಲಿ ನೆಲೆಯೂರಿದ್ದರೂ ಭವಿಷ್ಯದ ಹಿತದೃಷ್ಟಿಯಿಂದ ತಮ್ಮ ಮಕ್ಕಳಿಗೆ ಕೇರಳದಲ್ಲಿ ಪ್ರಾಥಮಿಕ ಶಿಕ್ಷಣ ಕೊಡಿಸುತ್ತಿದ್ದಾರೆ. ಡಿ.ಬಿ.ಕುಪ್ಪೆ ಹಾಗೂ ಕೇರಳ ನಡುವೆ ಕಪಿಲಾ ನದಿ ಹರಿಯುತ್ತಿದ್ದು, ಡಿ.ಬಿ.ಕಪ್ಪೆಯಿಂದ ದೋಣಿ ಮೂಲಕ ಕೇವಲ 300 ಮೀಟರ್‌ ಹಾದು ಹೋದರೆ ಕೇರಳದ ಪೆರಿಯಕಲ್ಲೂರು ತಲುಪಬಹುದು.

ಹೀಗಾಗಿ ಡಿ.ಬಿ.ಕುಪ್ಪೆಯಲ್ಲಿ ನೆಲೆಸಿರುವ ಕೇರಳಿಗರು ಪ್ರತಿದಿನ ಮಕ್ಕಳನ್ನು ಕಲಿಕೆಗಾಗಿ ಪೆರಿಯಕಲ್ಲೂರಿಗೆ ಕಳುಹಿಸುವುದು ಹಾಗೂ ಸಾರ್ವಜನಿಕರೂ ಕೂಡ ದೋಣಿ ಮೂಲಕ ನದಿ ದಾಟಿ ಕೇರಳ ತಲುಪುವುದು ಹಿಂದಿನಿಂದಲೂ ನಡೆದು ಬಂದಿದೆ. ಆದರೆ, ಇತ್ತೀಚಿಗೆ ಕೇರಳದಲ್ಲಿ ಕೊರೊನಾ ಹಿನ್ನೆಲೆ‌ ದೋಣಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಸೋಂಕು ಕ್ಷೀಣಿಸಿರುವ ಕಾರಣ ದೋಣಿ ಸಂಚಾರ ಪುನಾರಂಭಿಸಬಹುದು.

ಆದರೆ, ದೋಣಿಗಳಿಗೆ ವಿಮೆ ವ್ಯವಸ್ಥೆ ಮಾಡಿಸಿಲ್ಲದ ಕಾರಣ ಸಂಚಾರಕ್ಕೆ ಅನುಮತಿ ನೀಡಿಲ್ಲ. ದೋಣಿಯಲ್ಲಿ ಶಾಲಾ ಮಕ್ಕಳನ್ನು ಕಪಿಲಾ ನದಿ ದಾಟಿಸುವ ದೋಣಿಗಳಿಗೆ ವಿಮೆಯೇ ಇಲ್ಲ, ನದಿ ದಾಟಿಸಬೇಕಾದ ದೋಣಿಗಳಿಗೆ ವಿಮೆ ಮಾಡಿಸ ಬೇಕು. ಇಲ್ಲದಿದ್ದರೆ ದೋಣಿ ಚಾಲನೆ ಮಾಡುವುದಕ್ಕೆ ಅನುಮತಿ ನೀಡಬಾರದೆಂದು ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆಯಲ್ಲಿ ದೋಣಿಗಳ ಸಂಚಾರ ಸ್ಥಗಿತವಾಗಿದೆ. ಈ ನಡುವೆ ಶಾಲೆಗಳು ಶುರುವಾಗಿ ತಿಂಗಳುಗಳೇ ಉರುಳುತ್ತಿದ್ದರೂ 6ರಿಂದ 10ನೇ ತರಗತಿ ಕಲಿಕೆಗೆ ಕೇರಳಕ್ಕೆ ಹೋಗುತ್ತಿದ್ದ 25ಕ್ಕೂ ಅಧಿಕ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ:- ಬೆಲೆ ಏರಿದ್ರೂ ಕಾರ್ಮಿಕರ ದಿನಗೂಲಿ ಏರಿಲ್ಲ

ದೋಣಿ ವ್ಯವಸ್ಥೆ ಇಲ್ಲದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. 300 ಮೀಟರ್‌ ನದಿ ದಾಟದೇ ಬದಲಿ ರಸ್ತೆ ಮಾರ್ಗವಾಗಿ ಪೆರಿಯಕಲ್ಲೂರಿಗೆ ಹೋಗಬೇಕಾದರೆ ಬರೋಬ್ಬರಿ 39 ಕಿ.ಮೀ. ಸಂಚರಿಸಬೇಕು. ಕಳೆದ 2 ವರ್ಷಗಳಿಂದ ಕೊರೊನಾ ಸೋಂಕಿನ ಭೀತಿಯಿಂದ ಮಕ್ಕಳು ಕಲಿಕೆಯಿಂದ ಹಿಂದೆ ಸರಿದಿದ್ದಾರೆ. ಈಗ ಮತ್ತೆ 1 ವರ್ಷ ಶಿಕ್ಷಣದಿಂದ ವಂಚಿತರಾಗುವುದು ಎಷ್ಟು ಸರಿ. ಈಗ ಪ್ರಯಾಣಿಕರನ್ನು ಸಾಗಿಸುವ ದೋಣಿಗಳಿಗೆ ವಿಮೆ ಇಲ್ಲ.

ಹೀಗಾಗಿ ಜೀವಕ್ಕೆ ರಕ್ಷಣೆ ಇಲ್ಲ ಎನ್ನುವುದಾದರೆ ಬಳ್ಳೆ, ಗುಂಡತ್ತೂರು ಹಾಗೂ ಉದೂºರು ಅರಣ್ಯ ಇಲಾಖೆಗೆ ಸೇರಿದ 3 ಬೋಟುಗಳು ಕೆಲಸವಿಲ್ಲದೇ ನಿಲುಗಡೆ ಮಾಡಲಾಗಿದೆ. ಅದೇ ದೋಣಿಗಳನ್ನು ಬೆಳಗ್ಗೆ ಮತ್ತು ಸಂಜೆ ಕಳುಹಿಸಿಕೊಟ್ಟರೆ ಮಕ್ಕಳ ಕಲಿಕೆಗೆ ಅನುಕೂಲವಾಗುತ್ತದೆ. ಅಗತ್ಯ ಎನಿಸಿದರೆ ಪೋಷಕರು ಬೋಟ್‌ಗಳಿಗೆ ಇಂತಿಷ್ಟು ಹಣ ಪಾವತಿಸಲು ಕೂಡ ಸಿದ್ಧರಿದ್ದಾರೆ.

ಬೆಳಗ್ಗೆ, ಸಂಜೆ ಸಂಚರಿಸಲಿ: ಕಪಿಲಾ ನದಿ ದಾಟಿಸುವ ಎಲ್ಲಾ ದೋಣಿಗಳ ವಿಮೆ ಚಾಲನೆಯಲ್ಲಿಲ್ಲ, ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಕನಿಷ್ಠ ಪಕ್ಷ ಬೆಳಗ್ಗೆ ಮತ್ತು ಸಂಜೆ ಶಾಲೆ ವೇಳೆಗೆ ದೋಣಿ ಸಂಚಾರಕ್ಕೆ ಅನುವು ಮಾಡಿಕೊಡುವುದು ಒಳಿತು ಎಂದು ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ತಿರುಪತಿ ತಿಳಿಸಿದ್ದಾರೆ.

 ದೋಣಿಗೆ ವಿಮೆ ಮಾಡಿಸಿ ಸಂಚರಿಸಲಿ: ತಹಶೀಲ್ದಾರ್‌ ಕಪಿಲಾ ನದಿ ದಾಟುವ ದೋಣಿಗಳಿಗೆ ವಿಮೆ ಇಲ್ಲ, ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ದೋಣಿಗಳಲ್ಲಿ ಸಾಗುವಾಗ ಅವಘಡ ಸಂಭವಿಸಿದರೆ ಪರಿಹಾರವೂ ದೊರೆಯುವುದಿಲ್ಲ ಎನ್ನುವ ಕಾರಣದಿಂದ ದೋಣಿಗಳಿಗೆ ವಿಮೆ ಮಾಡಿಸಿ ಸಂಚರಿಸಲಿ ಎಂದು ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ದೋಣಿ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಹಶೀಲ್ದಾರ್‌ ನರಗುಂದ್‌ ತಿಳಿಸಿದ್ದಾರೆ.

ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.